ವಾಂತಿಬೇಧಿ: ವ್ಯಕ್ತಿ ಸಾವು, 13 ಮಂದಿ ಆಸ್ಪತ್ರೆಗೆ
Team Udayavani, Mar 19, 2020, 3:00 AM IST
ಬಾಗೇಪಲ್ಲಿ: ಕೊರೊನಾ ಹಾವಳಿಯಿಂದ ವಿಶ್ವವೇ ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಪಾತಪಾಳ್ಯ ಹೋಬಳಿ ತೋಳ್ಳಪಲ್ಲಿ ಗ್ರಾಪಂ ವ್ಯಾಪ್ತಿ ಅಗಟಮಡಕ ಗ್ರಾಮದಲ್ಲಿ ವಾಂತಿಬೇಧಿಯಿಂದ ವೆಂಕಟರಾಮಪ್ಪ(70)ಮೃತಪಟ್ಟಿದ್ದು 13 ಜನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 10 ದಿನಗಳಿಂದ ವಾಂತಿಬೇಧಿ ಪ್ರಕರಣ ಕಾಣಿಸಿಕೊಂಡಿದ್ದು ಬುಧವಾರ ನಾಲ್ವರು ಸಾರ್ವಜನಿಕ ಆಸ್ಪತೆಗೆ ದಾಖಲಾಗಿದ್ದಾರೆ.
ಸ್ಟೀಲ್ ಕೊಳಗದಲ್ಲಿ ನೀರು ಸೇವನೆ: ರಮ್ಯಾ(5), ರಾಜೇಶ್ವರಿ(30), ಇನ್ನಿತರರು ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯವಿಲ್ಲದೆ ಗುಣುಮುಖರಾಗುತ್ತಿದ್ದಾರೆ. ಉಳಿದಂತೆ 10 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಇಲ್ಲದೆ ಇರುವುದರಿಂದ ಗ್ರಾಮಸ್ಥರು ಕೊಳವೆ ಬಾವಿಗಳ ನೀರನ್ನೇ ಕುಡಿಯುತ್ತಿದ್ದಾರೆ. ಹತ್ತಾರು ವರ್ಷಗಳಿಂದ ಸ್ಟೀಲ್ ಕೊಳೆಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದ್ದು ಇವುಗಳ ಕಿಲುಬು ನೀರಿನಲ್ಲಿ ಸೇರಿ ವಾಂತಿಬೇಧಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ವೈದ್ಯರ ತಂಡ ಆಗಮನ: ಗ್ರಾಮಕ್ಕೆ ವೈದ್ಯರ ತಂಡ ಆಗಮಿಸಿ ಮಿನಿ ವಾಟರ್ ಟ್ಯಾಂಕ್ಗೆ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಅರಿವು ಮೂಡಿಸಲಾಗುತ್ತಿದೆ. ತಾಲೂಕು ವೈದ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, 70 ವರ್ಷದ ವೃದ್ಧ ವೆಂಕಟರಾಮಪ್ಪ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವೈದ್ಯಕೀಯ ಸಿಬ್ಬಂದಿ ಆಗಮಿಸಿದ್ದು ಅರಿವು ಮೂಡಿಸಲಾಗುತ್ತಿದೆ ಎಂದರು.
ನೀರು ಶುದ್ಧೀಕರಣ ಘಟಕವಿಲ್ಲ: ಅಗಟಮಡಕ ಗ್ರಾಮದಲ್ಲಿ 150 ಮನೆಗಳಿದ್ದು 800 ಜನಸಂಖ್ಯೆ ಹೊಂದಿ ಶುದ್ಧ ನೀರಿನ ಘಟಕವಿಲ್ಲ ಎಂದು ಗ್ರಾಮದ ಮುಖಂಡ ಅಗಟಮಡಕ ಎ.ವಿ.ಸತ್ಯನಾರಾಯಣಪ್ಪ (ಸತ್ಯಣ್ಣ) ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…