ಚಿಕ್ಕಜಾಜೂರಲ್ಲಿ ಬಳಕೆಗೆ ಸಿಗ್ತಿಲ್ಲ ಸ್ಮಶಾನ ಜಾಗ!

ರುದ್ರಭೂಮಿಗಾಗಿ 10 ಹೆಕ್ಟೇರ್‌ ಜಾಗ ಮೀಸಲಿಟ್ಟಿದ್ದರೂ ಎಲ್ಲೆಂದರಲ್ಲಿ ಶವಸಂಸ್ಕಾರ ಮಾಡುವ ದುಸ್ಥಿತಿ ನಿರ್ಮಾಣ

Team Udayavani, Dec 19, 2019, 1:13 PM IST

19-December-11

ಮಂಜುನಾಥ್‌ ಹಗೇದ್‌
ಚಿಕ್ಕಜಾಜೂರು:
ಅಂತ್ಯಸಂಸ್ಕಾರ ಮಾಡಲು ವಿವಿಧ ಸಮುದಾಯದವರಿಗೆ ಸ್ಮಶಾನಕ್ಕಾಗಿ ಜಾಗವನ್ನೂ ಮೀಸಲಿಡಲಾಗಿದೆ. ಆದರೆ ಆ ಜಾಗ ಎಲ್ಲಿದೆ ಎಂಬುದು ಗ್ರಾಮಸ್ಥರಿಗೂ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ಸೂಕ್ತ ಸ್ಮಶಾನವಿಲ್ಲದ ಕಾರಣ ಮೃತದೇಹಗಳನ್ನು ಎಲ್ಲೆಂದರಲ್ಲಿ ಹೂಳುವ, ಸುಡುವ ಮೂಲಕ ಅಂತ್ಯಸಂಸ್ಕಾರ ಮಾಡಬೇಕಾದ ಸ್ಥಿತಿ ಗ್ರಾಮದಲ್ಲಿ ಎದುರಾಗಿದೆ!

ಹೊರವಲಯದ ಮಾರುತಿನಗರ (ಬಸವನಪಾದ) ಸಮೀಪ ಸುಮಾರು 10 ಹೆಕ್ಟೇರ್‌ ಮೀಸಲು ಸ್ಮಶಾನ ಜಾಗ ಇದ್ದರೂ ಬಳಕೆಗೆ ಸಿಗದೆ ಜನರು ಪರದಾಡುವಂತಾಗಿದೆ. ಚಿಕ್ಕಜಾಜೂರಿನ ಸರ್ವೆ ನಂ.
27ರಲ್ಲಿರುವ 33.05 ಹೆಕ್ಟೇರ್‌ ಜಮೀನಿನಲ್ಲಿ 2.18 ಹೆಕ್ಟೇರ್‌ ಹೊರತುಪಡಿಸಿ ಉಳಿದ 30.27 ಹೆಕ್ಟೇರ್‌ ಸರ್ಕಾರಿ ಗೋಮಾಳವಾಗಿದೆ. ಇದರಲ್ಲಿ ಹಿಂದೂ, ಜೈನ, ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದವರಿಗಾಗಿ ಸ್ಮಶಾನ ಜಾಗ ಮೀಸಲಿಡಲಾಗಿದೆ. ಆದರೆ ಇದ್ಯಾವುದೂ ಬಳಕೆಗೆ ಮಾತ್ರ ಸಿಗುತ್ತಿಲ್ಲ ಎಂಬುದು ಜನರ ಆರೋಪ.

ಗ್ರಾಮದಲ್ಲಿ ಸುಮಾರು 7 ಸಾವಿರ ಜನಸಂಖ್ಯೆ ಇದ್ದು, ಹಿಂದೂ, ಕ್ರೈಸ್ತ , ಮುಸ್ಲಿಂ ಎಲ್ಲ ಸಮುದಾಯದವರಿದ್ದಾರೆ. 1500 ರಿಂದ 1600 ಜನಸಂಖ್ಯೆ ಹೊಂದಿರುವ ಮುಸ್ಲಿಮರಿಗೆ ಹಿಂದಿನಿಂದಲೂ ಹನುಮನಹಳ್ಳಿ ರಸ್ತೆಯಲ್ಲಿ ಒಂದು ಹೆಕ್ಟೇರ್‌ ಸ್ಮಶಾನ ಜಾಗವಿತ್ತು. ಆದರೆ ಅಲ್ಲಿ ಹಳ್ಳ ಹರಿದ ಪರಿಣಾಮ ಮೃತದೇಹ ಹೂಳಲು ಜಾಗವೇ ಇಲ್ಲದಂತಾಗಿದೆ. ಹೀಗಾಗಿ ಪ್ರಾರ್ಥನಾ ಮಂದಿರ (ದರ್ಗಾ) ಹತ್ತಿರವೇ ಶವಸಂಸ್ಕಾರ ಮಾಡುವ ಪರಿಸ್ಥಿತಿ ಇದೆ ಎನ್ನುತ್ತಾರೆ ಮುಸ್ಲಿಂ ಸಮುದಾಯದ ಮುಖಂಡರು.

ಕೆರೆ ಅಂಗಳವೇ ಗತಿ: ಇನ್ನು ಜೈನ ಹಾಗೂ ಬ್ರಾಹ್ಮಣ ಸಮುದಾಯದವರಿಗೆ ಅಂತ್ಯಸಂಸ್ಕಾರಕ್ಕೆ ಕೆರೆ ಅಂಗಳವೇ ಗತಿಯಾಗಿದೆ. ಸ್ವಂತ ಜಮೀನು, ತೋಟ ಇದ್ದವರು ಅಲ್ಲಿಯೇ ಮೃತರ ಅಂತ್ಯಸಂಸ್ಕಾರ ನೆರವೇರಿಸುತ್ತಾರೆ. ಆದರೆ ಯಾವುದೇ ಜಮೀನು ಹೊಂದಿಲ್ಲದ ಜೈನ, ಮರಾಠಿ ಹಾಗೂ ಬ್ರಾಹ್ಮಣ ಸಮುದಾಯದವರು ಸೀಮೆಜಾಲಿ ಗಿಡಗಳಿಂದ ಕೂಡಿದ ಪ್ರದೇಶ ಇಲ್ಲವೇ ಗ್ರಾಮದ ಕೆರೆ ಬಳಿ ಅಂತ್ಯಸಂಸ್ಕಾರ ಮಾಡುವುದು ಅನಿವಾರ್ಯವಾಗಿದೆ.

ಅದರಲ್ಲೂ ಮಳೆಗಾಲದಲ್ಲಿ ಶವಸಂಸ್ಕಾರ ನೆರವೇರಿಸುವುದು ಮತ್ತಷ್ಟು ಕಷ್ಟವಾಗಿದೆ. ಸರ್ಕಾರ ಸ್ಮಶಾನಕ್ಕಾಗಿ ಎರಡು ಹೆಕ್ಟೇರ್‌ ಜಮೀನು ಮಂಜೂರು ಮಾಡಿದೆ. ಆದರೆ ಅದು ಎಲ್ಲಿದೆ ಎಂಬುದೇ ತಿಳಿದಿಲ್ಲ. ಹತ್ತು ವರ್ಷಗಳ ಹಿಂದಿನಿಂದಲೂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಯಾರೊಬ್ಬರೂ ಈ ಕಡೆ ತಲೆ ಹಾಕಿಲ್ಲ ಎಂದು ಜನ ಆರೋಪಿಸುತ್ತಾರೆ. ಇದಲ್ಲದೆ ಮಳೆಗಾಲದಲ್ಲಿ ಹೊಳಲ್ಕೆರೆಯ ಶವಾಗಾರ ಆವರಣದಲ್ಲೇ ಸುಮಾರು 10-12 ಸಾವಿರ ರೂ. ಖರ್ಚು ಮಾಡಿ ಶವಸಂಸ್ಕಾರ ಮಾಡುವ ಪರಿಸ್ಥಿತಿಯಿದೆ.

ಹಿಂದೂ ಸ್ಮಶಾನ ಜಾಗವೇ ಇಲ್ಲ: ಸುಮಾರು 5 ರಿಂದ 6 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮದ ಹಿಂದೂಗಳು ಮೊದಲಿನಿಂದಲೂ ಸ್ಮಶಾನ ಜಾಗದ ಕೊರತೆ ಎದುರಿಸುತ್ತಿದ್ದಾರೆ. ಲಿಂಗಾಯತ, ವೀರಶೈವ, ದೇವಾಂಗ, ಮಾದಿಗ, ನಾಯಕ, ಕೊರಚ, ಕೊರಮ, ವಿಶ್ವಕರ್ಮ, ಛಲವಾದಿ, ಲಂಬಾಣಿ, ಭೋವಿ ಸೇರಿದಂತೆ ಹತ್ತು ಹಲವಾರು ವಿಭಿನ್ನ ಸಮುದಾಯದವರಿರುವ ಈ ಗ್ರಾಮದಲ್ಲಿ ಯಾರೇ ಮೃತಪಟ್ಟರೂ ಆ ಮನೆಯವರು ಅಂತ್ಯಸಂಸ್ಕಾರ ಮಾಡಲು ತೊಂದರೆ ಅನುಭವಿಸುವಂತಾಗಿದೆ. ಕೆಲವು ಸಮುದಾಯದವರಿಗೆ ಹೊಳಲ್ಕೆರೆ ಮುಖ್ಯರಸ್ತೆಯ ಬದಿಯಲ್ಲಿ ಒಂದಿಷ್ಟು ಜಾಗದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಅಲ್ಲಿ ಮೃತದೇಹಗಳನ್ನು ಹೂತ ಪರಿಣಾಮ ಈಗ ಜಾಗವೇ ಇಲ್ಲದಂತಾಗಿದೆ.

ಸುಮಾರು 75 ವರ್ಷಗಳಿಂದಲೂ ಒಂದೇ ರುದ್ರಭೂಮಿಯಲ್ಲಿ ಹೆಣಗಳನ್ನು ಹೂಳಲಾಗುತ್ತಿದೆ. ಈಗ ಶವಸಂಸ್ಕಾರ ಮಾಡಲು ಸ್ಥಳವಿಲ್ಲದೆ ಹಳೆ ಶವದ ಗುಂಡಿಯಲ್ಲೇ ಇನ್ನೊಂದು ಶವ ಹೂಳುವ ಪರಿಸ್ಥಿತಿ ತಲೆದೋರಿದೆ. ಆದರೆ ಈಗ ಅದೂ ಸಾಧ್ಯವಾಗುತ್ತಿಲ್ಲ. ಮುಂದೆ ಏನು ಮಾಡಬೇಕು ಎಂಬುದೇ ತೋಚುತ್ತಿಲ್ಲ ಎಂಬುದು ಕೆಲವು ಹಿರಿಯ ಮುಖಂಡರ ಮಾತು. ಸರ್ಕಾರ ಹಿಂದೂಗಳ ಸ್ಮಶಾನಕ್ಕಾಗಿ ಐದು ಹೆಕ್ಟೇರ್‌ ಗೋಮಾಳ ಜಮೀನು ಮೀಸಲಿಟ್ಟು 20 ವರ್ಷಗಳೇ ಕಳೆದಿವೆ. ಆದರೆ ಆ ಮೀಸಲು ಜಾಗ ಎಲ್ಲಿದೆ ಎಂಬುದೇ ಯಾರಿಗೂ ತಿಳಿದಿಲ್ಲ. ಅಲ್ಲದೆ ಸ್ಮಶಾನ ಭೂಮಿಯೂ ಒತ್ತುವರಿ ಆಗಿದೆ ಎಂಬುದು ಗ್ರಾಮಸ್ಥರ ಆರೋಪ.

ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಮೃತದೇಹಗಳನ್ನು ಸರ್ಕಾರಿ ಇಲಾಖೆಗಳ ಕಚೇರಿಗಳ ಮುಂದಿಟ್ಟು ಪ್ರತಿಭಟನೆ ಮಾಡಿದರೂ ಅಚ್ಚರಿ ಇಲ್ಲ. ಇನ್ನಾದರೂ ಸಂಬಂಧಪಟ್ಟವರು ಮೀಸಲಿರಿಸಿದ ಸ್ಮಶಾನ ಜಾಗ ಗುರುತಿಸಿ ಅಳತೆ ಮಾಡಬೇಕು. ಒತ್ತುವರಿ ತೆರವುಗೊಳಿಸಿ ಹದ್ದುಬಸ್ತು ಮಾಡಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹಿಂದಿನ ತಹಶೀಲ್ದಾರ್‌ ಸೋಮಶೇಖರ್‌ ಹಾಗೂ ಗ್ರಾಮ ಪಂಚಾಯತದವರು ಸ್ಮಶಾನಕ್ಕಾಗಿ ಮೀಸಲಿಟ್ಟಿರುವ ಜಾಗದ ಅಳತೆ ಮಾಡಿದ್ದೆವು. ಹಲವು ಕಾರಣಗಳಿಂದ ಹದ್ದುಬಸ್ತು ಮಾಡುವುದು ಸ್ಥಗಿತವಾಗಿದೆ. ಕ್ರೈಸ್ತ ಸಮುದಾಯಕ್ಕೆ ಸ್ಮಶಾನ ಜಾಗ ಗುರುತಿಸಿ ಶವಸಂಸ್ಕಾರಕ್ಕೆ ಅವಕಾಶ ನೀಡಿದ್ದೇವೆ. ಆದಷ್ಟು ಬೇಗ ಇನ್ನುಳಿದ ಮೀಸಲು ಸ್ಮಶಾನ ಜಾಗವನ್ನೂ ಗುರುತಿಸಿ ಸೌಲಭ್ಯ ಕಲ್ಪಿಸಿಕೊಡಲಾಗುವುದು.
ಡಿ.ಸಿ. ಮೋಹನ್‌,
ಚಿಕ್ಕಜಾಜೂರು ಗ್ರಾಪಂ ಅಧ್ಯಕ್ಷರು

ಈ ಮೊದಲು ಚಿಕ್ಕಜಾಜೂರು ಗ್ರಾಮದ ಮೀಸಲು ಸ್ಮಶಾನ ಜಾಗಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಳತೆ ಮಾಡಿದ್ದೆವು. ಆದರೆ ಹದ್ದುಬಸ್ತು ಮಾಡಿರಲಿಲ್ಲ. ಮತ್ತೂಮ್ಮೆ ಗ್ರಾಮಸ್ಥರ ಮನವಿ ಬಂದಲ್ಲಿ ಸ್ಮಶಾನ ಜಾಗವನ್ನು ಗುರುತಿಸಿಕೊಡಲಾಗುವುದು. ಎನ್‌.ಆರ್‌. ಸಿದ್ದಪ್ಪ,
ರೆವಿನ್ಯೂ ಇನ್ಸ್‌ಪೆಕ್ಟರ್‌, ಬಿ.ದುರ್ಗ ಹೋಬಳಿ

ಸ್ಮಶಾನ ಜಾಗವನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ತೆರವುಗೊಳಿಸುತ್ತೇವೆ. ಈ ಬಗ್ಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದು, ಆದಷ್ಟು ಬೇಗ ಕಾಯ್ದಿರಿಸಿದ ಸ್ಮಶಾನ ಜಾಗವನ್ನು ಅಳತೆ ಮಾಡಿ ಹದ್ದುಬಸ್ತು ಮಾಡಿಕೊಡುವಂತೆ ಅಧಿಕಾರಿ ವರ್ಗದವರಿಗೆ ಸೂಚಿಸಿದ್ದೇನೆ. ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಬಗೆಹರಿಸುತ್ತೇನೆ.
.ನಾಗರಾಜು,
ಹೊಳಲ್ಕೆರೆ ತಹಶೀಲ್ದಾರರು

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.