ರಸ್ತೆ-ಚರಂಡಿ-ಯುಜಿಡಿಗೆ ಆದ್ಯತೆ ನೀಡಿ

ನಗರಸಭೆ ಬಜೆಟ್‌ ಕುರಿತ ಪ್ರಥಮ ಪೂರ್ವಭಾವಿ ಸಭೆಯಲ್ಲಿ ನಾಗರಿಕರ ಒಕ್ಕೊರಲ ಆಗ್ರಹ

Team Udayavani, Dec 27, 2019, 4:54 PM IST

27-December-27

ಚಿಕ್ಕಮಗಳೂರು: ಮುಂದಿನ ಬಜೆಟ್‌ನಲ್ಲಿ ನಗರದ ರಸ್ತೆ, ಚರಂಡಿ ಮುಖ್ಯವಾಗಿ ಯುಜಿಡಿಗೆ ಪ್ರಥಮ ಆದ್ಯತೆ ನೀಡಬೇಕೆಂದು ನಗರದ ನಾಗರಿಕರು ಆಗ್ರಹಿಸಿದರು.

ನಗರಸಭೆ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ 2020-21ರ ಬಜೆಟ್‌ ಪೂರ್ವಭಾವಿ ಪ್ರಥಮ ಸಭೆಯಲ್ಲಿ ನಗರ ಅಭಿವೃದ್ಧಿಗೆ ಸಲಹೆ-ಸೂಚನೆ ನೀಡುವುದಕ್ಕಿಂತ ನಗರಸಭೆ ಸಮಸ್ಯೆಗಳ ಆಹವಾಲುಗಳೆ ಸಾರ್ವಜನಿಕರಿಂದ ಕೇಳಿಬಂತು.

ಸಿವಿಲ್‌ ಎಂಜಿನಿಯರ್‌ ನಾಗೇಂದ್ರ ಮಾತನಾಡಿ, ಹಿಂದಿನ ಬಜೆಟ್‌ ಪೂರ್ವ ಸಭೆಯಲ್ಲಿ ತಾವು ನೀಡಿದ್ದ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರೆತಿದೆ, ಅಭಿನಂದನೆ. ಆದರೆ, ಸಾಕಷ್ಟು ಇನ್ನೂ ಬಾಕಿ ಇವೆ. ಹಿಂದೆ ಸಲಹೆ ನೀಡಿದಂತೆ ನಗರ ಅಭಿವೃದ್ಧಿಗೆ ಒಂದು ಮಾಸ್ಟರ್‌ ಪ್ಲಾನ್‌ ಅಳವಡಿಸಿಕೊಂಡಂತೆ ಕಾಣುತ್ತಿಲ್ಲ. ನಗರದ ರಸ್ತೆಗಳು ಎಷ್ಟುದ್ದ ಇವೆ. ಪಕ್ಕಾ ಎಷ್ಟು, ಕಚ್ಚಾ ಎಷ್ಟು ಎಂಬುದನ್ನು ಸರ್ವೆ ಮಾಡಬೇಕು. ಚರಂಡಿಗಳನ್ನು ನೀರಿನ ಹರಿವಿನ ಅಧಾರದಲ್ಲೇ ನಿರ್ಮಿಸಬೇಕು. ಇದೆಲ್ಲಕ್ಕಿಂತ ಮೊದಲು ಬಹಳ ವರ್ಷದಿಂದ ನನೆಗುದಿಗೆ ಬಿದ್ದಿರುವ ಯುಜಿಡಿಯನ್ನು ಪರೀಕ್ಷೆ ಮಾಡಿ ನಂತರ ಎಲ್ಲ ರಸ್ತೆಗಳಿಗೆ ಡಾಂಬರ್‌ ಹಾಕುವುದು ಒಳ್ಳೆಯದು. ಇಲ್ಲದಿದ್ದರೆ ಮತ್ತೆ ರಸ್ತೆ ಅಗೆದು ಹಾಳುಗೆಡವ ಬೇಕಾಗುತ್ತದೆ ಎಂದರು.

ನಗರದ ಅಂಬೇಡ್ಕರ್‌ ಮತ್ತು ಮಹಾತ್ಮಗಾಂಧಿ ರಸ್ತೆಯನ್ನು ವಿಸ್ತರಿಸಲಾಯಿತು. ಅಂಗಡಿ ಕಳೆದುಕೊಂಡ ಫಲಾನುಭವಿಗಳಿಗೆ ಇನ್ನೂ ಪರಿಹಾರ ನೀಡಲಿಲ್ಲ. ಆದರೆ, ಅವರ ಅಂಗಡಿ ಮುಂಭಾಗದಲ್ಲೇ ಈಗ ಹೂವು, ಹಣ್ಣು, ತರಕಾರಿ ಅಂಗಡಿಗಳನ್ನಿಟ್ಟು ರಸ್ತೆಯಲ್ಲೇ ಮಾರಾಟ ಮಾಡುತ್ತಾ ಸಂಚಾರಕ್ಕೂ ಅಡಚಣೆ ಉಂಟು ಮಾಡುತ್ತಿದ್ದಾರೆ. ಇದರಿಂದ ರಸ್ತೆ ವಿಸ್ತರಣೆ ಉದ್ದೇಶ ಈಡೇರಿದೆಯೇ ಎಂದು ಪ್ರಶ್ನಿಸಿದರು. ಈ ಬಗ್ಗೆ ನಗರಸಭೆಯಿಂದ ಬೀದಿ ಬದಿ ಮಾರುವವರಿಗೆ ಪ್ರತ್ಯೇಕ ಮಾರುಕಟ್ಟೆ ನಿರ್ಮಿಸಿಕೊಡಿ. ಇಲ್ಲವೇ ರಸ್ತೆ ಬದಿಯಲ್ಲಿ ಮಾರುವುದನ್ನು ತಡೆಯಿರಿ ಎಂದು ಸಲಹೆ ನೀಡಿದರು.

ದಲಿತ ಸಂಘರ್ಷ ಸಮಿತಿ ಸಂಚಾಲಕ ಕೆ.ಸಿ.ವಸಂತಕುಮಾರ್‌ ಮಾತನಾಡಿ, ನಗರದ ಎಂಜಿ ರಸ್ತೆ, ಅಂಬೇಡ್ಕರ್‌ ರಸ್ತೆಯಲ್ಲಿ ಅಳವಡಿಸಿದ್ದ ಕಾಲುದಾರಿ ಮಾರ್ಗದ ಸ್ಲ್ಯಾಬ್‌ಗಳೆಲ್ಲಾ ಹಾಳಾಗಿದ್ದು, ಜನ ಗುಂಡಿಗೆ ಬೀಳುತ್ತಿದ್ದಾರೆ. ಒಮ್ಮೆ ಶಾಶ್ವತ ಕೆಲಸ ಮಾಡಿಸಲು ಏಕೆ ಸಾಧ್ಯವಾಗಲಿಲ್ಲ. ಮುಂದೆ ಸರಿಪಡಿಸಿ ಎಂದರು.

ದೀಪ ನರ್ಸಿಂಗ್‌ ಹೋಂನಿಂದ ಬೈಪಾಸ್‌ ರಸ್ತೆ ಸಂಪರ್ಕ ಕಲ್ಪಿಸುವ ರಸ್ತೆ ಕಿರಿದಾಗಿದ್ದು, ಅದನ್ನು ವಿಸ್ತರಿಸಬೇಕು. ಕಿರಿದಾಗಿರುವ ಲಕ್ಷ್ಮೀಶ ನಗರದ ಮೊದಲ ತಿರುವಿನ ರಸ್ತೆಯನ್ನು ವಿಸ್ತರಿಸಿ ಅಭಿವೃದ್ಧಿ ಪಡಿಸಬೇಕು. ಪೌರಕಾರ್ಮಿಕರಿಗೆ ನಿವೇಶನ ನೀಡಿ ಈಗಿರುವ ಹಳೆ ಮನೆಗಳನ್ನು ಅವರ ಹೆಸರಿಗೆ ಖಾತೆ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಧರ್ಮೇಶ್‌ ಮಾತನಾಡಿ, ಕೋಟೆ ಕೆರೆ, ದಂಟರಮಕ್ಕಿ ಕೆರೆ ಅಭಿವೃದ್ಧಿಗೆ ಪ್ರತಿವರ್ಷ ಹಣ ಸುರಿಯಲಾಗುತ್ತಿದೆ. ಆದರೆ, ಕೆರೆಯಲ್ಲಿರುವ ಸೊಪ್ಪನ್ನು ಏಕೆ ಸಂಪೂರ್ಣ ತೆರವು ಮಾಡಿಲ್ಲ ಎಂದು ಕೇಳಿದರು. ಡಿಎಸ್‌ಎಸ್‌ ಚಂದ್ರಪ್ಪ, ನಗರದಲ್ಲಿ ಅಂಬೇಡ್ಕರ್‌ ರಸ್ತೆ ಎಂದು ದಾಖಲೆಯಲ್ಲಿದ್ದರೂ ನಗರಸಭೆಯಿಂದ ಮಾರ್ಕೆಟ್‌ ರಸ್ತೆ ಎಂದೇ ನಮೂದು ಮಾಡಲಾಗುತ್ತಿದೆ. ಹೆರಿಗೆ ಆಸ್ಪತ್ರೆ ಮುಂದೆ ಇದ್ದ ಅಂಬೇಡ್ಕರ್‌ ವೃತ್ತವನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಮಣಿ ಮಾತನಾಡಿ, ಸಂತೆ ಮೈದಾನದ ಕೋಳಿ, ಮೀನು ಅಂಗಡಿಗಳ ಬಳಿ ದುರ್ನಾತ ಬೀರುತ್ತಿದ್ದು ಅಲ್ಲಿ ನೀರಿನ ವ್ಯವಸ್ಥೆ ಮಾಡಿ ಸ್ವಚ್ಛತೆ ಕಾಪಾಡುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿದರು. ನಗರಸಭೆ ಆಯುಕ್ತ ಪರಮೇಶಿ, ವ್ಯವಸ್ಥಾಪಕಿ ಲತಾಮಣಿ, ಪರಿಸರ ಎಂಜಿನಿಯರ್‌ ರಕ್ಷಿತ್‌ಗೌಡ, ಕಂದಾಯ ಅಧಿಕಾರಿ ಬಸವರಾಜ್‌, ರಮೇಶ್‌ ನಾಯ್ಡು ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.