ಅನವಶ್ಯಕವಾಗಿ ತಿರುಗಾಡಿದರೆ ದಂಡ ವಿಧಿಸಿ
Team Udayavani, Jun 25, 2020, 6:24 AM IST
ಚಿಕ್ಕಬಳ್ಳಾಪುರ: ಸಾರ್ವಜನಿಕರು ಯಾವುದೇ ಮುಂಜಾಗ್ರತಾ ಕ್ರಮ ಪಾಲಿಸದಿರುವುರಿಂದ ಅತಿ ಹೆಚ್ಚು ಕೊವೀಡ್-19 ಪ್ರಕರಣ ನಗರ ಪ್ರದೇಶಗಳಲ್ಲಿ ದಾಖಲಾಗುತ್ತಿದ್ದು ಅನವಶ್ಯಕವಾಗಿ ತಿರುಗಾಡುವವರಿಗೆ ದಂಡ ವಿಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೋವಿಡ್ 19 ನಿಯಂತ್ರಣಕ್ಕಾಗಿ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಹೋಟೆಲ್, ರಸ್ತೆ ಬದಿಯ ಅಂಗಡಿಗಳವರು ಯಾವುದೇ ರೀತಿಯ ಮುಖಗವಸು, ಸಾಮಾಜಿಕ ಅಂತರ, ಸ್ವಚ್ಛತೆ ಕಾಪಾಡುತ್ತಿಲ್ಲ. ಹೀಗಾಗಿ ಸಾಕಷ್ಟು ದೂರುಗಳು ಬರುತ್ತಿವೆ.
ಕೂಡಲೇ ಇಂತಹವರಿಗೆ ಹತ್ತಿರದ ನೋಡಲ್ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕೆಂದರು. ಈ ಹಿಂದೆ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಕೊವೀಡ್-19 ಈಗ ಹಳ್ಳಿಗಳಿಗೂ ವ್ಯಾಪಿಸಿದ್ದು ಹಳ್ಳಿಗಳಿಗೆ ಗ್ರಾಪಂ ಪಿಡಿಒ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದರು.
ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಕೋವಿಡ್ -19 ಎಲ್ಲಿ ಯಾವಾಗ ಯಾರಿಗೆ ಬರುತ್ತದೆ ಎಂದು ನಿಖರವಾಗಿ ಹೇಳುವುದಕ್ಕೆ ಆಗುವುದಿಲ್ಲ. ಎಲ್ಲರು ಎಚ್ಚರಿಕೆಯಿಂದ ಇರಬೇಕು ಎಂದರು. ಜಿಲ್ಲಾ ಪಂಚಾಯ್ತಿ ಸಿಇಒ ಬಿ.ಫೌಜಿಯಾ ತರನ್ನುಮ್, ನಗರಾಭಿವೃದಿಟಛಿ ಪ್ರಾಧಿಕಾರದ ಆಯುಕ್ತ ಭಾಸ್ಕರ್, ತಹಶೀಲ್ದಾರ್ ನಾಗಪ್ರಶಾಂತ್, ನಗರಸಭೆ ಆಯುಕ್ತ ಲೋಹಿತ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ