ಸತ್ಯಸಾಯಿ ಗ್ರಾಮದಲ್ಲಿ ಐದು ದಿನಗಳ ಜಾಗತಿಕ ಯುವ ಸಮಾವೇಶ
Team Udayavani, Nov 19, 2019, 12:29 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದ ಪ್ರೇಮಾಮೃತ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಶ್ರೀ ಸತ್ಯಸಾಯಿ ಬಾಬಾರ 94 ನೇ ಹುಟ್ಟು ಹಬ್ಬದ ಪ್ರಯುಕ್ತ ಸಮಾವೇಶಗೊಂಡಿವ ಐದು ದಿನಗಳ ಜಾಗತಿಕ ಯುವ ಸಮಾವೇಶಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮಿ ಚಾಲನೆ ನೀಡಿದರು.
ಸೇವಕತ್ವದಿಂದ ನಾಯಕತ್ವದಡೆಗೆ ಎಂಬ ಘೋಷಣೆಯಡಿ ಆಯೋಜಿಸಿರುವ ಯುವ ಸಮಾವೇಶದಲ್ಲಿ ಜಗತ್ತಿನ 32 ಕ್ಕೂ ಹೆಚ್ವು ರಾಷ್ಟ್ರಗಳಿಂದ 2000 ಕ್ಕೂ ಅಧಿಕ ಸಂಖ್ಯೆಯಲ್ಲಿ ಯುವಕ, ಯುವತಿಯರು ಪಾಲ್ಗೊಂಡಿದ್ದು ಇಡೀ ಪ್ರೇಮಾಮೃತಮ್ ಸಭಾಂಗಣದಲ್ಲಿ ಸಾಯಿಬಾಬಾ ಭಕ್ತರು ಕಿಕ್ಕಿರಿದು ತುಂಬಿದ್ದಾರೆ.
ಭಾವೈಕ್ಯ ಮೆರೆದ ಸಮ್ಮೇಳನ
ಸತ್ಯಸಾಯಿ ಗ್ರಾಮದಲ್ಲಿ ಆರಂಭಗೊಂಡಿರುವ ಜಾಗತಿಕ ಯುವ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ರಾಷ್ಟ್ರಗಳ ಶ್ವೇತಪಾತಕೆಗಳನ್ನು ಹಿಡಿದು ಸಾಯಿ ಭಕ್ತರು ಮೆರವಣಿಗೆ ನಡೆಸಿ ಭಾವೈಕ್ಯತೆ ಮೆರೆದರು. ಆರಂಭದಲ್ಲಿ ಸರ್ವಧರ್ಮಗಳ ಪ್ರಾರ್ಥನೆ ಸಲ್ಲಿಸಲಾಯಿತು.
ಅಮೇರಿಕಾ ಆಸ್ಟ್ರೇಲಿಯಾ, ಜಪಾನ್, ಸಿಂಗಪುರ್, ನೇಪಾಳ್ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಸಾಯಿ ಭಕ್ತರು ಭಾಗವಹಿಸಿದ್ದಾರೆ. ವಿದೇಶಿ ಮಹಿಳೆಯರು ದೇಶದ ಉಡುಗೆಗಳನ್ನು ತೊಟ್ಟು ಗಮನ ಸೆಳೆದರು.
ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಸದ್ಗುರು ಶ್ರೀ ಸಾಯಿ ಮಧುಸೂದನ್ ವಹಿಸಿದ್ದು, ವೇದಿಕೆಯಲ್ಲಿ ಬನರಾಸದ ಹಿಂದೂ ವಿಶ್ವವಿದ್ಯಾಲಯ ರಾಕೇಶ್ ಉಪಾಧ್ಯಾಯ, ಅಮೇರಿಕಾ ಖ್ಯಾತ ಉದ್ಯಮಿ ಐಸಾಕ್, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ.ಎನ್. ನರಸಿಂಹಮೂರ್ತಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾಯಿ ಬಾಬಾ ಭಕ್ತರು ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
Chikballapur; ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ