ನೆರೆಯಿಂದಾದ ಬೆಳೆ ನಾಶ ಸಮೀಕ್ಷೆ ನಡೆಸಿ

ಕೃಷಿ- ತೋಟಗಾರಿಕೆ ಅಧಿಕಾರಿಗಳಿಗೆ ಜಿಪಂ ಕೃಷಿ-ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಂದ್ರ ಸೂಚನೆ

Team Udayavani, Sep 1, 2019, 3:16 PM IST

1-September-32

ಚಿಕ್ಕಮಗಳೂರು: ಜಿಪಂ ಕಚೇರಿ ಸಭಾಂಗಣದಲ್ಲಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆ ನಡೆಯಿತು.

ಚಿಕ್ಕಮಗಳೂರು: ನೆರೆ ಹಾನಿಯಿಂದ ಬೆಳೆ ನಾಶವಾಗಿರುವ ಕುರಿತು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮೀಕ್ಷೆ ಕೈಗೊಂಡು, ವರದಿ ತಯಾರಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಚ್.ಮಹೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಪಂ ಕಚೇರಿಯ ಅಬ್ದುಲ್ ನಜೀರ್‌ ಸಾಬ್‌ ಸಭಾಂಗಣದಲ್ಲಿ ನಡೆದ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೆರೆ ಹಾನಿಯಿಂದ ಹಲವು ರೈತರ ಜೀವನ ಶೋಚನೀಯ ಸ್ಥಿತಿಗೆ ತಲುಪಿದೆ. ಅವರಿಗೆ ಪ್ರಕೃತಿಯಿಂದ ಆದ ಅನ್ಯಾಯಕ್ಕೆ ಅಧಿಕಾರಿಗಳು ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಅಲ್ಲದೇ, ಪುರಾತನ ಕಾಲದಿಂದಲೂ ಹಲವು ಜನರಿಗೆ ಕೆಲಸ ಕೊಡುವ ರೈತರು ಇಂದು ನೆರೆ ಹಾನಿಯಿಂದ ಬದುಕು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಅಂತಹ ರೈತರ ಬದುಕು ಕಟ್ಟಿಕೊಡುವ ಪ್ರಯತ್ನ ಮಾಡಬೇಕು. ಕೃಷಿ ಇಲಾಖೆಯಿಂದ ರೈತರಿಗೆ ಹೆಚ್ಚು ಅನುದಾನ ನೀಡುವಂತೆ ಸರ್ಕಾರಕ್ಕೆ ಅಧಿಕಾರಿಗಳು ವರದಿ ಸಲ್ಲಿಸಬೇಕು ಎಂದರು.

ಸ್ಥಾಯಿ ಸಮಿತಿ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ಲಕ್ಯಾ ಹೋಬಳಿಯಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಈ ಭಾಗದಲ್ಲಿ ಜಾನುವಾರುಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮೇವಿನ ಅಭಾವ ಹೆಚ್ಚಾಗಿದೆ. ಆದ್ದರಿಂದ ಅಗತ್ಯಕ್ಕನುಗುಣವಾಗಿ ಮೇವು ನೀಡಬೇಕು ಹಾಗೂ ಮೇವಿನ ಬೀಜಗಳನ್ನು ನೀಡಬೇಕು. ಅಲ್ಲದೇ, ಹಲವು ದಿನಗಳಿಂದ ಶಾಶ್ವತ ಗೋಶಾಲೆ ತೆರೆಯಲು ಒತ್ತಾಯಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಲಕ್ಯಾ ಹೋಬಳಿಗೆ 208 ಟನ್‌ ಮೇವು ವಿತರಿಸಿದ್ದು, ಅಗತ್ಯವಿದ್ದರೆ ಹೆಚ್ಚಿನ ಮೇವು ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ತಾತ್ಕಾಲಿಕ ಗೋಶಾಲೆ ತೆರೆಯುವುದಕ್ಕೆ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.

ಸ್ಥಾಯಿ ಸಮಿತಿ ಸದಸ್ಯ ಪ್ರಭಾಕರ್‌ ಮಾತನಾಡಿ, ನೆರೆ ಹಾನಿಯಿಂದ ಎಷ್ಟು ಜಾನುವಾರುಗಳು ಮೃತಪಟ್ಟಿವೆ ಹಾಗೂ ಕಾಣೆಯಾಗಿವೆ ಎಂಬ ಮಾಹಿತಿ ನೀಡಬೇಕೆಂದರು. ಇದಕ್ಕೆ ಉತ್ತರಿಸಿದ ಪಶುಪಾಲನಾ ಇಲಾಖೆ ಅಧಿಕಾರಿಗಳು, ಜಿಲ್ಲೆಯಲ್ಲಿ 9 ಜಾನುವಾರುಗಳು ಮೃತಪಟ್ಟಿದ್ದು, ಅವುಗಳಿಗೆ ಎನ್‌ಡಿಆರ್‌ಎಫ್‌ ಮಾರ್ಗದರ್ಶನದಂತೆ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

ಪ್ರತಿ ಗ್ರಾಪಂನಲ್ಲೂ ಸಹಕಾರ ಸಂಘ ಸ್ಥಾಪಿಸಬೇಕೆಂದು ಸರ್ಕಾರದ ಆದೇಶವಿದ್ದು, ತೋಟದೂರು ಗ್ರಾಪಂ ವ್ಯಾಪ್ತಿಯಲ್ಲಿ ಸಹಕಾರ ಸಂಘ ಸ್ಥಾಪಿಸುವ ಕುರಿತು ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿರುವುದರ ಕುರಿತು ಸೂಕ್ತ ಕ್ರಮ ವಹಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸ್ಥಾಯಿ ಸಮಿತಿ ಸದಸ್ಯ ಕೆ.ಆರ್‌.ಮಹೇಶ್‌ ಒಡೆಯರ್‌ ಮಾತನಾಡಿ, ತೋಟಗಾರಿಕೆ ಇಲಾಖೆಯಿಂದ ನಿಂಬೆ, ಕರಿಬೇವು, ಮಾವು, ತೆಂಗು, ಅಡಕೆ ಸಸಿಗಳನ್ನು ರೈತರಿಗೆ ನೀಡುತ್ತಿದ್ದು, ಅವುಗಳನ್ನು ರೈತರಿಗೆ ಸಮರ್ಪಕವಾಗಿ ಒದಗಿಸುವಂತೆ ಪ್ರಚಾರ ಮಾಡಬೇಕು ಹಾಗೂ ವಿಶೇಷ ಹನಿ ನೀರಾವರಿಗೆ ಹೆಚ್ಚು ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹಿರೇಗೌಜದಲ್ಲಿರುವ ಪಶು ವೈದ್ಯರನ್ನು ವಾರದಲ್ಲಿ ಮೂರು ದಿನ ಲಕ್ಯಾ ಹೋಬಳಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ನಿಯೋಜಿಸಿ ಈ ಕುರಿತು ಸದಸ್ಯರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಯಾವ ಯಾವ ಪಶು ಆಸ್ಪತ್ರೆಗಳಲ್ಲಿ ಡಿ ಗ್ರೂಪ್‌ ನೌಕರರ ಕೊರತೆ ಇದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಹಾಗೂ ಎಳ್ಳಂಬಳಸೆ ಡಾ| ಸುರೇಶ್‌ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕೆಂದು ಸೂಚಿಸಿದರು.

ಜಿಲ್ಲಾ ಪಂಚಾಯತ್‌ ಯೋಜನಾ ಕಾರ್ಯಕ್ರಮಗಳಾದ ರೇಷ್ಮೆ ಬೆಳೆಗಾರರಿಗೆ ಸಹಾಯ, ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆ ಹೀಗೆ ಹಲವು ಕಾರ್ಯಕ್ರಮಗಳಿದ್ದು, ಆರ್ಥಿಕ ಗುರಿ 94.85 ಲಕ್ಷ ರೂ.ನಿಗದಿಪಡಿಸಲಾಗಿದೆ. ಭೌತಿಕ 14.43 ಲಕ್ಷ ರೂ.ಗುರಿ ಸಾಧಿಸಲಾಗಿದೆ ಎಂದು ರೇಷ್ಮೆ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಸದಸ್ಯರಾದ ಅನುಸೂಯಾ, ಎಸ್‌.ಸುಧಾ, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ರಾಜಗೋಪಾಲ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.