ವಿವಿಪ್ಯಾಟ್‌ ಸಾಧನ ನಿರ್ವಹಣೆ ಅಸಾಧ್ಯ


Team Udayavani, Mar 15, 2019, 7:26 AM IST

network.jpg

ಚಿಕ್ಕಬಳ್ಳಾಪುರ: ಯಾವುದೇ ನೆಟ್‌ವರ್ಕ್‌ ಬಳಸಿ ವಿವಿಪ್ಯಾಟ್‌ ಸಾಧನ ನಿರ್ವಹಣೆ ಸಾಧ್ಯವಾಗುವುದಿಲ್ಲ. ಇದು ಸ್ವತಂತ್ರವಾಗಿ ಕೆಲಸ ನಿರ್ವಹಿಸಲಿದೆ. ಮತದಾರರು, ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತದಾನ ಮಾಡಿ ಅದನ್ನು ಖಚಿತಪಡಿಸಿಕೊಳ್ಳಬಹುದಾಗಿದ್ದು, ಇವಿಎಂ ಹಾಗೂ ವಿವಿಪ್ಯಾಟ್‌ ಯಂತ್ರಗಳ ಬಗ್ಗೆ ಸಾರ್ವಜನಿಕರು ಆತಂಕ ಅಥವಾ ಅನುಮಾನಪಡಬೇಕಾಗಿಲ್ಲ ಎಂದು ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ತಿಳಿಸಿದರು.

 ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಇವಿಎಂ ಹಾಗೂ ವಿವಿಪ್ಯಾಟ್‌ ಕುರಿತಾದ ಸಂವಾದ ಹಾಗೂ ಪ್ರಾತ್ಯಕ್ಷಿತೆ  ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಿಂದ ಈಚೆಗೆ ರಾಜ್ಯದಲ್ಲಿ ವಿವಿಪ್ಯಾಟ್‌ ಬಳಸಲಾಗುತ್ತಿದ್ದು, ಮತದಾರರು ತಾವು ಚಲಾಯಿಸಿದ ಅಭ್ಯರ್ಥಿಗೆ ಮತ ಬಿದ್ದಿರುವುದನ್ನು ವಿವಿಪ್ಯಾಟ್‌ ಖಚಿತಪಡಿಸಲಿದೆ ಎಂದರು. 

ದೇಶದ್ಯಾಂತ ವಿವಿಪ್ಯಾಟ್‌ ಬಳಕೆಗೆ ಉತ್ತಮ ಪ್ರತಿಕ್ರಿಯೆ ಇದ್ದು ಮತದಾರರು, ರಾಜಕೀಯ ಪಕ್ಷಗಳು ಮುಖಂಡರು ಸೇರಿದಂತೆ ಅನುಮಾನ ಪಡುವ ಅಗತ್ಯವಿಲ್ಲ. ಚುನಾವಣೆಯನ್ನು ಜಿಲ್ಲಾಡಳಿತ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲಿದೆ. ಜಿಲ್ಲಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ ಬಳಕೆ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.

ಮೂರು ವಿದ್ಯುನ್ಮಾನ ಯಂತ್ರ: ಪ್ರತಿ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಮೂರು ವಿದ್ಯುನ್ಮಾನ ಯಂತ್ರಗಳನ್ನು ಬಳಸಲಾಗುತ್ತದೆ. ಕಂಟ್ರೋಲ್‌ ಯುನಿಟ್‌, ಬ್ಯಾಲೆಟ್‌ ಯುನಿಟ್‌ ಮತ್ತು ವಿವಿಪ್ಯಾಟ್‌ ಬಳಸಲಾಗುತ್ತದೆ. ಕಂಟ್ರೋಲ್‌ ಯುನಿಟ್‌ನಲ್ಲಿ ನಾಲ್ಕು ಭಾಗಗಳಿದ್ದು, ಡಿಸ್‌ಪ್ಲೇ ಸೆಕ್ಷನ್‌, ಬ್ಯಾಟರಿ ಸೆಕ್ಷನ್‌, ರಿಸಲ್ಟ್ ಸೆಕ್ಷನ್‌ ಮತ್ತು ಬ್ಯಾಲೆಟ್‌ ಸೆಕ್ಷನ್‌ ಎಂದು ಇರುತ್ತದೆ. ಕಂಟ್ರೋಲ್‌ ಯುನಿಟ್‌ಗೆ ಬ್ಯಾಲೆಟ್‌ ಯುನಿಟ್‌ ಮತ್ತು ವಿವಿಪ್ಯಾಟ್‌ನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. 

7 ಸೆಕೆಂಡ್‌ ಪ್ರದರ್ಶನ: ವಿವಿಪ್ಯಾಟ್‌ ವಿದ್ಯುನ್ಮಾನ ಮತಯಂತ್ರಕ್ಕೆ ಜೋಡಿಸಿರುವ ಪ್ರಿಂಟರ್‌ನಂತೆ ಕಾರ್ಯ ನಿರ್ವಹಿಸುವ ಯಂತ್ರವಾಗಿದೆ. ಮತದಾರರು ಮತದಾನದ ವೇಳೆ ತಾವು ಯಾವ ಅಭ್ಯರ್ಥಿಗೆ ಅಥವಾ ಚಿಹ್ನೆಯ ಪರವಾಗಿ ಮತ ಚಲಾಯಿಸಿದ್ದಾರೆ ಎಂಬುದನ್ನು ಈ ಸಾಧನ ಮೂಲಕ ಖಚಿತಪಡಿಸಿಕೊಳ್ಳಬಹುದಾಗಿದೆ. 

ಮತದಾರರು ಇವಿಎಂನಲ್ಲಿರುವ ಮತದಾನದ ಬಟನ್‌ ಒತ್ತಿದ ತಕ್ಷಣ ವಿವಿಪ್ಯಾಟ್‌ಗೆ ಇದರ ಸಂದೇಶ ರವಾನೆಯಾಗಿ ಸ್ವಯಂ ಚಾಲಿತವಾಗಿ ಮತದಾನ ಮಾಡಿದ ಚಿಹ್ನೆಯ ಮತ್ತಿತರೆ ವಿವರವುಳ್ಳ ಪೇಪರ್‌ ಚೀಟಿಯೊಂದು ಮುದ್ರಿತವಾಗಿ ಪ್ರದರ್ಶನಗೊಳ್ಳುತ್ತದೆ. ಈ ಚೀಟಿ 7 ಸೆಕೆಂಡ್‌ಗಳ ಕಾಲ ಮತದಾರರಿಗೆ ಕಾಣಿಸಿಕೊಂಡ ಬಳಿಕ ತುಂಡಾಗಿ ವಿವಿಪ್ಯಾಟ್‌ನಲ್ಲಿ ಸೀಲ್‌ ಮಾಡಿರುವ ಬಾಕ್ಸ್‌ನಲ್ಲಿ ಬೀಳುತ್ತದೆ ಎಂದರು.

ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್‌, ಜಿಲ್ಲಾ ಜವಳಿ ಮತ್ತು ಕೈ ಮಗ್ಗ ಇಲಾಖೆ ಉಪ ನಿರ್ದೇಶಕರಾದ ಶಿವಕುಮಾರ್‌ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.