ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಸಿದ್ಧ
Team Udayavani, Dec 13, 2020, 7:27 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಲುಸರ್ಕಾರ ಬದ್ಧವಾಗಿದ್ದು, ಮುಂದಿನ ಮೂರೂವರೆ ವರ್ಷಗಳ ಅವಧಿಯಲ್ಲಿ ಜಿಲ್ಲೆಗೆ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಭರವಸೆ ನೀಡಿದರು.
ನಗರದಲ್ಲಿ ತಾಲೂಕು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ 77ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಸಿಎಂ ಬಳಿ ಮನವಿ: ಈ ಭಾಗದ ಜನರಿಗೆ ಎತ್ತಿನಹೊಳೆ ಯೋಜನೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರತಿಯೊಂದು ಸಚಿವ ಸಂಪುಟ ಸಭೆಯಲ್ಲಿ ಒತ್ತಾಯಮಾಡುತ್ತಿದ್ದು, ಮುಂದಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿ ಸಲು ಅಗತ್ಯ ಅನುದಾನ ಮೀಸಲಿಡಲು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದೇನೆ ಎಂದರು. ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆಎಚ್.ಎನ್.ವ್ಯಾಲಿ ಯೋಜನೆ ಮೂಲಕ ಶುದ್ಧೀಕರಿಸಿದ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ26ಕೆರೆಗಳಿಗೆ ನೀರು ಹರಿಸಲಾಗಿದೆ. ಈ ಹಿಂದೆಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದರು.
ಪಿಎಲ್ಡಿಬ್ಯಾಂಕ್ ಸಣ್ಣಕಟ್ಟಡದಿಂದ ಸುಸಜ್ಜಿತಕಟ್ಟಡದಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಸಂತೋಷ ತಂದಿದೆ. ನಮ್ಮ ಆಶಯಕ್ಕೆ ಪೂರಕವಾಗಿ ಬ್ಯಾಂಕ್ನ ಆಡಳಿತ ಮಂಡಳಿ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.
ತಾಲೂಕಿನಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಹೆಚ್ಚಾಗಿದ್ದು, ಅವರಿಗೆವಾಣಿಜ್ಯಬೆಳೆ ಬೆಳೆಯಲುಪ್ರೋತ್ಸಾಹ ನೀಡಬೇಕಿದೆ. ಆಪೆಲ್,ಡ್ರಾಗನ್ ಫ್ರೊಟ್, ವನೀಲಾ ಬೆಳೆಯುವ ಪ್ರಗತಿಪರ ರೈತರು ನಮ್ಮಲ್ಲಿದ್ದಾರೆ. ಅವರಿಗೆ ಬ್ಯಾಂಕ್ ಬೆನ್ನೆಲುಬು ಆಗಬೇಕಿದೆ. ದ್ರಾಕ್ಷಿ ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿ ಈಗಾಗಲೇ ತೋಟಗಾರಿಕೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದರು.
ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಬ್ಯಾಂಕ್ ಅಧ್ಯಕ್ಷ ಪಿ.ನಾಗೇಶ್, ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜು, ತಾಪಂ ಅಧ್ಯಕ್ಷ ರಾಮಸ್ವಾಮಿ,ಮರಳಕುಂಟೆ ಕೃಷ್ಣಮೂರ್ತಿ, ಮುಖಂಡರಾದ ಗೋವಿಂದ ಸ್ವಾಮಿ, ಚನ್ನಕೇಶವ ರೆಡ್ಡಿ, ನಾಗೇಶ್, ಮೋಹನ್, ಪಿಳ್ಳಪ್ಪ, ಮಿಲ್ಟನ್ ವೆಂಕಟೇಶ, ನಾರಾಯಣಪ್ಪ, ಅಶ್ವತ್ಥಪ್ಪ, ಕೊಂಡಪ್ಪ, ನಾಗೇಶ್, ಕೃಷ್ಣಮೂರ್ತಿ, ಚಂದ್ರಣ್ಣ, ರಾಜಣ್ಣ, ಕೃಷ್ಣಾರೆಡ್ಡಿ, ನಾರಾಯಣಪ್ಪ, ಆನಂದ್, ತಿರುಮಲಪ್ಪ, ಆನಂದ್, ಸಾವಿ ತ್ರಮ್ಮ, ಮಂಜುಳಾ, ನಾಗೇಶ್, ಗವಿಯಪ್ಪ, ವೆಂಕಟಸ್ವಾಮಿ, ಲವಣ್ಣ, ನಂಜುಂಡಪ್ಪ,ಕಾಳೇಗೌಡ, ಮುನಿಸ್ವಾಮಿ, ಪ್ರಸಾದ್ ಹಾಗೂ ಬ್ಯಾಂಕ್ ಸದಸ್ಯರು ಉಪಸ್ಥಿತರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉದ್ಯೋಗ ಖಾತ್ರಿಯಿಂದ ಜೀವನ ಹಸನು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿದ ಜಿಲ್ಲಾಧಿಕಾರಿಗಳ ನೋಟಿಸ್
ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ! : ಮಹಿಳೆ ಸಹಿತ ನಾಲ್ವರ ಬಂಧನ
ಆಂಧ್ರ ಮಹಿಳೆಗೆ 75 ಲಕ್ಷ ರೂ.ವಂಚನೆ, ಹಲ್ಲೆ : ರೈಸ್ ಮಿಲ್ ಮಾಲೀಕನ ವಿರುದ್ಧ ಮಹಿಳೆ ಆರೋಪ
ಚಿಕ್ಕಬಳ್ಳಾಪುರ : ದ್ವಿತೀಯ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ- 2358 ಫಲಾನುಭವಿಗಳಿಗೆ
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್: ಪಿ.ವಿ. ಸಿಂಧು, ಸಮೀರ್, ಕ್ವಾರ್ಟರ್ ಫೈನಲ್ ಪ್ರವೇಶ
ಶಿವಮೊಗ್ಗದಲ್ಲಿ ಭಾರಿ ಕಂಪನ: ಭದ್ರಾ ಜಲಾಶಯದ ಸ್ಥಿತಿಗತಿ ಪರಿಶೀಲಿಸಿದ ಪ್ರಾಧಿಕಾರದ ಅಧ್ಯಕ್ಷೆ
ಚೀನ ಗ್ರಾಮ ನಿರ್ಮಾಣದ ವಿರುದ್ಧ ಪ್ರತಿಭಟನೆ
ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಮಲೆನಾಡಿನಲ್ಲಿ ಭಾರೀ ಶಬ್ದ; ಕಂಗಾಲಾಗಿ ಹೊರ ಬಂದ ಜನ