ಮಹಿಳೆಯರು ರಾಜಕೀಯದಲ್ಲಿ ಸಕ್ರಿಯರಾಗಲಿ 


Team Udayavani, Feb 23, 2019, 7:29 AM IST

mahlr.jpg

ಶಿಡ್ಲಘಟ್ಟ: ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ ಸಲಹೆ ನೀಡಿದರು. 

ನಗರದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಸಮಿತಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಯಾಸ್ಮಿàನ್‌ ತಾಜ್‌ ಅವರನ್ನು ಅಭಿನಂದಿಸಿ ರಾಜ್ಯಾಧ್ಯಕ್ಷರು ನೀಡಿರುವ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಪಕ್ಷ ಮೊದಲಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿ ಸಮಾನ ಅವಕಾಶ ಕಲ್ಪಿಸುತ್ತಾ ಬಂದಿದೆ. ಸ್ಥಳೀಯ ಸಂಸ್ಥೆಗಳಾದ ಜಿಪಂ, ತಾಪಂ, ಗ್ರಾಪಂ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಯಲ್ಲಿ ಅವಕಾಶ ಕಲ್ಪಿಸುವ ಜೊತೆಗೆ ಅಧಿಕಾರ ಸಹ ಒದಗಿಸಿದೆ ಎಂದರು.

ಬಡ್ಡಿರಹಿತ ಸಾಲ ಸೌಲಭ್ಯ: ಮಹಿಳೆಯರು ಮೊದಲು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿ ಸಮಾಜ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸ್ತ್ರೀಶಕ್ತಿ ಸಂಘಗಳನ್ನು ರಚಿಸಲಾಯಿತು. ಸ್ವಸಹಾಯ ಸಂಘಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ಡಿಸಿಸಿ ಬ್ಯಾಂಕ್‌ ಮೂಲಕ ಬಡ್ಡಿರಹಿತ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು.

ಕ್ಷೇತ್ರದಲ್ಲಿ ಮಹಿಳಾ ಕಾಂಗ್ರೇಸ್‌ ನಗರ ಘಟದ ಅಧ್ಯಕ್ಷೆಯಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿದ ಯಾಸ್ಮಿàನ್‌ ತಾಜ್‌ ಅವರ ಸೇವೆಯನ್ನು ಪಕ್ಷ ಗುರುತಿಸಿ ರಾಜ್ಯಮಟ್ಟದಲ್ಲಿ ಕಾರ್ಯದರ್ಶಿ ಸ್ಥಾನ ನೀಡಿದೆ. ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಸಹ ಭಾಗವಹಿಸಿ ನೊಂದವರಿಗೆ ನ್ಯಾಯ ಒದಗಿಸಬೇಕು. ಕ್ಷೇತ್ರದಲ್ಲಿ ಮಹಿಳಾ ಕಾಂಗ್ರೆಸ್‌ ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಸಕರ ಸಹಕಾರ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಕಾರ್ಯದರ್ಶಿ ಯಾಸ್ಮಿನ್‌ ತಾಜ್‌ ಮಾತನಾಡಿ,  ಶಾಸಕ ವಿ.ಮುನಿಯಪ್ಪ ಅವರ ಸಹಕಾರದಿಂದ ಜಿಲ್ಲೆಯಲ್ಲಿ ಶಕ್ತಿ ನೊಂದಣಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸಮಾಜದಲ್ಲಿರುವ ಪ್ರತಿಯೊಬ್ಬ ಬಡವರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರು ಸಹಕಾರ ನೀಡುವ ಜೊತೆಗೆ ಮಾರ್ಗದರ್ಶನ ನೀಡಿದ್ದ ಫ‌ಲದಿಂದಾಗಿ ರಾಜ್ಯ ಮಟ್ಟದಲ್ಲಿ ಕಾರ್ಯದರ್ಶಿ ಸ್ಥಾನ ಲಭಿಸಿದೆ ಎಂದರು.

ಮುಖಂಡರಾದ ಮೊಹಮದ್‌ ಹಫೀಜ್‌, ಶಿಡ್ಲಘಟ್ಟ ಬ್ಲಾಕ್‌ ಕಾಂಗ್ರೆಸ್‌ ಮೈನಾರಿಟಿ ಘಟಕದ ಅಧ್ಯಕ್ಷ ಅಮ್ಜದ್‌ ನವಾಜ್‌, ನಗರಸಭಾ ನಾಮನಿರ್ದೇಶಿತ ಸದಸ್ಯ ಅಬ್ದುಲ್‌ ಗಫ‌ೂರ್‌, ಬ್ಲಾಕ್‌ ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಅಧ್ಯಕ್ಷ ಇಮಿ¤ಯಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.