ಅಂಗನವಾಡಿ ಕೇಂದ್ರ ನಿರ್ಮಾಣ ಯಾವಾಗ?

ಪುಸ್ತಕಗಳು, ಸಾಮುಗ್ರಿಗಳು, ಆಹಾರ ಧಾನ್ಯಗಳು ದುರ್ವಾಸನೆ ಹೊಡೆಯುತ್ತಿವೆ.

Team Udayavani, May 21, 2022, 6:16 PM IST

ಅಂಗನವಾಡಿ ಕೇಂದ್ರ ನಿರ್ಮಾಣ ಯಾವಾಗ?

ಚೇಳೂರು: 50 ವರ್ಷಗಳ ಹಿಂದೆ ಪಾಳು ಬಿದ್ದಿದ್ದ ಕಟ್ಟಡವನ್ನು ಎ. ಅಂಗನವಾಡಿಗೆ ನೀಡಿ, ಕಟ್ಟಡ ಬಿದ್ದು ಹೋಗುವ ಸ್ಥಿತಿ ತಲುಪಿದ್ದು, ಮುಗ್ಧ ಮಕ್ಕಳು ಅದರಲ್ಲೆ ಪಾಠಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಚೇಳೂರು ತಾಲೂಕಿನ ಪಾಳ್ಯಕೆರೆ ಗ್ರಾಪಂನ ಎ. ಅಂಗನವಾಡಿ ಕೇಂದ್ರದ ಚಿಂತಾಜನಕ ಕಥೆ. ತಾಲೂಕಿನಲ್ಲಿ ಪಾಳ್ಯಕೆರೆ ಗ್ರಾಪಂ ಪ್ರಮುಖ ಕೇಂದ್ರ ಸ್ಥಾನ. 50 ವರ್ಷಗಳಿಂದೆ ಪ್ರಯಾಣಿಕರ ಆಶ್ರಯಧಾಮಕ್ಕೆಂದು ಇದ್ದ ಕಲ್ಲು ಕಟ್ಟಡವನ್ನು ಸರ್ಕಾರಿ ಶಾಲೆಗೆ ನೀಡಲಾಯಿತು. ಕಾಲ ಕ್ರಮೇಣ ಶಾಲೆಯ ಕಲ್ಲು ಕಟ್ಟಡ ಶಿಥಿಲಾವಸ್ಥೆ ತಲುಪಿತು. 15 ವರ್ಷ ಅದು ಖಾಲಿಯಿತ್ತು. 36 ವರ್ಷದ ಹಿಂದೆ ಈ ಕಟ್ಟಡದಲ್ಲಿ ಪಾಳ್ಯಕೆರೆ ಎ. ಅಂಗನವಾಡಿ ಕೇಂದ್ರ ಪ್ರಾರಂಭಿಸಲಾಯಿತು. ಈಗ ಈ ಕಟ್ಟಡ ಶಿಥಿಲಾವಸ್ತೆ ತಲುಪಿದ್ದು, ಅವಘಡಕ್ಕೆ ಆಹ್ವಾನ ನೀಡುತ್ತಿದೆ.ಅವಘಡ ಸಂಭವಿಸುವ ಮುನ್ನ ತೆರವು ಮಾಡಿ ಸೂಕ್ತ ಕಟ್ಟಡ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅನೇಕ ಸಮಸ್ಯೆ: ಪಾಳ್ಯಕೆರೆ ಎ. ಅಂಗನವಾಡಿ ಕೇಂದ್ರದಲ್ಲಿ ಇಬ್ಬರು ಕಾರ್ಯಕರ್ತೆ, ಸಹಾಯಕಿಯರು ಕಾರ್ಯನಿರ್ವಹಿಸಲಿದ್ದಾರೆ. ಕೇಂದ್ರದಲ್ಲಿ ಕುಡಿವ ನೀರಿಗೂ ಅವ್ಯವಸ್ಥೆ. ಅವೈಜ್ಞಾನಿಕ ಕಾಮಗಾರಿಯಿಂದ ನೀರಿಗಾಗಿ ಪರದಾಟ, ಶೌಚಾಲಯದ ಅವ್ಯವಸ್ಥೆ, ಶಾಲಾ ಆವರಣದ ಚರಂಡಿ ಅಸ್ವತ್ಛತೆಯಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಭೀತಿ ಎದುರಾಗಿದೆ.

ಎ. ಅಂಗನವಾಡಿ ಕೇಂದ್ರದಲ್ಲಿ 15-20 ಜನ ಮಕ್ಕಳು ಸೇರಿದಂತೆ, 10 ಜನ ಮಹಿಳಾ ಗರ್ಭಿಣಿಯರು, 05 ಬಾಣಂತಿಯರು, ಕಿಶೋರಿಯರು 15 ಕ್ಕೂ ಹೆಚ್ಚು ಜನ ಎ. ಅಂಗನವಾಡಿ ಕೇಂದ್ರಕ್ಕೆ ಬಂದು ಹೋಗುತ್ತಿರುತ್ತಾರೆ. ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದ ಎ. ಅಂಗನವಾಡಿ ಕೇಂದ್ರದ ಮೇಲ್ಚಾವಣೆ ಪೂರ್ಣ ನೆಂದು ಸೋರುವ ಹಂತ ತಲುಪಿದೆ. ಇದರಿಂದ ಪುಸ್ತಕಗಳು, ಸಾಮುಗ್ರಿಗಳು, ಆಹಾರ ಧಾನ್ಯಗಳು ದುರ್ವಾಸನೆ ಹೊಡೆಯುತ್ತಿವೆ. ಕಲ್ಲುಕಟ್ಟಡ ಮಳೆ ಕಾಲದಲ್ಲಿ ಕುಸಿಯುವ ಹಂತ ತಲುಪಿದ್ದು ಕ್ರಮವಹಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಾಳ್ಯಕೆರೆ ಗ್ರಾಮದ ಎ. ಅಂಗನವಾಡಿ ಕೇಂದ್ರ ಶಿಥಿಲಾವಸ್ಥೆ ತಲುಪಿದ್ದು, ಅದನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಬೇಕು. ಎ. ಅಂಗನವಾಡಿ ಸ್ಥಳವನ್ನು
ಬದಲಾಯಿಸಿ, ಇಲ್ಲಿ ಗ್ರಂಥಾಲಯ ನಿರ್ಮಿಸಬೇಕಾಗಿದೆ. ಈ ಬಗ್ಗೆ ಗ್ರಾಪಂ ಮತ್ತು ಎ. ಅಂಗನವಾಡಿ ಇಲಾಖಾಧಿಕಾರಿಗಳಿಗೆ ಹಲವು ಬಾರಿ ತಿಳಿಸಲಾಗಿದೆ. ಈಗ ಮಳೆಗಾಲ ಶುರುವಾಗಿದ್ದು, ಅವಘಡ ಸಂಭವಿಸಿದರೆ ಸರ್ಕಾರವೇ ನೇರ ಹೊಣೆ.
● ಪಿ.ವಿ.ವೆಂಕಟರೆಡ್ಡಿ, ಪಾಳ್ಯಕೆರೆ ಗ್ರಾಪಂ ಹಿರಿಯ ಮುಖಂಡ

ಖಾಲಿ ಜಾಗ ವ್ಯವಸ್ಥೆ ಮಾಡಿದರೆ ಎ. ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳ ನೀಡುವಂತೆ ಪಾಳ್ಯಕೆರೆ ಗ್ರಾಪಂನ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕಟ್ಟಡ ಕುಸಿದರೆ ಪಂಚಾಯ್ತಿಯೇ ನೇರ ಹೊಣೆ.
● ಈರಮ್ಮ ಸಿದ್ರಾಮಪ್ಪ ವಂದಾಲ, ಮೇಲ್ವಿಚಾರಕರು ಚೇಳೂರು ವೃತ್ತ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.