ಹಿರಿಯರ ಪಾಲನೆ ಜವಾಬ್ದಾರಿ ನಿರ್ವಹಿಸಿ


Team Udayavani, Oct 3, 2020, 2:22 PM IST

ಹಿರಿಯರ ಪಾಲನೆ ಜವಾಬ್ದಾರಿ ನಿರ್ವಹಿಸಿ

ಚಿಕ್ಕಬಳ್ಳಾಪುರ: ಹಿರಿಯ ನಾಗರಿಕರು ತಮ್ಮ ವಾರಸುದಾರರಿಂದ ಅಸುರಕ್ಷತೆಯನ್ನು ಹೊಂದಿದಾಗ ನೇರವಾಗಿ ಜಿಲ್ಲಾಡಳಿತಕ್ಕೆ ಅರ್ಜಿ ನೀಡಿ 90 ದಿನಗಳೊಳಗೆ ನ್ಯಾಯ ಪಡೆಯಬಹುದೆಂದು ಅಪರ ಜಿಲ್ಲಾಧಿಕಾರಿಗಳಾದ ಅಮರೇಶ್‌ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಾಗಿದ್ದ ವಿಶ್ವ ಹಿರಿಯನಾಗರಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಮಸ್ಯೆಗೆ ಪರಿಹಾರ: ಜಿಲ್ಲೆಯ ನಾಗರಿಕರು ತುಂಬಾ ಪ್ರಾಮಾಣಿಕತೆ ಮತ್ತು ಆತ್ಮೀಯತೆಯಿಂದ ವರ್ತಿಸುತ್ತಾರೆ. ಇದು ಅಭಿನಂದನಾರ್ಹ ವಿಷಯ. ಹಿರಿಯ ನಾಗರಿಕರು ತಮ್ಮ ವೃದ್ಯಾಪ್ಯದ ಜೀವನೋ ಪಾಯಕ್ಕಾಗಿ ಕನಿಷ್ಠ ಮಟ್ಟದ ಉಳಿತಾಯ ಹೊಂದಿರಬೇಕು ಎಂಬ ಜಾಗೃತಿ ಭಾವನೆ ಇರಬೇಕು ಹಾಗೂ ಯಾವುದೇ ರೀತಿಯ ಮಕ್ಕಳ/ವಾರಸುದಾರರಿಂದ ಅನ್ಯಾಯ ಕ್ಕೊಳಗಾದಾಗ ನೇರವಾಗಿ ಕಾನೂನು ಸೇವೆವತಿಯಿಂದ ನೆರವು ಪಡೆದುಕೊಂಡು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಅವಕಾಶ ನಮ್ಮ ಕಾನೂನಿನಲ್ಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಸದಸ್ಯ ಕಾರ್ಯದರ್ಶಿ ಎಚ್‌.ದೇವರಾಜ್‌ ಮಾತನಾಡಿ, ಹಿರಿಯ ನಾಗರಿಕರು ಸ್ವಾಭಿಮಾನದ ಜೀವಿಗಳಾಗಿದ್ದು, ಅವರನ್ನುನೋಡಿಕೊಳ್ಳುವಧಾರ್ಮಿಕ ಜವಾಬ್ದಾರಿ ಇರಬೇಕಾಗುತ್ತದೆ ಎಂದರು.

ಹಿರಿಯ ನಾಗರಿಕರು ಕಾನೂನು ರೀತ್ಯ ಮಾಡುವಂತಹ ಆಸ್ತಿಗಳಿಗೆ ಸಂಬಂಧಿಸಿದ ಯಾವುದೇ ವಿಲ್‌ಗ‌ಳು ಅಂಗೀಕಾರ ವಾಗುವುದು ಅವರ ಮರಣದ ನಂತರ. ಆದರೆ, ವಿಲ್‌ ಮಾಡಿದ್ದರೂ ಕೂಡ ಆಸ್ತಿಯನ್ನು ಮಾರಾಟ ಮಾಡುವಂತಹ ಅಧಿಕಾರವುಹಿರಿಯನಾಗರೀಕರಿಗಿರುತ್ತದೆ. ಕಾನೂನಿನ ಮೂಲಕ ಯಾವುದೇ ಹೋರಾಟ ಮಾಡಬೇಕಾದಲ್ಲಿ ರೂ. 1.25 ಲಕ್ಷಕ್ಕಿಂತ ಕಡಿಮೆ ಆದಾಯವಿದ್ದಲ್ಲಿ ಅವರ ಪರ ಸರ್ಕಾರದ ರೀತ್ಯ ಯಾವುದೇ ಶುಲ್ಕ ವಿಲ್ಲದೆ ಲಾಯರ್‌ನ್ನು ನೇಮಿಸಿ ಕೊಡಲಾಗುತ್ತದೆ.

ಜೀವನಾಂಶ ನೀಡಬೇಕು: ಹಿರಿಯ ನಾಗರಿಕರನ್ನು ನೋಡಿಕೊಳ್ಳದವರಿಗೆ 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.5ಸಾವಿರ ದಂಡ ವಿಧಿಸಲಾಗುತ್ತದೆ. ಸ್ವತಃ ನೋಡಿಕೊಳ್ಳಲು ಆಗದಂತಹ ಮಕ್ಕಳು/ವಾರಸುದಾರರು ಅವರ ತಂದೆ ತಾಯಿಗೆ ಜೀವನಾಂಶ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ವೇಗದ ಈ ಜೀವನದಲ್ಲಿ ವೇಗವಲ್ಲದ ಜೀವನದಲ್ಲಿ ಬೆಳೆದಂತಹ ಹಿರಿಯರು ಅರ್ಥಮಾಡಿಕೊಂಡು ಕಾಲಕ್ಕನುಗುಣವಾಗಿ ಹೊಂದಿಕೊಂಡು ಹೋಗುವಂತಹ ಮನೋಭಾವನೆಯನ್ನು ಬೆಳೆಸಿಕೊಂಡಲ್ಲಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹು ದೆಂದು ಹೇಳಿದರು.

ಹಿರಿಯ ನಾಗರಿಕರು ಸರ್ಕಾರದ ಎಲ್ಲಾ ಸೇವೆಗಳನ್ನು ಉಪ ಯೋಗಿಸಿಕೊಳ್ಳಿ ಎಂದು ಹೇಳಿದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಹಿರಿಯ ನಾಗರಿಕ ರಾದ ಸುಬ್ಬರಾಯಪ್ಪ, ತಿರುಮಳಪ್ಪ, ನರಸಮ್ಮ, ನರಸಿಂಹಪ್ಪ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.ಜಿಲ್ಲಾ ಪ್ಯಾನಲ್‌ ವಕೀಲರಾದ ಕೆ.ಸಿ.ಪ್ರಕಾಶ್‌, ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆಯ ಉಪನಿರ್ದೇಶಕ ಎನ್‌.ನಾರಾಯಣಸ್ವಾಮಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ.ವಿ.ಜ್ಯೋತಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿವಿನೋದ್‌ ಕುಮಾರ್‌, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಜಿ.ವಿ.ವಿಶ್ವನಾಥ್‌, ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.