ಬಳಕೆಗೆ ಬಾರದ ಮಹಿಳಾ ವಿಶ್ರಾಂತಿ ಗೃಹ
Team Udayavani, May 22, 2018, 2:05 PM IST
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ತೆರೆದ ಮಹಿಳಾ ವಿಶ್ರಾಂತಿ ಕೊಠಡಿ ಮಾತ್ರ ಮಹಿಳಾ ಸಿಬ್ಬಂದಿ ಪಾಲಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.
ಜಿಲ್ಲಾಡಳಿತ ಭವನದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಮಧ್ಯಾಹ್ನದ ವೇಳೆ ವಿಶ್ರಾಂತಿ ಪಡೆಯಲು ವಿಶ್ರಾಂತಿ ಕೊಠಡಿ ಇಲ್ಲ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಡಿಸಿ ಕಚೇರಿ ಸಭಾಂಗಣದ ಪಕ್ಕದಲ್ಲಿ ವಿಶ್ರಾಂತಿ ಕೊಠಡಿಯನ್ನು ತಾತ್ಕಲಿಕವಾಗಿ ತೆರೆದಿದೆ. ಆದರೆ, ಮೂರು ತಿಂಗಳಾದರೂ ಕೊಠಡಿಗೆ ಬೇಕಾದ ಮೂಲ ಸೌಕರ್ಯ ಇಲ್ಲದೇ ವಿಶ್ರಾಂತಿ ಕೊಠಡಿಯನ್ನು ಜಿಲ್ಲಾಡಳಿ ಬರೀ ಹೆಸರಿಗೆ ಮಾತ್ರ ತೆರೆದಂತೆ ಕಾಣುತ್ತಿದೆ.
36ಕ್ಕೂ ಹೆಚ್ಚು ಇಲಾಖೆಗಳು ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿವೆ. ಮಹಿಳೆಯರಿಗೆ ಸುಭದ್ರತೆ ದೃಷ್ಟಿಯಿಂದ ಎಲ್ಲಾ ಕಡೆ ಸಿಸಿ ಕ್ಯಾಮರಾಗಳನ್ನು ಹಾಕಲಾಗಿದೆ. ಆದರೆ, ವಿಶ್ರಾಂತಿ ಕೊಠಡಿ ಇಲ್ಲ ಎಂಬ ಕೊರಗನ್ನು ಜಿಲ್ಲಾಡಳಿತ ನೀಗಿಸಿದರೂ ವಿಶ್ರಾಂತಿ ಪಡೆಯಲು ಬೇಕಾದ ಆಸನಗಳ ವ್ಯವಸ್ಥೆ ಇಲ್ಲದೇ ಕೊಠಡಿಯನ್ನು ಜಿಲ್ಲಾಡಳಿತ ಕಾಟಾಚಾರಕ್ಕೆ ತೆರೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಕೊಠಡಿಗೆ ಬೀಗ: ಇನ್ನೂ ಮೂಲ ಸೌಕರ್ಯಗಳ ವಂಚಿತ ಮಹಿಳಾ ವಿಶ್ರಾಂತಿ ಕೊಠಡಿಯನ್ನು ತೆಗೆಯುವುದೇ ಇಲ್ಲ. ಸದಾ ಕಾಲ ಬಾಗಿಲು ಹಾಕಿರುತ್ತಾರೆಂದು ಜಿಲ್ಲಾಡಳಿತ ಭವನದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಯೊಬ್ಬರು ತಿಳಿಸಿದರು.
ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ಅಗತ್ಯ. ಆದರೆ, ಸದ್ಯ ನಿರ್ಮಿಸಿರುವ ಕೊಠಡಿ ಸಮರ್ಪಕವಾಗಿಲ್ಲ. ಸಾರ್ವಜನಿಕರು ಓಡಾಡುವ ಮೆಟ್ಟಿಲು ಪಕ್ಕದಲ್ಲಿಯೇ ಕೊಠಡಿ ತೆರೆಯಲಾಗಿದೆ. ಕುಡಿಯುವ ನೀರು ಮತ್ತಿತರ ಸೌಕರ್ಯ ಇರುವ ವಿಶ್ರಾಂತಿ ಕೊಠಡಿ ನಿರ್ಮಿಸಿದರೆ ಹೆಚ್ಚು ಅನುಕೂಲ ಎಂದು ಹೆಸರು ಹೇಳಲು ಇಚ್ಛಿಸದ ಮಹಿಳಾ ಸಿಬ್ಬಂದಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ