ಗ್ರಾಮ ವಾಸ್ತವ್ಯ ಯಶಸ್ಸಿಗೆ ಶ್ರಮಿಸಿ
Team Udayavani, Feb 21, 2021, 3:35 PM IST
ಚಿಂತಾಮಣಿ: ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಪ್ರತಿಯೊಂದು ಇಲಾಖೆಯ ಅಧಿಕಾರಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಮಾತ್ರ ಸಾಧ್ಯ ಎಂದು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ತಿಳಿಸಿದರು.
ತಾಲೂಕಿನ ಆನೂರು ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರದ ಸೌಲಭ್ಯಗಳು ಫಲಾನುಭವಿ ಬಾಗಿಲಿಗೆ ತಲುಪಲು ಸರ್ಕಾರ ಜಾರಿ ಮಾಡಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ತಕ್ಷಣದಲ್ಲೇ ಪರಿಹರಿಸಲು ಸಾಧ್ಯವಾಗುತ್ತಿದೆ. ಇದರಿಂದ ಸರ್ಕಾರಿ ಸೌಲಭ್ಯಗಳು ಸಕ್ರಿಯವಾಗಿ ಅರ್ಹ ಫಲಾನುಭವಿಗಳ ಕೈಸೇರುವುದರ ಜತೆಗೆ ಸರ್ಕಾರಿ ಸೌಲಭ್ಯಗಳನ್ನು ಪಡೆದು ಫಲಾನುಭವಿಗಳು ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಅಲ್ಲದೇ, ಸರ್ಕಾರ ರೂಪಿಸಿರುವ ಈ ಕಾರ್ಯಕ್ರಮ ಗ್ರಾಮೀಣ ಜನರ ಅಭಿ ವೃದ್ಧಿಗೆ ಸಹಕಾರಿ ಆಗಿರುವುದು ಶ್ಲಾಘನೀಯವೆಂದರು.
ಇನ್ನು ಪ್ರತಿ ತಿಂಗಳು ನಡೆಯುವ ಗ್ರಾಮವಾಸ್ತವ್ಯ ಬಗ್ಗೆ ಮುಂಚಿತವಾಗಿಯೇ ಪ್ರಚಾರ ಕೈಗೊಳ್ಳಬೇಕು ಎಂದ ಅವರು, ಮುಂದಿನ ಗ್ರಾಮವಾಸ್ತವ್ಯ ಸಂತೆಕಲ್ಲ ಹಳ್ಳಿಯಲ್ಲಿ ನಡೆಯುವುದಾಗಿ ತಿಳಿಸಿದರು.
ಆನೂರಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ :
ಚಿಂತಾಮಣಿ: ವಿವಿಧ ಇಲಾಖೆ ಅಧಿಕಾರಿಗಳ ಜತೆಗೂಡಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಹನುಮಂತರಾಯಪ್ಪ ಆನೂರು ಗ್ರಾಮದಲ್ಲಿ ಚಾಲನೆ ನೀಡಿದರು.
ಗಾಂಧೀಜಿಯವರ ಕನಸನ್ನು ನನಸು ಮಾಡಲು ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡುವ ಸಲುವಾಗಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಆಯಾ ತಾಲೂಕುಗಳಲ್ಲಿ ಆಯ್ಕೆ ಮಾಡಿಕೊಂಡಿರುವ ಗ್ರಾಮಗಳಲ್ಲಿ ನಡೆಯಿತು. ಕಂದಾಯ ಅಧಿಕಾರಿಗಳು, ಕೃಷಿ, ರೇಷ್ಮೆ, ಸಮಾಜಕಲ್ಯಾಣ, ಹಿಂದುಳಿದ ವರ್ಗ, ಸಿಡಿಪಿಒ, ಪಶು ವೈದ್ಯಕೀಯ, ತಾಪಂ, ಶಿಕ್ಷಣ, ಪೊಲೀಸ್, ದಿವ್ಯಾಂಗ, ಅಬಕಾರಿ, ಸಾರಿಗೆ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಸಾರ್ವಜನಿಕರ ಕುಂದುಕೊರತೆ ಆಳಿಸಿ ಸಾಧ್ಯವಾದ ದೂರುಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾ ಯಿತು. ಗ್ರಾಪಂ ಅಧ್ಯಕ್ಷ ಸತೀಶ್ ಕುಮಾರ್, ಶ್ರೀನಿವಾಸರೆಡ್ಡಿ, ಮುನೇಗೌಡ, ರಜಿನಿ, ಆರ್ಐ ಅಮರೇಶ್,ಗ್ರಾಮ ಲೆಕ್ಕಿಗರಾದ ನಾಗರಾಜ್, ಶಶಿಕಲಾ, ಪಾರ್ವತಿ ಮುಖಂಡರಾದ ಶ್ರೀನಿವಾಸ್, ಮುನಿರೆಡ್ಡಿ, ಗಂಗಾಧರ, ನಾಗರಾಜ್, ಕೃಷ್ಣಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ