ಅಕಾಲಿಕ ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ
Team Udayavani, Mar 18, 2023, 3:03 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಸಂಜೆ, ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಸಿಲುಕಿ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ತಾಲೂಕಿನ ಮಂಡಿಕಲ್ ಹೋಬಳಿ ಕಮ್ಮಗುಟ್ಟಹಳ್ಳಿ ಪಂಚಾಯ್ತಿ ವ್ಯಾಪ್ತಿಯ ರೇಣುಮಾಕಲಹಳ್ಳಿ ಗ್ರಾಮದ ಸುತ್ತಮುತ್ತ ಪ್ರದೇಶಗಳಲ್ಲಿ ನಡೆದಿದೆ.
ರೇಣುಮಾಕಲಹಳ್ಳಿ ಗ್ರಾಮದ ರಾಮ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಬೆಳೆದಿದ್ದ ದ್ರಾಕ್ಷಿ ಫಸಲು ಆಲಿಕಲ್ಲು ಮಳೆಗೆ ನಾಶವಾಗಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಅಲ್ಲದೆ, ಸಮೀಪದ ಬೊಮ್ಮನಹಳ್ಳಿ ಗ್ರಾಮದ ಬೆರಾರೆಡ್ಡಿ ಎಂಬುವವರಿಗೆ ಸೇರಿದ ಜೋಳದ ಬೆಳೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ನೆಲಕ್ಕುರುಳಿದೆ. ಇನ್ನೂ ಬೊಮ್ಮಗಾನಹಳ್ಳಿಯ ಮುನಿಕೃಷ್ಣಪ್ಪ ಅವರ ಚಪ್ಪರದ ಬೀನ್ಸ್ ನೆಲಕಚ್ಚಿದೆ.
ಇಷ್ಟೇ ಅಲ್ಲದೆ, ಸುತ್ತಮುತ್ತಲಿನ ಗ್ರಾಮಗಳ ಬಳಿ ರೈತರ ಬೆಳೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಕೂಡಲೆ ರೈತರ ನೆರವಿಗೆ ಸರ್ಕಾರ ದಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ಆಲಿಕಲ್ಲು ಮಳೆಗೆ ಟೊಮೆಟೋ ಬೆಳೆ ನಷ್ಟ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಯರ್ರಲಕ್ಕೇನಹಳ್ಳಿ ಗ್ರಾಮದ ಸುತ್ತಮುತ್ತ ಗುರುವಾರ ಸಂಜೆ ಹಾಗೂ ರಾತ್ರಿ ವೇಳೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದ ಟೊಮೆಟೋ ಬೆಳೆ ನಷ್ಟವಾಗಿದೆ. ಯರಲಕ್ಕೇನಹಳ್ಳಿ ಗ್ರಾಮದ ದೊಡ್ಡ ಕುರಿಯಪ್ಪ, ಆದಿಲಕ್ಷ್ಮಮ್ಮ ಸೇರಿ ಹಲವು ರೈತರು ಬೆಳೆದಿದ್ದ ಟೊಮೊಟೋ ಬೆಳೆ ಆಲಿಕಲ್ಲು ಬಿದ್ದು ನಷ್ಟ ಉಂಟಾಗಿದೆ. ಲಕ್ಷಾಂತರ ರೂ. ಬಂಡವಾಳ ಹಾಕಿ ಬೆಳೆದಿದ್ದ ಬೆಳೆ ಹವಮಾನ ವೈಪರೀತ್ಯಕ್ಕೆ ಸಿಲುಕಿ ನಾಶವಾಗಿದೆ. ಇದರಿಂದ ಸಾಲ ಸೋಲ ಮಾಡಿದ್ದ ರೈತನಿಗೆ ದಿಕ್ಕು ತೋಚದಂತೆ ಆಗಿದೆ. ತಲೆ ಮೇಲೆ ಕೈ ಇಟ್ಟುಕೊಂಡು ರೋದಿಸುವಂತಾಗಿದೆ.
ಹೂವಿನ ಬೆಳೆ ನಾಶ: ಗುರುವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಸಿಲುಕಿ ಲಕ್ಷಾಂತರ ರೂ. ಮೌಲ್ಯದ ಹೂವಿನ ಬೆಳೆ ನಾಶವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಆರ್.ಕಂಬಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ರೈತ ರಾಮಕೃಷ್ಣಾರೆಡ್ಡಿ ಲಕ್ಷಾಂತರ ರೂ. ಬಂಡವಾಳ ಹಾಕಿ ಸೇವಂತಿಗೆ ಹೂ. ಬೆಳೆ ಬೆಳೆದು ಯುಗಾದಿ ಹಬ್ಬಕ್ಕೆ ಉತ್ತಮ ಹೂವಿನ ಫಸಲು ಬಂದಿತ್ತು. ಹೂ ಮಾರಿ ಉತ್ತಮ ಲಾಭಗಳಿಸಬಹುದು ಎಂದು ನಿರೀಕ್ಷೆಯಲ್ಲಿ ಇದ್ದರು.
ಆದರೆ, ಆಲಿಕಲ್ಲು ಮಳೆಗೆ ಹೂವಿನ ಬೆಳೆ ನಾಶವಾಗಿದೆ. ಅಷ್ಟೆ ಅಲ್ಲದೆ, ಸಮೀಪದ ಮತ್ತೋರ್ವ ರೈತ ಕೆ.ಸಿ.ರಾಮಕೃಷ್ಣಾರೆಡ್ಡಿ ಬೆಳೆದಿದ್ದ ಗುಲಾಬಿ ಬೆಳೆ, ಮಂಜುಳಮ್ಮ ಎನ್ನುವವರು ಬೆಳೆದಿದ್ದ ಬೀನ್ಸ್ ಬೆಳೆ ಸಹ ನಾಶವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ನಷ್ಟ ಪರಿಹಾರ ಕೊಡಿಸುವಂತೆ ರೈತರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್, ಬ್ಯಾನರ್ ತೆರವು!
H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ
LokSabha Election: ಕ್ಲೈಮ್ಯಾಕ್ಸ್ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!
Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್
Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ