ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಅಪೂರ್ಣ
Team Udayavani, Jun 5, 2019, 3:00 AM IST
ಗೌರಿಬಿದನೂರು: ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಿಮೆಂಟ್ರಸ್ತೆ ಮತ್ತು ಚರಂಡಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ಒಂದೂವರೆ ವರ್ಷವಾದರೂ ಯಾವುದೇ ಕ್ರಮಕೈಗೊಳ್ಳದಿರುವುದು ಶೋಚನೀಯ ಸಂಗತಿಯಾಗಿದೆ.
ಇದರ ಪರಿಣಾಮ ಬೇಸಿಗೆಯ ಬೇಗೆ ಜೊತೆಗೆ ಚರಂಡಿ ನೀರು ತುಂಬಿರುವುದರಿಂದ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ನಗರವಿದೆ.
ಗೌರಿಬಿದನೂರು ನಗರಸಭೆ ವ್ಯಾಪ್ತಿಯಲ್ಲಿನ ರಸ್ತೆಗಳನ್ನು ಮತ್ತು ಚರಂಡಿಗಳನ್ನು ದುರಸ್ತಿಗೊಳಿಸಿ ಹಾಗೂ ಹೊಸದಾಗಿ ನಿರ್ಮಿಸಲು ನಗರೋತ್ಥಾನ ಯೋಜನೆಯಲ್ಲಿ 4.27ಕೋಟಿ ರೂ.ಗಳ ಟೆಂಡರ್ ಬಿಡುಗಡೆಯಾಗಿ ಒಂದೂವರೆ ವರ್ಷ ಕಳೆದಿದೆ. ಕಾಮಗಾರಿ ಪೂರ್ಣಗೊಳ್ಳದೇ ಸ್ಥಗಿತಗೊಂಡಿದ್ದು ರಸ್ತೆಗಳು ಪೂರ್ಣಗೊಳ್ಳದೇ ಚರಂಡಿಗಳ ದುರಸ್ತಿಯೂ ಪ್ರಾಂಭವಾಗದೆ, ಚರಂಡಿ ಕೊಳಚೆ ನೀರು ತುಂಬಿ ರೋಗ ಭೀತಿಯಲ್ಲಿ ಜನತೆ ಜೀವನ ಸಾಗಿಸುವಂತಾಗಿದೆ.
ಗೌರಿಬಿದನೂರು ನಗರಸಭೆಗೆ ನಗರೋತ್ಥಾನ ಯೋಜನೆ 3ರಲ್ಲಿ 4.27ಕೋಟಿ ರೂ. ಟೆಂಡರ್ ನ್ನು 19 ಫೆಬ್ರವರಿಯಲ್ಲಿ ಪ್ರಾರಂಭಿ ಸಿ 18ನೇ ನವೆಂಬರ್ 2018ರಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಿದ್ದರು. 9ತಿಂಗಳಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಒಂದೂವರೆ ವರ್ಷ ಕಳೆದರೂ ಬಹುತೇಕ ಕಾಮಗಾರಿ ಪ್ರಾರಂಭವಾಗಿಲ್ಲ ಎನ್ನಲಾಗಿದೆ.
ನಗರದ ಬಿ.ಎಚ್. ರಸ್ತೆ ಅಗಲೀಕರಣದ ನಂತರ ರಸ್ತೆಯ ಎರಡೂ ಕಡೆಗಳಲ್ಲಿ ಹೊಸದಾಗಿ ನಿರ್ಮಿಸಿದ್ದು ಸುಮಾರು 9ಕ್ಕೂ ಹೆಚ್ಚು ವಾರ್ಡ್ ಗಳಿಂದ ಬರುವಂತಹ ತ್ಯಾಜ್ಯ ನೀರು ಸರಾಗವಾಗಿ ಹರಿಯುತ್ತಿಲ್ಲ ಮಾಧವ ನಗರ ಮರಿಯಮ್ಮ ದೇವಸ್ಥಾನ ಮತ್ತು ಅಭಿಲಾಷ್ ವೃತ್ತದಲ್ಲಿ ಮಾತ್ರ ಕೆಲವೆಡೆ ನೀರು ಹರಿಯುತ್ತಿದ್ದು, ಉಳಿದಂತೆ ನಗರದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೂ ಸುಮಾರು 2.5 ಕಿ.ಮೀ. ಉದ್ದವಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಸಾಗುತ್ತಿಲ್ಲ ಇದು ಒಂದೆಡೆಯಾದರೆ ನಗರಸಭೆಯ ನಗರೋತ್ಥಾನ ವಿಶೇಷ ನಿಧಿ,
ಪುರಸಭೆ ನಿಧಿ, 14ನೇ ಹಣಕಾಸು ನಿಧಿ ಸೇರಿದಂತೆ ಹಲವಾರು ನಿಧಿಗಳನ್ನು ಬಳಸಿಕೊಂಡು ಒಟ್ಟಾರೆ 25ಕೋಟಿ ರೂ.ಗಳಷ್ಟು ಕಾಮಗಾರಿಗಳಿಗೆ ಚಾಲನೆ ನೀಡಿದ್ದರೂ ವೈಜ್ಞಾನಿಕವಾಗಿ ಮಾಡದೇ ಇರುವ ಕಾರಣ ಮಳೆಗಾಲದಲ್ಲಿ ಚರಂಡಿ ನೀರು ರಸ್ತೆ ಮತ್ತು ಅಂಗಡಿ ಮನೆಗಳಿಗೆ ನುಗ್ಗುತ್ತದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ಪ್ರತಿವಾರ್ಡುಗಳಲ್ಲಿ ಚಂರಡಿ ಮತ್ತು ಸಿಮೆಂಟ್ ರಸ್ತೆಗಳಾಗಬೇಕು ಎಂಬ ಕಾರಣದಿಂದ ಎಲ್ಲಾ ಸದಸ್ಯರೂ ಸೇರಿ ಅನುಮೋದನೆ ನೀಡಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಗುತ್ತಿಗೆದಾರ ಅಪೂರ್ಣಕಾಮಗಾರಿ ಮಾಡಿ ನಾಪತ್ತೆಯಾಗಿದ್ದಾನೆ. ಅಧಿಕಾರಿಗಳು ಶಾಮೀಲಾಗಿರುವುದರಿಂದ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.
-ಮಾರ್ಕೆಟ್ ಮೋಹನ್, ನಗರಸಭೆ ಮಾಜಿ ಸದಸ್ಯ
ನಾನು ಆಯುಕ್ತನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡು ಬಾರಿ ಗುತ್ತಿಗೆದಾರನಿಗೆ ನೋಟೀಸ್ ನೀಡಿ ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಸೂಚಿಸಿದ್ದೇನೆ ಅದನ್ನೂ ಮೀರಿ ಗುತ್ತಿಗೆದಾರ ವಿಳಂಬ ಮಾಡಿದರೆ ದಂಡವಿಧಿಸುವ ಜೊತೆಗೆ ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಿಗೆ ವರದಿನೀಡಲಾಗುವುದು.
-ಉಮಾಕಾಂತ್, ಆಯುಕ್ತರು ನಗರಸಭೆ ಗೌರಿಬಿದನೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್