ಜಿಲ್ಲೆ ಹಿಪ್ಪುನೇರಳೆಗೆ ಆಂಧ್ರ ಹುಳು ಕಾಟ!

ಸಂಕಷ್ಟದ ನಡುವೆ ಹಿಪ್ಪುನೇರಳೆಗೆ ಕೀಟ ಬಾಧೆ ; ಬೆಳೆಗಾರರಲ್ಲಿ ಆತಂಕ

Team Udayavani, Apr 23, 2020, 1:19 PM IST

ಜಿಲ್ಲೆ ಹಿಪ್ಪುನೇರಳೆಗೆ ಆಂಧ್ರ ಹುಳು ಕಾಟ!

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಕೋವಿಡ್ ಸಂಕಷ್ಟದಿಂದ ಇಡೀ ದೇಶವೇ ಲಾಕ್‌ಡೌನ್‌ ಆಗಿ ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ, ಬೇಡಿಕೆ ಇಲ್ಲದೇ ರೈತಾಪಿ ಕೃಷಿ ಕೂಲಿ ಕಾರ್ಮಿಕರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ಹೊಸ ತಲೆ ನೋವು ಶುರುವಾಗಿದೆ. ಬೆವರು ಸುರಿಸಿ ಬೆಳೆದು ಕಾಟಾವಿಗೆ ಬಂದಿರುವ ಹಿಪ್ಪುನೇರಳೆ ಸೊಪ್ಪಿಗೆ ಈಗ ಕೀಟ ಬಾಧೆ ಕಾಣಿಸಿಕೊಂಡಿದೆ. ಮೊದಲೇ ಲಾಕ್‌ ಡೌನ್‌ನಿಂದ ರೇಷ್ಮೆಗೂಡು ಮಾರಾಟಕ್ಕೆ ಹರಸಾಹಸ ಪಡುತ್ತಾ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ರೇಷ್ಮೆ ಬೆಳೆಗಾರರಿಗೆ
ಕೀಟಬಾಧೆ ನಿದ್ದೆಗೆಡಿಸಿದ್ದು ತೋಟಗಳಲ್ಲಿ ಅಪಾರ ಪ್ರಮಾಣದ ಹಿಪ್ಪುನೇರಳೆ ಸೊಪ್ಪು ಈಗ ಕೈಗೆ ಬಾರದಂತಹ ಸ್ಥಿತಿ ತಲುಪುವಂತಾಗಿದೆ.

ನೆರೆಯ ಆಂಧ್ರಪ್ರದೇಶದಲ್ಲಿ ಹಲವು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಈ ಕೀಟ, ಈಗ ರಾಜ್ಯಕ್ಕೂ ಪ್ರವೇಶಿಸಿದ್ದು ಜಿಲ್ಲೆಯ ಶಿಡ್ಲಘಟ್ಟ ರೇಷ್ಮೆ ಬೆಳೆಗಾರರನ್ನು ಕಂಗಾಲಾಗಿಸಿದೆ. ಒಂದೆಡೆ ಬರ ಮತ್ತೂಂದಡೆ ಕೋವಿಡ್ ಲಾಕ್‌ಡೌನ್‌ನಿಂದ ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿರುವ ಜಿಲ್ಲೆಯ ರೈತರಿಗೆ ರೇಷ್ಮೆ ಗೂಡು ಉತ್ಪಾದನೆಗೆ ಅವಶ್ಯಕವಾದ ಹಿಪ್ಪು ನೇರಳೆ ಸೊಪ್ಪಿಗೆ ಕೀಟಬಾಧೆ ಕಾಣಿಸಿಕೊಂಡಿದ್ದು ರಾತ್ರಿ ವೇಳೆ ತೋಟಗಳಿಗೆ ದಾಳಿ ಇಡುತ್ತಿರುವ ಈ ಕೀಟಗಳ ದಾಳಿಯಿಂದ ಹಲವು ತಿಂಗಳ ಬೆವರಿನ ಶ್ರಮ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ನಿತ್ಯ 25 ರಿಂದ 30 ಟನ್‌ ರೇಷ್ಮೆಗೂಡು ಉತ್ಪಾದನೆ ಆಗುತ್ತಿದ್ದು ಲಾಕ್‌ಡೌನ್‌ನಿಂದ ಉತ್ಪಾದನೆ ಇಳಿಮುಖವಾದರೂ ಬೆಳೆದ ರೇಷ್ಮೆಗೂಡು ಮಾರಾಟಕ್ಕೆ ರೈತರು ಪರದಾಡುವಂತಾಗಿದೆ.

ಇರುಳಲ್ಲಿ ಮಾತ್ರ ಕಾಣಿಸುತ್ತವೆ
ಹಿಪ್ಪುನೇರಳೆ ಸೊಪ್ಪಿಗೆ ಸದ್ಯ ಆವರಿಸಿರುವ ಕೀಟಗಳು ಹಗಲಿನಲ್ಲಿ ಇರದೇ ಕೇವಲ ರಾತ್ರಿ ಹೊತ್ತು ಮಾತ್ರ ತೋಟಗಳಿಗೆ ಲಗ್ಗೆ ಇಟ್ಟು ಬೆಳೆದು ನಿಂತು ಕಾಟಾವಿಗೆ ಬಂದಿರುವ ರೇಷ್ಮೆ ಸೊಪ್ಪು ತಿಂದು ಹಾಳು ಮಾಡುತ್ತಿವೆ. ಇದು ಬೆಳೆಗಾರರನ್ನು ಆತಂಕಕ್ಕೀಡು ಮಾಡಿದ್ದು, ಕೃಷಿ ತಜ್ಞರು ಕೀಟ ಭಾದೆ ತಡೆಗೆ ಕ್ರಮ ವಹಿಸಬೇಕೆಂದು ಆಗ್ರಹ ರೇಷ್ಮೆ ಬೆಳೆಗಾರರಿಂದ ಕೇಳಿ ಬರುತ್ತಿದೆ.

ಇತ್ತೀಚೆಗೆ ಈ ಮಾದರಿ ಹುಳುಗಳು ಪಕ್ಕದ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಂಡಿದ್ದವು. ಆಗಲೇ ನಾವು ರಾಜ್ಯದ ರೇಷ್ಮೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಹಾಗೂ ಕೃಷಿ ತಜ್ಞರಿಗೆ ಮಾಹಿತಿ ನೀಡಿದ್ದವು. ರೇಷ್ಮೆ ಆಯುಕ್ತರಿಗೆ ಈ ವಿಚಾರ ತಿಳಿಸಲಾಗಿದೆ. ಅಧಿಕಾರಿಗಳು ಕೀಟಬಾಧೆ ನಿಯಂತ್ರಣಕ್ಕೆ ಕೂಡಲೇ ಕ್ರಮ ವಹಿಸಬೇಕು.
● ಭಕ್ತರಹಳ್ಳಿ ಬೈರೇಗೌಡ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.