ಬಾಗೇಪಲಿಯಲ್ಲಿ ಗೆಲುವು ಯಾವ ಪಕ್ಷಕ್ಕೆ?
Team Udayavani, Apr 4, 2018, 3:05 PM IST
ಚಿಕ್ಕಬಳ್ಳಾಪುರ ಕಾಂಗ್ರೆಸ್ ದಳದ ಬಂಡಾಯದ ನಡುವೆ ಈ ಬಾರಿ ಕೆಂಪುಕೋಟೆ ಭದ್ರವಾಗುತ್ತಾ? ಕೈ ಟಿಕೆಟ್ ಕದನದಲ್ಲಿ ಕೊನೆಗೆ ಗೆಲ್ಲುವರ್ಯಾರು? ನಟ ಸಾಯಿಕುಮಾರ್ ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡತಾರಾ ? ಬಾಗೇಪಲ್ಲಿ ಕ್ಷೇತ್ರಕ್ಕೆ ಸೇರುವ ಗುಡಿಬಂಡೆ ತಾಲೂಕು ಈ ಬಾರಿ ಯಾರ ಕೈ ಹಿಡಿಯುತ್ತೆ? ಹೌದು, ನೆರೆಯ ಆಂಧ್ರಪ್ರದೇಶದ ಗಡಿಗೆ ಅಂಟಿಕೊಂಡಿರುವ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ದಿನಗಣನೆ ಶುರುವಾದಂತೆ ರಾಜಕೀಯ ಮೇಲಾಟಗಳು ತಾರಕ್ಕೇರಿವೆ. ಕ್ಷೇತ್ರದ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಂಡ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ತೆಲುಗು ಪ್ರಾಬಲ್ಯ ಇರುವ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಸತತ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಉದಾಹರಣೆ ಇತಿಹಾಸದಲ್ಲಿ ಇಲ್ಲ. ಹೀಗಾಗಿ ಈ ಬಾರಿ ಚುನಾವಣಾ ಕಣ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.
ಸುಬ್ಟಾರೆಡ್ಡಿಗೆ ಸಿಗುತ್ತಾ ಕೈ ಟಿಕೆಟ್?: ಕಳೆದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ನ್ನು ಸೋಲಿಸಿ ಶಾಸಕರಾದ ಎಸ್.ಎನ್.ಸುಬ್ಟಾರೆಡ್ಡಿ ಎರಡನೇ ಬಾರಿ ಪುನಾರಯ್ಕೆಗೆ ಈಗ ಕೈ ಹಿಡಿದಿದ್ದಾರೆ. ಈಗಾಗಲೇ ಸುಬ್ಟಾರೆಡ್ಡಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಟಿಕೆಟ್ ಘೋಷಿಸಿದರೂ ಕೊನೆ ಕ್ಷಣದವರೆಗೂ ಏನು ಹೇಳದ ಸ್ಥಿತಿ ಕಾಂಗ್ರೆಸ್ನಲ್ಲಿದೆ. ಇದರ ನಡುವೆ ಎರಡು ಬಾರಿ ಶಾಸಕರಾಗಿರುವ ಮಾಜಿ ಶಾಸಕ ಎನ್.ಸಂಪಂಗಿ ತನಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದು ಕೂತಿದ್ದಾರೆ. ಟಿಕೆಟ್ ವಿಚಾರದಲ್ಲಿ ಶಾಸಕ ಸುಬ್ಟಾರೆಡ್ಡಿ ಸಿಎಂರನ್ನು ನೆಚ್ಚಿಕೊಂಡರೆ ಸಂಪಂಗಿ ತಮ್ಮ ಪ್ರಭಾವ ಬಳಿಸಿ ಹೈಕಮಾಂಡ್ ಮಟ್ಟದಲ್ಲಿ ಪಕ್ಷದ ಟಿಕೆಟ್ಗಾಗಿ ಪ್ರಬಲ ಲಾಭಿ ಮಾಡುತ್ತಿರುವುದು ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ಕದನ ತಾರಕ್ಕೇರುವಂತೆ ಮಾಡಿದೆ. ಆದರೆ ಇಬ್ಬರಲ್ಲಿ ಯಾರಿಗೂ ಕೈ ಟಿಕೆಟ್ ಒಲಿಯುತ್ತೆ ಎನ್ನುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಒಮ್ಮೆ ಟಿಕೆಟ್ ಕೈ ತಪ್ಪಿದರೆ ಬಂಡಾಯವಾಗಿ ಕಣಕ್ಕೆ ಇಳಿಯುವುದರ ಬಗ್ಗೆ ಸಂಪಂಗಿ ಇದುವರೆಗೂ ಬಹಿರಂಗವಾಗಿ ಹೇಳದಿರುವುದು ಕೂಡ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಟಿಕೆಟ್ ಕನದಲ್ಲಿ ಯಾರ ಕೈ ಮೇಲಾಗುತ್ತೆ ಎಂಬುದನ್ನು ಕಾದು ನೋಡ ಬೇಕಿದೆ.
ಸಿಪಿಎಂನಿಂದ ಶ್ರೀರಾಮರೆಡ್ಡಿ: ರಾಜ್ಯದಲ್ಲಿಯೆ ಸಿಪಿಎಂ ಪಕ್ಷಕ್ಕೆ ಒಂದಿಷ್ಟು ಬೇರುಗಳಿರುವ ನೆಲ ಬಾಗೇಪಲ್ಲಿ ಕ್ಷೇತ್ರ. ಈಗಾಗಲೇ ಸಿಪಿಎಂ ರಾಜ್ಯ ಕಾರ್ಯದರ್ಶಿಯಾಗಿರುವ ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಪಕ್ಷದಿಂದ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಈ ಹಿಂದೆ ಎರಡು ಬಾರಿ ಶಾಸಕರಾಗಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವ ಶ್ರೀರಾಮರೆಡ್ಡಿಗೆ ಈ ಬಾರಿ ಮತದಾರರು ಕೈ ಹಿಡಿಯುತ್ತಾರಾ ಎನ್ನವುದು ಯಕ್ಷ ಪ್ರಶ್ನೆಯಾಗಿದೆ. ಈಗಾಗಲೇ ಚುನಾವಣಾ ಘೋಷಣೆಗೂ ಮೊದಲೇ ಬೃಹತ್ ರಾಜಕೀಯ ಸಮಾವೇಶ ನಡೆಸಿ ಶಕ್ತಿ ಪ್ರದರ್ಶಿಸಿರುವ ಸಿಪಿಎಂ ಕ್ಷೇತ್ರದಲ್ಲಿ ಸಾಕಷ್ಟು ವರ್ಚಸ್ಸು ಹೊಂದಿದೆ. ಜೊತೆಗೆ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಎದ್ದು ಕಾಣುತ್ತಿರುವ ಬಂಡಾಯದ ಬೇಗುದಿ ಸಿಪಿಎಂಗೆ ವರದಾನವಾಗುವ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಸಮಾಜ ಸೇವೆ ಹೆಸರಿನಲ್ಲಿ ರಾಜಕೀಯವಾಗಿ ಕ್ಷೇತ್ರದಲ್ಲಿ ತಳವೂರಿರುವ ಹಾಲಿ ಶಾಸಕ ಎಸ್.ಎನ್.ಸುಬ್ಟಾರೆಡ್ಡಿ ಹಾಗೂ ಜೆಡಿಎಸ್ನಿಂದ ಸ್ಪರ್ಧಿಸಲಿರುವ ಸಿ.ಆರ್.ಮನೋಹರ್ ಸಿಪಿಎಂಗೆ ಪ್ರಬಲ ಪೈಪೋಟಿ ನೀಡಲಿದ್ದಾರೆ.
ಜೆಡಿಎಸ್ಗೂ ಬಿಡದ ಬಂಡಾಯ ಬಿಸಿ: ಚುನಾವಣಾ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದಾಗನಿಂದಲೂ ಚಲನ ಚಿತ್ರ
ನಿರ್ಮಾಣ ಸಿ.ಆರ್.ಮನೋಹರ್ ಬಾಗೇಪಲ್ಲಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಆಗಾಗ ಡಿಜೆ ನಾಗ ರಾಜರೆಡ್ಡಿಗೆ ಸಿಗಬೇಕಿದ್ದ ಜೆಡಿಎಸ್ ಭಿ.ಪಾರಂ ಕೊನೆ ಗಳಿಗೆಯಲ್ಲಿ ಸಿ. ಆರ್.ಮನೋಹರ್ಗೆ ಒಲಿದಿದ್ದು ಮನೋ ಹರ್ ಸ್ಪರ್ಧೆ ಖಚಿತವಾಗಿದೆ. ಇನ್ನೂ ಜೆಡಿಎಸ್ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡರೆ ಜೆಡಿಎಸ್ ಕಣದಿಂದ ಹಿಂದೆ ಸರಿಯಬೇಕಿತ್ತು. ಆದರೆ ಜೆಡಿಎಸ್ ವರಿಷ್ಠ ದೇವೇಗೌಡ ಎಡಪಕ್ಷಗಳ ಜೊತೆ ಮೈತ್ರಿ ಇಲ್ಲ ಎಂದಿದ್ದಾರೆ. ಹೀಗಾಗಿ ಜೆಡಿಎಸ್ ಸ್ಪರ್ಧೆ ಖಚಿತವಾದರೂ ಪಕ್ಷಕ್ಕೆ ಬಂಡಾಯದ ಬಿಸಿ ಅಂಟಿಕೊಂಡಿದೆ.
ತನಗೆ ಟಿಕೆಟ್ ಸಿಕ್ಕಿಲ್ಲ ಎಂದು ಸ್ಥಳೀಯ ಪ್ರಭಾವಿ ಮುಖಂಡ ಗುಂಜೂರು ಶ್ರೀನಿವಾಸರೆಡ್ಡಿ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿ ಕ್ಷೇತ್ರದಲ್ಲಿ ಮಿಂಚಿನಂತೆ ಸಂಚರಿಸುತ್ತಿರುವುದು ಜೆಡಿಎಸ್ಗೆ ಆತಂಕವಾಗಿದೆ.
ಯಾವ ಹೋಬಳಿ ಯಾರ ಕಡೆಗೆ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಗೂಳೂರು, ಕಸಬಾ, ಮಿಟ್ಟೇಮರಿ, ಚೇಳೂರು ಸೇರಿ ಒಟ್ಟು ನಾಲ್ಕು ಹೋಬಳಿದ್ದು, ಈ ಪೈಕಿ ಕಸಬಾದಲ್ಲಿ ಸಿಪಿಎಂ ಪ್ರಾಬಲ್ಯ ಮೆರದಿದ್ದರೆ ಮಿಟ್ಟೇಮರಿ, ಗೂಳೂರು ಹೋಬಳಿಗಳಲ್ಲಿ ಕಾಂಗ್ರೆಸ್ ಹಿಡಿತ ಹೊಂದಿದೆ. ಉಳಿದದಂತೆ ಚೇಳೂರು ಹೋಬಳಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಸಮಬಲದ ಹೋರಾಟ ನಡೆಸಲಿವೆ.
ಬಿಜೆಪಿಯಲ್ಲಿ ಗೊಂದಲಮಯ ರಾಜಕೀಯವಾಗಿ ಭದ್ರ ನೆಲೆ ಇಲ್ಲದ ಭಾಗೇಪಲ್ಲಿ ತಾಲೂಕಿನಲ್ಲಿ ಬಿಜೆಪಿ ಈ ಬಾರಿ ಚುನಾವಣಾ ಅಖಾಡಕ್ಕೆ ಸಜ್ಜಾಗುತ್ತಿದ್ದರೂ ಅಭ್ಯರ್ಥಿಗಳು ಯಾರೆಂಬ ಗೊಂದಲ ಮುಂದುವರಿದಿದೆ. ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಹುಭಾಷಾ ನಟ ಸಾಯಿಕುಮಾರ್ ಚುನಾವಣಾ ಘೋಷಣೆ ಮೊದಲೇ ಕ್ಷೇತ್ರದಲ್ಲಿ ಸಂಚರಿಸಿ ರಾಜಕೀಯ ವಲಯದಲ್ಲಿ ಸಂಚಲನ ಉಂಟು ಮಾಡಿದರು. ಆದರೆ ಇದೀಗ ಟಿಕೆಟ್ ಗೊಂದಲದಿಂದ ಕ್ಷೇತ್ರದ ಕಡೆಗೆ ಕಾಲಿಡುತ್ತಿಲ್ಲ.
ಇನ್ನೂ ನನಗೆ ಬಿಜೆಪಿ ಟಿಕೆಟ್ ಎಂದು ಹೇಳಿಕೊಂಡು ಸಮಾಜ ಸೇವಕ ಅರಿಕೆರೆ ಕೃಷ್ಣಾರೆಡ್ಡಿ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ.
ಆದರೆ ಬಿಜೆಪಿ ವರಿಷ್ಠರು ಯಾರಿಗೆ ಟಿಕೆಟ್ ಕೊಡುತ್ತಾರೆ ಎನ್ನುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ.
ನಟ ಸಾಯಿ ಕುಮಾರ್ ಸ್ಪರ್ಧಿಸಿದರೆ ಕಾಂಗ್ರೆಸ್, ಸಿಪಿಎಂಗೆ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್