ಗಾಳಿಪಟ ಉತ್ಸವದ ಮೂಲಕ ಮತದಾನ ಜಾಗೃತಿ


Team Udayavani, Apr 17, 2019, 3:00 AM IST

gaalipata

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಸರ್‌ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಪ್ರಯುಕ್ತ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಗಾಳಿಪಟ ಉತ್ಸವ ಎಲ್ಲರ ಗಮನ ಸೆಳೆಯಿತು.

ಮಹಿಳೆಯರಿಗೆ ರಂಗೋಲಿ, ಯುವಕರಿಗೆ ಮ್ಯಾರಥಾನ್‌, ಕ್ರೀಡಾಪಟುಗಳಿಗೆ ವಾಲಿಬಾಲ್‌, ಹಾಸ್ಟಲ್‌ ವಿದ್ಯಾರ್ಥಿಗಳಿಂದ ಪೋಷಕರಿಗೆ ಅಂಚೆ ಪತ್ರ ಅಭಿಯಾನ, ಮಾನವ ಸರಪಳಿ, ಮೇಣದ ಬತ್ತಿ ಮೆರವಣಿಗೆಗಳ ಮೂಲಕ ಯುವ ಮತದಾರರ ಗಮನ ಸೆಳೆದಿದ್ದ ಜಿಲ್ಲಾ ಸ್ಪೀಪ್‌ ಸಮಿತಿ ಸರ್‌ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಾಳಿಪಟ ಉತ್ಸವಕ್ಕೂ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿತ್ತು.

ಸಿಇಒ ಚಾಲನೆ: ಸರ್‌ಎಂವಿ ಕ್ರೀಡಾಂಗಣದಲ್ಲಿ ಮದ್ಯಾಹ್ನ ಆಯೋಜಿಸಿದ್ದ ಗಾಳಿಪಟ ಉತ್ಸವಕ್ಕೆ ಖುದ್ದು ಜಿಲ್ಲಾ ಸ್ಪೀಪ್‌ ಸಮಿತಿ ಅಧ್ಯಕ್ಷರಾದ ಜಿಪಂ ಸಿಇಒ ಗುರುದತ್ತ ಹೆಗಡೆ ಚಾಲನೆ ನೀಡಿದರು. ನಗರದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಾಳಿಪಟವನ್ನು ಹಾರಿ ಬಿಡುವ ಮೂಲಕ ಎತ್ತರಕ್ಕೆ ಹಾರಿಸಲು ಪೈಪೋಟಿ ನಡೆಸಿದರು.

ಬಣ್ಣ ಬಣ್ಣದ ಗಾಳಿಪಟಗಳು ಗಾಳಿಯಲ್ಲಿ ತೇಲಾಡಿ ಹಾರಾಡಿದವು. ಕ್ರೀಡಾಂಗಣದಲ್ಲಿ ನೆರದಿದ್ದ ಗಾಳಿಪಟ ಪ್ರೇಮಿಗಳು ಆಗಸದಲ್ಲಿ ಹಾರಡುತ್ತಿದ್ದ ಗಾಳಿಪಟಗಳನ್ನು ನೋಡಿ ಕಣ್ತುಂಬಿಸಿಕೊಂಡರು. ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಯುವಕರು, ಕಾಲೇಜು ವಿದ್ಯಾರ್ಥಿಗಳು ಗಾಳಿಪಟ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಪ್ರತಿಜ್ಞಾ ವಿಧಿ ಬೋಧನೆ: ನೈತಿಕ ಹಾಗೂ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಬೋಧಿಸಿದ ಜಿಪಂ ಸಿಇಒ ಗುರುದತ್‌ ಹೆಗಡೆ, ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನೈಜ್ಯವಾಗಿ ಮತದಾನ ಮಾಡಬೇಕು ಎಂದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ಜಿಲ್ಲಾ ಸ್ವೀಪ್‌ ಸಮಿತಿ ಸದಸ್ಯರಾದ ರವಿಕುಮಾರ್‌. ಮುನಿರಾಜು, ಸತೀಶ್‌ ಕುಮಾರ್‌, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಗಮನ ಸೆಳೆದ ಮುಖವೀಣೆ ನೀನಾದ: ಜಿಲ್ಲಾ ಸ್ಪೀಪ್‌ ಸಮಿತರಿ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಗಾಳಿಪಟ ಉತ್ಸವ ನೋಡಲು ಒಂದಡೆ ರೋಮಾಂಚನವಾದರೆ ಮತ್ತೂಂದಡೆ ಸಂಗೀತ ಪ್ರಿಯರಿಗೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಖ್ಯಾತ ಮುಖವೀಣೆ ಗಾಯಕ ಆಂಜಿನಪ್ಪ ತನ್ನ ವೈಶಿಷ್ಟವಾದ ತನ್ನ ಮುಖವೀಣೆಯನ್ನು ನುಡಿಸುವ ಮೂಲಕ ಎಲ್ಲರು ತಲೆದೂಗುವಂತೆ ಮಾಡಿದರು. ಚುನಾವಣೆಯ ನೆಪದಲ್ಲಿ ಆದರೂ ಜಿಲ್ಲಾಡಳಿತ ಬಡ ಕಲಾವಿದನನ್ನು ಗುರುತಿಸಿದ್ದು ಮಾತ್ರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.