ಕಸ ವಿಲೇವಾರಿಗೆ ಆಕ್ರೋಶ

ಇಂದಾವರದಲ್ಲಿ ನಗರಸಭೆ ಕಸದ ವಾಹನ ತಡೆದು ಪ್ರತಿಭಟನೆ

Team Udayavani, Jun 28, 2019, 11:21 AM IST

28-June-10

ಚಿಕ್ಕಮಗಳೂರು: ನಗರಸಭೆಯವರು ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿಲ್ಲ ಎಂದು ಆರೋಪಿಸಿ ಇಂದಾವರ ಗ್ರಾಮಸ್ಥರು ಕಸದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಗುರುವಾರ ಮೃತಪಟ್ಟಿದ್ದು, ಅವರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ನಗರಸಭೆಯವರು ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡದಿರುವುದೇ ಗ್ರಾಮ ದಲ್ಲಿ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ನಗರಸಭೆ ಕಸದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ನಗರ ಹೊರವಲಯದ ಇಂದಾವರ ಗ್ರಾಮದಲ್ಲಿ ನಗರಸಭೆಯವರು ಘನತ್ಯಾಜ್ಯ ಹಾಕುತ್ತಿದ್ದಾರೆ. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿಲ್ಲವೆಂದು ಆರೋಪಿಸಿ ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಲೇ ಇದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಆರಂಭವಾಗಿದ್ದು, ಗ್ರಾಮದ ಹಲವರು ಜ್ವರದಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿದರು.

ಕಸದ ವಾಹನ ತಡೆದು ಆಕ್ರೋಶ: ಗುರುವಾರ ಬೆಳಗ್ಗೆ ಜ್ವರದಿಂದ ನರಳುತ್ತಿದ್ದಸಿದ್ಧಪ್ಪಶೆಟ್ಟಿ(69)ಎಂಬುವವರು ಮೃತಪಟ್ಟಿದ್ದರು. ಅವರು ಡೆಂಘೀ ಜ್ವರದಿಂದಲೇಸಾವಪ್ಪಿದ್ದಾರೆ. ನಗರಸಭೆ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿಲ್ಲ. ಕಸ ದಿಂದಾಗಿಯೇ ಗ್ರಾಮದಲ್ಲಿ ಜ್ವರ ಹೆಚ್ಚಾ ಗುತ್ತಿದೆ. ಕಸದ ದುರ್ವಾಸನೆಯೂ ತೀವ್ರವಾಗಿದೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ದಿಢೀರನೆ ಕಸ ಸುರಿಯಲು ಗ್ರಾಮಕ್ಕೆ ಬರುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ಆರಂಭಿಸಿದರು.

ಗ್ರಾಮದಲ್ಲಿ ಕಸ ಹಾಕಬೇಡಿ: ನಗರಸಭೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು. ನಗರಸಭೆಯವರು ಗ್ರಾಮದಲ್ಲಿ ಕಸ ಹಾಕುವುದನ್ನು ನಿಲ್ಲಿಸಬೇಕೆಂದು ಪಟ್ಟುಹಿಡಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಬರಲಿ: ಗ್ರಾಮಸ್ಥರು ಕಸದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿರುವ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಆಯುಕ್ತ ಪರಮೇಶಿ ಅವರು, ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲಾಗುವುದು. ಪ್ರತಿಭಟನೆ ಕೈ ಬಿಡಿ ಎಂದು ಮನವಿ ಮಾಡಿಕೊಂಡರು. ಆದರೆ, ಅವರ ಮನವಿಗೆ ಸೊಪ್ಪು ಹಾಕದ ಗ್ರಾಮಸ್ಥರು, ನೀವು ಏನೂ ಮಾಡುವುದಿಲ್ಲ. ಕೇವಲ ಭರವಸೆ ನೀಡುತ್ತೀರಿ. ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಬರಬೇಕು. ಸಮಸ್ಯೆ ಪರಿಹರಿಸುವ ಭರವಸೆಯನ್ನು ಅವರು ನೀಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ. ಕಸವನ್ನು ಇಲ್ಲಿ ಹಾಕಲು ಬಿಡುವುದೂ ಇಲ್ಲ ಎಂದು ಹೇಳಿ ಪ್ರತಿಭಟನೆ ಮುಂದುವರೆಸಿದರು.

ಸಿದ್ಧಪ್ಪಶೆಟ್ಟಿ ಡೆಂಘೀ ಜ್ವರದಿಂದ ಮೃತಪಟ್ಟಿಲ್ಲ: ಡಿಎಚ್‌ಒ
ಇಂದಾವರ ಗ್ರಾಮದ ಸಿದ್ಧಪ್ಪಶೆಟ್ಟಿ ಸಾವಿನ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ ಬಾಬು, ಸಿದ್ಧಪ್ಪಶೆಟ್ಟಿ ಅವರು ಜ್ವರದಿಂದ ಬಳಲುತ್ತಿದ್ದುದು ಸತ್ಯ. ಆದರೆ, ಅವರು ಸಾವಪ್ಪಿರುವುದು ಡೆಂಘೀ ಜ್ವರದಿಂದ ಅಲ್ಲ. ಅವರಿಗೆ ಕರಳು ಹಾಗೂ ಹೃದಯ ಸಂಬಂಧಿ ಕಾಯಿಲೆ ಇತ್ತು. ಜಿಲ್ಲೆಯಲ್ಲಿ ಈವರೆಗೂ 47ಜನರಿಗೆ ಡೆಂಘೀ ಇರುವುದು ಖಚಿತವಾಗಿದೆ. ಆದರೆ, ಡೆಂಘೀಯಿಂದ ಈವರೆಗೂ ಯಾವುದೇ ಸಾವು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.