ಕೃಷ್ಣ ಮೃಗ ಸಂರಕ್ಷಣಾ ಪ್ರದೇಶದ ಅಧ್ಯಯನ ಶೀಘ್ರ

ಅಮೃತ ಮಹಲ್‌ ಕಾವಲ್‌ ನಿರ್ವಹಣಾ ಸಮಿತಿ ಸಭೆಯಲ್ಲಿ ತೀರ್ಮಾನ

Team Udayavani, Nov 7, 2019, 5:54 PM IST

7-November-11

„ಎಸ್‌.ಕೆ. ಲಕ್ಷ್ಮೀ ಪ್ರಸಾದ್‌

ಚಿಕ್ಕಮಗಳೂರು: ಬಾಸೂರು ಅಮೃತ ಮಹಲ್‌ ಕಾವಲ್‌ ಕೃಷ್ಣಮೃಗ ಸಂರಕ್ಷಣಾ ಪ್ರದೇಶದಲ್ಲಿ ವೈಜ್ಞಾನಿಕ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ.

ರಾಜ್ಯ ಸರ್ಕಾರ ರಚಿಸಿರುವ ಅಮೃತ ಮಹಲ್‌ ಕಾವಲ್‌ ಕೃಷ್ಣಮೃಗ ನಿರ್ವಹಣಾ ಸಮಿತಿ ಸಭೆ ನ.5ರಂದು, ಸಮಿತಿ ಅಧ್ಯಕ್ಷರೂ ಆದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‌ಮೋಹನ್‌ ರಾಜ್‌ ಅಧ್ಯಕ್ಷತೆಯಲ್ಲಿ ನಡೆದಿದ್ದು, ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಾಸೂರು ಕಾವಲ್‌ ಆಡಳಿತಾತ್ಮಕ ನಿರ್ವಹಣಾ ಯೋಜನೆ ರೂಪಿಸಲು ಉಪ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿ 45 ದಿನದೊಳಗೆ ಬಾಸೂರು ಕಾವಲ್‌ ಹಾಗೂ ಅಲ್ಲಿರುವ ವನ್ಯ ಪ್ರಾಣಿಗಳ ಸಂರಕ್ಷಣೆಗೆ ಅಗತ್ಯವಾದ ರೂಪುರೇಷೆಗಳನ್ನು ಸಿದ್ಧಪಡಿಸಿ ವರದಿ ನೀಡಲಿದೆ.

ಒಣಭೂಮಿ ಆವಾಸ ಸ್ಥಾನವೆಂದು ಗುರುತಿಸಲಾಗಿರುವ ಅಮೃತ ಮಹಲ್‌ ಕಾವಲ್‌ ಪಶುಸಂಗೋಪನಾ ಇಲಾಖೆಗೆ ಸೇರಿದ್ದರೂ ಅದರ ನಿರ್ವಹಣೆಯನ್ನು ಸರ್ಕಾರ ಅರಣ್ಯ ಇಲಾಖೆಗೆ ವಹಿಸಿದೆ.

ಇತ್ತೀಚೆಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿರ್ವಹಣಾ ಸಮಿತಿ ರಚಿಸಲಾಗಿದೆ. ಇದರ ಸದಸ್ಯರಾಗಿ ಅಜ್ಜಂಪುರದ ಅಮೃತ ಮಹಲ್‌ ಸಂವರ್ಧನ ಕೇಂದ್ರದ ಉಪ ನಿರ್ದೇಶಕರು, ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಡೂರು ವಲಯ ಅರಣ್ಯಾಧಿಕಾರಿ, ಸಹಾಯಕ ಕೃಷಿ ನಿರ್ದೇಶಕರು, ದೊಡ್ಡ ಬಾಸೂರು ಗ್ರಾಪಂ ಅಧ್ಯಕ್ಷರು ಹಾಗೂ ವನ್ಯಜೀವಿ ಕಾರ್ಯಕರ್ತ ಜಿ.ವೀರೇಶ್‌, ನ್ಯಾಯವಾದಿ ಬಿ.ವಿ. ದಿನೇಶ್‌ ಕುಮಾರ್‌, ವನ್ಯಜೀವಿ ಛಾಯಾಗ್ರಾಹಕ ಕೆ.ಎನ್‌. ಪ್ರಶಾಂತ್‌ ಅವರಿದ್ದಾರೆ.

ಬಾಸೂರು ಕಾವಲ್‌ ಹಿನ್ನೆಲೆ: ಬಾಸೂರು ಕಾವಲ್‌ ಅನ್ನು ಉಳಿಸುವಂತೆ ಪರಿಸರಾಸಕ್ತರು ಸಲ್ಲಿಸಿದ್ದ ಮನವಿ ಸ್ವೀಕರಿಸಿದ ರಾಜ್ಯ ಸರ್ಕಾರ ಇದನ್ನು ಜೈವಿಕ ಪರಿಸರ ಸಂರಕ್ಷಣಾ ಪ್ರದೇಶವೆಂದು ಘೋಷಿಸಿ, ನಿರ್ವಹಣಾ ಸಮಿತಿ ರಚಿಸಿತ್ತು. ನ.5 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾವಲ್‌ ಸಂರಕ್ಷಣೆಗೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಸೂಕ್ತ ವರದಿ ತಯಾರಿಸಿ ಆಡಳಿತಾತ್ಮಕ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ.

ಆಡಳಿತಾತ್ಮಕ ಯೋಜನೆ ರೂಪಿಸುವ ಮುನ್ನ ಅಮೃತ ಮಹಲ್‌ ಕಾವಲ್‌ ಬಗ್ಗೆ ವೈಜ್ಞಾನಿಕ ವರದಿಯೊಂದನ್ನು ಸಿದ್ಧಪಡಿಸಲು ಆಲೋಚಿಸಲಾಗಿದ್ದು, ಇದನ್ನು ತಜ್ಞರ ಸಮಿತಿ ಮೂಲಕ ಮಾಡಿಸಲು ಯೋಚಿಸಲಾಗಿದೆ.

ಪರಿಸರಾಸಕ್ತರ ಪ್ರಕಾರ ಹುಲ್ಲುಗಾವಲು ಈಗಾಗಲೇ ಅಲ್ಲಲ್ಲಿ ಒತ್ತುವರಿಯಾಗಿದೆ. ಇಲ್ಲಿರುವ ಭೂ ವಿವಾದಗಳನ್ನು ಪರಿಹರಿಸಬೇಕಾಗಿದೆ. ಅಮೃತ ಮಹಲ್‌ ತಳಿ ಹೊರತುಪಡಿಸಿ ಉಳಿದಂತೆ ಪ್ರತಿನಿತ್ಯ ಮೇಯಲು ಬರುವ ಕುರಿಮಂದೆಗಳನ್ನು ಹಾಗೂ ಇತರೆ ಜಾನುವಾರುಗಳನ್ನು ತಡೆಯಬೇಕು. ಅಕ್ರಮ ಬೇಟೆ ನಡೆಸುವುದು ಮತ್ತು ಉರುಳು ಹಾಕುವುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ರಕ್ಷಣಾ ಸಿಬ್ಬಂದಿಯನ್ನು ನೇಮಿಸುವುದು ಹಾಗೂ ಯಾವುದೇ ರೀತಿ ಕೃಷಿಗೆ ಅವಕಾಶ ನೀಡಬಾರದೆಂದು ತಿಳಿಸಿ, ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸೂಕ್ತ ಸಂಬಳ ಮತ್ತು ಇತರೆ ಸೌಲಭ್ಯ ನೀಡಲು ಸಲಹೆಗಳು ಕೇಳಿಬಂದವು.

ಈ ಹುಲ್ಲುಗಾವಲಿನಲ್ಲಿ ಅನಗತ್ಯವಾಗಿ 10 ಕೆರೆಗಳನ್ನು ನಿರ್ಮಿಸಲಾಗಿದೆ. ಮತ್ತೆ ಯಾವುದೇ ರೀತಿಯಲ್ಲೂ ಹುಲ್ಲುಗಾವಲನ್ನು ಕೆತ್ತುವ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರದ ಸಭೆಯಲ್ಲಿ ಬಾಸೂರು ಕಾವಲನ್ನು ಅದರ ನೈಸರ್ಗಿಕ ಪರಿಸರದಲ್ಲಿ ಉಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಮಿತಿ ರಚನೆ ಮತ್ತು ವೈಜ್ಞಾನಿಕ ಅಧ್ಯಯನ ಮಾಡಲು ಆಲೋಚಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.