ಲಕ್ಷಾಂತರ ಜನರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ: ಕಾಗೇರಿ
Team Udayavani, May 29, 2022, 12:15 AM IST
ಗೌರಿಬಿದನೂರು: ಲಕ್ಷಾಂತರ ಜನರ ನಿರಂತರ ಹೋರಾಟ ಹಾಗೂ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ತಾಲೂಕಿನ ಐತಿಹಾಸಿಕ ಕ್ಷೇತ್ರ ವಿದುರಾಶ್ವತ್ಥದಲ್ಲಿ “ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆಲವೇ ವ್ಯಕ್ತಿಗಳಿಂದ ನಮಗೆ ಸ್ವಾತಂತ್ರ್ಯ ಬಂತು ಎಂದು ಕೆಲವರು 75 ವರ್ಷಗಳಿಂದ ಬಿಂಬಿಸಿದ್ದಾರೆ. ನೈಜ ಸ್ವಾತಂತ್ರ್ಯ ಹೋರಾಟಗಾರ ರನ್ನು ದೇಶದ್ರೋಹಿಗಳೆಂದು ಅಪ ಪ್ರಚಾರ ಮಾಡುತ್ತಿದ್ದಾರೆ. ದೇಶವನ್ನು ಎರಡು ತುಂಡುಗಳನ್ನಾಗಿ ಮಾಡಿದವರಿಂದ ನಾವು ಪಾಠ ಕಲಿಯಬೇಕಿಲ್ಲ. ಈಗ ಜನರಿಗೆ ಸತ್ಯ ಅರಿವಿಗೆ ಬಂದಿದೆ ಎಂದರು.
ಇತಿಹಾಸ ಓದದವರು ಇತಿಹಾಸ ಸೃಷ್ಟಿಸಲಾರರು
ಮೆಕಾಲೆ ಶಿಕ್ಷಣ ಪಡೆದ ಹಾಗೂ ಬ್ರಿಟಿಷರಿಂದ ಬರೆಸಲ್ಪಟ್ಟ ಚರಿತ್ರೆಯನ್ನು ಓದಿದ ಕೆಲವರು ಮನ ಬಂದಂತೆ ಮಾತನಾಡಿದರೆ ಅದನ್ನು ನಂಬುವ ಕಾಲ ಈಗಿನ ದಲ್ಲ. ಇತಿಹಾಸ ಓದದವರು ಇತಿಹಾಸವನ್ನು ಸೃಷ್ಟಿಸಲಾರರು ಎಂಬುದನ್ನು ಇಂಥವರು ಅರಿತುಕೊಳ್ಳಬೇಕು ಎಂದರು.
ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗ ರಾಜ್ ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರ 93 ವರ್ಷದ ಮುದಗೆರೆ ಬ್ರಹ್ಮಯ್ಯ ಅವರನ್ನು ಕಾಗೇರಿ ಸಮ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ