ಹುದುಗೂರು ಗ್ರಾಪಂಗೆ ವಿಜಯಲಕ್ಷ್ಮೀ ಅಧ್ಯಕ್ಷೆ
Team Udayavani, Feb 15, 2021, 8:01 PM IST
ಗೌರಿಬಿದನೂರು: ಗ್ರಾಪಂಗಳ ಅಧಿಕಾರವು ಪಾವಿತ್ರ್ಯ ಹೊಂದಿದ್ದು, ಸಮರ್ಪಕ ನಿರ್ವಹಣೆ ಮಾಡುವ ಮೂಲಕ ಉತ್ತಮ ಸೇವೆ ಸಲ್ಲಿಸಬೇಕು ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.
ತಾಲೂಕಿನ ಹುದುಗೂರು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಲಕ್ಷ್ಮೀ ಹಾಗೂ ಉಪಾಧ್ಯಕ್ಷ ಬಾಲಪ್ಪ ಅವರನ್ನು ಅಭಿನಂದಿಸಿ ಮಾತನಾಡಿ, ತಾಲೂಕಿನಲ್ಲಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮತ್ತು ಮುಖಂಡರು ಸಾಕಷ್ಟು ಶ್ರಮಿಸಿದ್ದರಿಂಹೆಚ್ಚಿನ ಪಂಚಾಯಿತಿಗಳಲ್ಲಿ ಗದ್ದುಗೆ ಏರಲು ಸಾಧ್ಯವಾಗಿದೆ. ಆದರೂ ನಿರೀಕ್ಷೆಯಷ್ಟು ಸ್ಥಾನ ಪಡೆಯಲು ವಿಫಲವಾಗಿದ್ದೇವೆ ಎಂದರು.
ಈ ಫಲಿತಾಂಶದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಕುಂದದೆ ಮುಂದಿನ ಸವಾಲುಗಳನ್ನು ಸ್ವೀಕರಿಸಲು ಮುಂದಾಗಬೇಕು. ಸ್ಥಳೀಯ ಮಟ್ಟದಲ್ಲಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಸೇವೆ ಮಾಡಲುಬದ್ಧರಾಗಬೇಕಿದೆ ಎಂದು ಹೇಳಿದರು.ಜಿಪಂ ಸದಸ್ಯೆ ಎ.ಅರುಂಧತಿ ಮಾತನಾಡಿ, ಡಿ.ಪಾಳ್ಯ ಜಿಪಂವ್ಯಾಪ್ತಿಯಲ್ಲಿನ ಎಲ್ಲ ಗ್ರಾಪಂಗಳಲ್ಲಿಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳುಅಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕಇಡೀ ಕ್ಷೇತ್ರವನ್ನು ಕೈ ವಶವನ್ನಾಗಿಸಿಕೊಂಡುಶಾಸಕರಿಗೆ ನೀಡಿದ್ದ ಭರವಸೆ ಈಡೇರಿಸಿದ್ದೇವೆ ಎಂದರು.
ಕಾಂಗ್ರೆಸ್ ಭದ್ರಕೋಟೆಯಾಗಿರುವಈ ಪ್ರದೇಶದಲ್ಲಿ ಕಾರ್ಯಕರ್ತರಅವಿರತ ಶ್ರಮ ಹಾಗೂ ಮತದಾರರ ಆಶೀರ್ವಾದದಿಂದ ಈ ಸಾಧನೆಮಾಡಲು ಸಾಧ್ಯವಾಗಿದೆ. ಇದರ ಜತೆಗೆಕಳೆದ ಎರಡೂವರೆ ದಶಕಗಳಿಂದಶಾಸಕರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಇಂದು ನಮಗೆಲ್ಲಾ ಶ್ರೀರಕ್ಷೆಯಾಗಿವೆ ಎಂದರು.
ಮುಖಂಡರಾದ ಅಶ್ವತ್ಥರೆಡ್ಡಿ, ನವೀನ್ ಕುಮಾರ್, ರಮೇಶ್ ನಾಯಕ್,ಶಿವಾರೆಡ್ಡಿ, ರಾಮಲಿಂಗಾರೆಡ್ಡಿ,ರಾಜಗೋಪಾಲರೆಡ್ಡಿ, ಸುರೇಶ್, ಸಿದ್ದಪ್ಪ,ನಿರಂಜನ್, ರಂಗಪ್ಪ, ಕುಮಾರ್,ಸುಮನಾ, ಶ್ರೀನಿವಾಸರೆಡ್ಡಿ, ಗಂಗಾಧರಪ್ಪ, ರಾಂಬಾಬು, ಶ್ರೀರಾಮರೆಡ್ಡಿ, ಅಶ್ವತ್ಥಪ್ಪ, ಶಿವಶಂಕರರೆಡ್ಡಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR