ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಧಿಡೀರ್ ಶೋಧ ಕಾರ್ಯ
Team Udayavani, Aug 30, 2019, 3:46 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಗ್ರರ ದಾಳಿ ಭೀತಿಯ ಬೆನ್ನಲ್ಲೇ ಜಿಲ್ಲೆಯ ಐತಿಹಾಸಿಕ ನಂದಿಗಿರಿ ಧಾಮದಲ್ಲಿ ಶುಕ್ರವಾರ ಶಸ್ತ್ರಸಜ್ಜಿತ ಪೋಲಿಸರ ತಂಡ ಶೋಧ ಕಾರ್ಯ ನಡೆಸಿದೆ.
ರಾಜ್ಯದಲ್ಲಿ ಉಗ್ರರ ದಾಳಿ ಭೀತಿ ಇರುವ ಬಗ್ಗೆ ಕೇಂದ್ರದ ಗುಪ್ತಚರ ಇಲಾಖೆಯ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಬಾಂಬ್ ನಿಷ್ಕ್ರಿಯ ತಂಡ, ಶ್ವಾನ ದಳ ತಂಡಗಳು ತೆರಳಿ ತೀವ್ರ ತಪಾಸಣೆ ನಡೆಸುತ್ತಿರುವ ಪೊಲೀಸರು, ಜಿಲ್ಲೆಯ ವಿಶ್ವ ವಿಖ್ಯಾತ ಪ್ರವಾಸಿ ತಾಣವಾದ ನಂದಿಗಿರಿ ಧಾಮದಲ್ಲಿ ತಪಾಸಣೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲಾಧ್ಯಂತ ಹೈ ಅಲರ್ಟ್ ಘೋಷಿಸಿದ್ದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಂತೋಷ್ ಬಾಬು. ಕೆ ರವರ ಆದೇಶದಂತೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಉಪಾಧೀಕ್ಷಕರಾದ ಎನ್. ಎಲ್. ನಾಗೇಂದ್ರ ಪ್ರಸಾದ್ ರವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ವಿಶೇಷ ಡಿ -ಸ್ವಾಟ್ ತರಬೇತಿಯನ್ನು ಪಡೆದಿರುವ ತಂಡ ನಂದಿಗಿರಿಧಾಮದಲ್ಲಿ ತಪಾಸಣೆ ನಡೆಸಿತು.
ಗಿರಿಧಾಮದಲ್ಲಿ ಅನುಮಾನಸ್ಪದ ವ್ಯಕ್ತಿಗಳನ್ನು ಮತ್ತು ವಾಹನಗಳನ್ನು ತಪಾಸಣೆ ನಡೆಸುವ ಕಾರ್ಯದಲ್ಲಿ ನಿರತವಾಗಿದೆ. ಶನಿವಾರ, ಭಾನುವಾರ ವೀಕೆಂಡ್ ನಲ್ಲಿ ನಂದಿಗಿರಿಧಾಮಕ್ಕೆ ದೇಶ, ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಲಿದ್ದಾರೆ. ಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ತಪಾಸಣೆ ನಡೆಸಿಯೇ ಒಳ ಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ