14 ಗ್ರಾಮಕ್ಕೆ ನೀರೊದಗಿಸಲು ಸಂಪುಟ ಅಸ್ತು


Team Udayavani, Feb 10, 2022, 2:50 PM IST

14 ಗ್ರಾಮಕ್ಕೆ ನೀರೊದಗಿಸಲು ಸಂಪುಟ ಅಸ್ತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮಂಡಿಕಲ್ಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ದಶಕಗಳ ಬೇಡಿಕೆ ಈಗ ಈಡೇರಿದೆ.

ಈ ಗ್ರಾಮಗಳ ಜನರ ಕುಡಿಯುವ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ “ಭಗೀರಥ ಹೆಜ್ಜೆ’ ಇರಿಸಿರುವ ಚಿಕ್ಕಬಳ್ಳಾಪುರ ಶಾಸಕ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಯದಾರ್ಲಹಳ್ಳಿ ಕೆರೆ ಮೂಲಕ ನೀರು ಹರಿಸುವ ಯೋಜನೆಗೆ ಸರ್ಕಾರದಿಂದ ಅನುಮೋದನೆ ಕೊಡಿಸಿದ್ದು ಕಾಮಗಾರಿ ಹಾದಿ ಸುಗಮವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕೊಳಾಯಿ ಸಂಪರ್ಕ ಕಲ್ಪಿಸಿ ನೀರೊದಗಿಸುವ ಜಲಜೀವನ್‌ ಮಿಷನ್‌ ಜಾರಿ ಮಾಡಿದ್ದಾರೆ. ಇದೇ ಯೋಜನೆಯಡಿ, 14 ಗ್ರಾಮಗಳಿಗೆ ನೀರು ಪೂರೈಸುವ ಯೋಜನೆ ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 15.48 ಕೋಟಿ ರೂ. ವೆಚ್ಚದ ಯೋಜನೆ ಕುರಿತು ಚರ್ಚೆಯಾಗಿದ್ದು, ಬಳಿಕ ಅನುಮೋದನೆ ದೊರೆತಿದೆ.

2024ರ ವೇಳೆಗೆ ದೇಶದ ಪ್ರತಿ ಮನೆಗೆ ಕೊಳಾಯಿ ನೀರು ಸೌಲಭ್ಯ ಕಲ್ಪಿಸುವುದು ಜಲಜೀವನ್‌ ಯೋಜನೆಯ ಗುರಿ. ಈಗಾಗಲೇ ಸಚಿವರ ಶ್ರಮದಿಂದ ಎಚ್‌.ಎನ್‌.ವ್ಯಾಲಿಯಿಂದ ಕೆರೆ ತುಂಬಿಸಲಾಗಿದೆ. ಇದರಿಂದಾಗಿ ಕುಡಿವ ನೀರಿನ ಸಮಸ್ಯೆಗೆ ಪರಿಹಾರದೊಂದಿಗೆ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಕ್ಕೆ ನಲ್ಲಿ ನೀರು ಪೂರೈಸಲು ಸಚಿವರು ಹೆಜ್ಜೆ ಇರಿಸಿದ್ದಾರೆ.

ಜಲಜೀವನ್‌ ಮಿಷನ್‌ನಡಿ ಜಾರಿ: ಇದೇ ಯೋಜನೆಯಡಿ, ಯದಾರ್ಲಹಳ್ಳಿ ಕೆರೆಯಿಂದ ನೀರುಪಡೆದು ಪೂರೈಸಲಾಗುತ್ತದೆ. ಸದ್ಯ ಈ ಗ್ರಾಮಗಳಲ್ಲಿ ಒಟ್ಟು 1429 ಮನೆ ಹಾಗೂ 5251 ಜನರಿದ್ದಾರೆ.2053ರ ವೇಳೆಗೆ ಈ ಜನಸಂಖ್ಯೆ 6357 ಆಗಲಿದೆ. ಈಅಂದಾಜು ಗಮನದಲ್ಲಿರಿಸಿ ಯೋಜನೆಅನುಷ್ಠಾನಗೊಳಿಸಲಾಗುತ್ತಿದೆ. ಈವರೆಗೆ ಇಲ್ಲಿನ ಜನ ಕುಡಿವ ನೀರಿಗಾಗಿ ಬಾವಿ, ಕೆರೆ ಹಾಗೂ ಬೋರ್‌ವೆಲ್‌ ಆಶ್ರಯಿಸಿದ್ದರು.

ಜನ ನೀರು ಪಡೆಯಲು ಕೆರೆ, ಬಾವಿಗಳ ಬಳಿ ಹೋಗಿ ಬರಬೇಕಿತ್ತು.ಆದರೀಗ ಮನೆಗಳಿಗೆಕೊಳಾಯಿಯಲ್ಲಿ ನೀರು ಬರುವ ಸೌಲಭ್ಯ ಕಲ್ಪಿಸಲಾಗುತ್ತದೆ.

ಯದಾರ್ಲಹಳ್ಳಿ ಕೆರೆ: ದಕ್ಷಿಣ ಪೆನ್ನಾರ್‌ನಿಂದ ನೀರು ಪಡೆಯುವ ಯದಾರ್ಲಹಳ್ಳಿ ಕೆರೆ 101.31 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶ ಹೊಂದಿದೆ. 30.40 ಹೆಕ್ಟೇರ್‌ನಲ್ಲಿ ನೀರಿದೆ. ಈ ಕೆರೆ ಒಟ್ಟು 27.63 ಎಂಸಿಎಫ್ಟಿ ಸಾಮರ್ಥ್ಯ ಹೊಂದಿದೆ. ಇಲ್ಲಿ ನೀರನ್ನು ಶುದ್ಧೀಕರಿಸುವ ಘಟಕ ಅಳವಡಿಸಿದ್ದು ನೀರನ್ನು ಶುದ್ಧಮಾಡಿ ಪೈಪ್‌ ಲೈನ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ. ಈ ಎಲ್ಲಾ ಕಾಮಗಾರಿ ಶೀಘ್ರವಾಗಿ ಮುಗಿಸಿ, 2023ರ ವೇಳೆಗೆ ಮನೆಗಳಿಗೆ ನೀರು ಪೂರೈಸಲಾಗುತ್ತದೆ.

ನೀರಿನ ಸೌಲಭ್ಯ ಪಡೆದ ಗ್ರಾಮಗಳು ಯಾವುವು? :

ಬಚ್ಚೇನಹಳ್ಳಿ, ದರಬೂರು, ಗುಡಿಸಿಹಳ್ಳಿ, ನೆಲಮಾನಪರ್ತಿ, ಗುಂಡ್ಲಮಂಡಿಕಲ್ಲು, ಮಣಿಪುರ, ಹೊಸಹಳ್ಳಿ, ಮಂಡಿಕಲ್ಲು, ಯಾಟಗಾನಹಳ್ಳಿ, ಪಾರೇನಹಳ್ಳಿ, ಪೈಯೂರು, ಯದಾರ್ಲಹಳ್ಳಿ, ಜೀಡಮಾಕಲಹಳ್ಳಿ, ಯರ್ರಬಾಪನಹಳ್ಳಿ.

ಜ್ವಲಂತ ಸಮಸ್ಯೆ ನಿವಾರಣೆಗೆ ಪ್ರಧಾನಿ ಮೋದಿ ಆದ್ಯತೆ :

ಎಚ್‌.ಎನ್‌.ವ್ಯಾಲಿಯಿಂದ ಕೆರೆಗಳ ಭರ್ತಿ, ಶುದ್ಧ ಕುಡಿವ ನೀರಿನ ಘಟಕ ಸ್ಥಾಪನೆ ಮೊದಲಾದ ಜಲ ಪೂರೈಕೆ ಯೋಜನೆಗಳ ಮುಂದುವರಿದ ಭಾಗವಾಗಿ, ಯದಾರ್ಲಹಳ್ಳಿ ಕೆರೆಯಿಂದ ನೀರು ಪಡೆದು, ಕೊಳಾಯಿಗಳಲ್ಲಿ ಮನೆಮನೆಗೆ ನೀರು ಪೂರೈಸುವ ಯೋಜನೆ ರೂಪಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸ್ವಾತಂತ್ರÂ ಬಂದು 75 ವರ್ಷಗಳಾದರೂ ಎಲ್ಲಾ ಮನೆಗಳಿಗೆ ಕೊಳಾಯಿ ನೀರಿನ ಸೌಲಭ್ಯ ಕಲ್ಪಿಸಲು ಸಾಧ್ಯವಾಗಿಲ್ಲ ಎಂಬುದು ಜ್ವಲಂತ ಸಮಸ್ಯೆ. ಈ ಸಮಸ್ಯೆಗೆ ಆದ್ಯತೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಲಜೀವನ್‌ ಮಿಷನ್‌ನಿಂದ ಮನೆಗೆ ನೇರವಾಗಿ ನೀರು ಪೂರೈಸುವ ಗುರಿಯನ್ನು ರಾಜ್ಯ ಸರ್ಕಾರಗಳಿಗೆ ನೀಡಿದ್ದಾರೆ. ಆ ಕನಸನ್ನು ಸಾಕಾರಗೊಳಿಸುವತ್ತ ಸಾಗಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಪ್ರಮುಖಾಂಶಗಳು :

ವೆಚ್ಚ: 15.48 ಕೋಟಿ ರೂ. ಮನೆಗಳು: 1420

ನೀರಿನ ಬೇಡಿಕೆ: 0.43 ಎಂಎಲ್‌ಡಿ

ಪ್ರಸ್ತುತ ಫಲಾನುಭವಿಗಳು: 5251 ಪೂರೈಸುವ ನೀರು: 55 ಎಲ್‌ಪಿಸಿಡಿ

ಕಾಮಗಾರಿ ಪೂರ್ಣ-ನೀರು ಪೂರೈಕೆ ಆರಂಭ: 2023ರಲ್ಲಿ

ಪೈಪ್‌ ಅಳವಡಿಕೆ: 23,345 ಮೀಟರ್‌ ಉದ್ದ

ಶುದ್ಧೀಕರಣ ಘಟಕದ ಸಾಮರ್ಥ್ಯ: 0.43 ಎಂಎಲ್‌ಡಿ

ಸಮಾನಾಂತರ ಜಲಾಶಯದ ಸಾಮರ್ಥ್ಯ: 2ಲಕ್ಷ ಲೀಟರ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.