ಬೆಳಗಲಿಲ್ಲ ಬೆಳವಾಡಿ; ರಂಗಪ್ಪನ ಕಣ್ಣೀರ ಕೋಡಿ


Team Udayavani, Jun 19, 2019, 12:13 PM IST

19-June-20

ಚಿಕ್ಕಮಗಳೂರು: ಸಿಎಂ ಗ್ರಾಮವಾಸ್ತವ್ಯ ಮಾಡಿದ್ದಾಗಿನ ಭಾವಚಿತ್ರ.

ಎಸ್‌.ಕೆ. ಲಕ್ಷ್ಮೀಪ್ರಸಾದ್‌
ಚಿಕ್ಕಮಗಳೂರು:
ದುಡಿದು ಕುಟುಂಬ ನಿರ್ವಹಿಸಬೇಕಾದ ಗಂಡಸರಿಗೆಲ್ಲ ಅನಾರೋಗ್ಯ. ಇಡೀ ಕುಟುಂಬಕ್ಕೆ ಮಹಿಳೆಯರೇ ಜೀವನಾಧಾರ. ಮನೆ ತುಂಬ ಜನ. ಮಹಿಳೆಯರು ದುಡಿದರೇ ಎರಡು ಹೊತ್ತಿನ ಊಟ ಇಲ್ಲವಾದಲ್ಲಿ ಉಪವಾಸ.

ಇದು ಸಿಎಂ ಕುಮಾರಸ್ವಾಮಿ ಈ ಹಿಂದೆ ಗ್ರಾಮವಾಸ್ತವ್ಯ ಮಾಡಿದ್ದ ತಾಲೂಕಿನ ಬೆಳವಾಡಿ ಗ್ರಾಮದ ರಂಗಪ್ಪ ಅವರ ಮನೆಯ ಸದ್ಯದ ಸ್ಥಿತಿ.

ಕುಮಾರಸ್ವಾಮಿ ಅವರು ರಂಗಪ್ಪ ಅವರ ಮನೆಯಲ್ಲಿ ವಾಸ್ತವ್ಯ ಮಾಡಿದ್ದ ವೇಳೆ ಮನೆಯವರಿಗೆ ಹಲವು ಭರವಸೆ ನೀಡಿದ್ದರು. ಇದರಿಂದ ತಮ್ಮ ಕಷ್ಟದ ಬದುಕು ಕೊನೆಗಾಣಬಹುದು ಎಂದು ಕನಸು ಕಂಡಿದ್ದ ರಂಗಪ್ಪನ ಕುಟುಂಬ ಇಂದಿಗೂ ಕಣೀ¡ರಲ್ಲೇ ಕೈ ತೊಳೆಯುತ್ತಿದೆ.

ರಂಗಪ್ಪ ಅವರ ಮಗ ಈಶ್ವರ್‌ ಸೀಮೆಎಣ್ಣೆ ವ್ಯಾಪಾರ ಮಾಡುತ್ತಿದ್ದರು. ತೀವ್ರ ಅನಾರೋಗ್ಯದಿಂದ ನರಳುತ್ತಿದ್ದರು. ಅವರ ಅನಾರೋಗ್ಯದ ವಿಚಾರ ಕೇಳಿದ ಕುಮಾರಸ್ವಾಮಿ, ಈಶ್ವರ್‌ ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಜೀವನೋಪಾಯಕ್ಕಾಗಿ ಅಂಗಡಿ ತೆರೆಯಲು ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ 5 ಸಾವಿರ ರೂ. ಕೊಟ್ಟಿದ್ದರು. ಅದಾದ ನಂತರ ರಂಗಪ್ಪ ಅವರ ಕುಟುಂಬದವರು ಹಲವು ಬಾರಿ ಜೆಡಿಎಸ್‌ ಮುಖಂಡರುನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಅನಾರೋಗ್ಯದಿಂದ ನರಳುತ್ತಿದ್ದ ಈಶ್ವರ್‌ ಅವರನ್ನು ಹಾಸನದ ಮಂಜುನಾಥೇಶ್ವರ ಆಯುರ್ವೇದಿಕ್‌ ಕಾಲೇಜಿಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ 2007ರಲ್ಲಿ ಮೃತಪಟ್ಟರು.

ಅದಾದ ನಂತರ ಈಶ್ವರ್‌ ಅವರ ಸಹೋದರ ರವಿಕುಮಾರ ಕೂಲಿ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಇತ್ತೀಚೆಗಷ್ಟೆ ಅವರೂ ಮಹಡಿ ಮೇಲಿನಿಂದ ಬಿದ್ದು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಮನೆ ತುಂಬ ಜನ: ಈ ಮನೆಯಲ್ಲಿ ರಂಗಪ್ಪ ಅವರ ಪತ್ನಿ ವಯೋವೃದ್ಧೆ ತಿಮ್ಮಮ್ಮಳೇ ಹಿರಿಯರಾಗಿದ್ದಾರೆ. ರಂಗಪ್ಪ ತಿಮ್ಮಮ್ಮ ಅವರ ಮಗಳಿಗೆ ಮದುವೆಯಾಗಿದ್ದರೂ ಆಕೆ ಪತಿಯೊಂದಿಗೆ ಇವರ ಮನೆಯಲ್ಲಿಯೇ ನೆಲೆಸಿದ್ದಾರೆ. ಆಕೆಯ ಪತಿಗೂ ಆರೋಗ್ಯ ಸರಿ ಇಲ್ಲ. ಅವರ ಇಬ್ಬರು ಮಕ್ಕಳು ಹಾಗೂ ತಿಮ್ಮಮ್ಮಳ ಮೊದಲ ಮಗಳ ಪುತ್ರಿಯೂ ಚಿಕ್ಕ ವಯಸ್ಸಿನಿಂದಲೂ ಇಲ್ಲಿಯೇ ಬೆಳೆದಿದ್ದಾಳೆ.

ಕುಮಾರಸ್ವಾಮಿಯವರು ಇವರ ಮನೆಯಲ್ಲಿ ವಾಸ್ತವ್ಯ ಮಾಡಿದ್ದ ಸಂದರ್ಭದಲ್ಲಿ ತಿಮ್ಮಮ್ಮಳ ಮೊಮ್ಮಗಳು ಶಿಲ್ಪಾ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿದ್ಯಾಭ್ಯಾಸ ಪೂರ್ಣಗೊಳಿಸಿದ ನಂತರ ಆಕೆಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದರು. ಈಗ ಆಕೆ ಬಿ.ಕಾಂ ಪೂರ್ಣಗೊಳಿಸಿದ್ದಾಳೆ. ಕೆಲಸಕ್ಕಾಗಿ ಹಲವು ಬಾರಿ ಜೆಡಿಎಸ್‌ ಮುಖಂಡರನ್ನು ಭೇಟಿ ಮಾಡಿ ಸಿಎಂ ನೀಡಿದ್ದ ಭರವಸೆ ಬಗ್ಗೆ ಹೇಳಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸದ್ಯ ಮನೆಯ ಗಂಡಸರೆಲ್ಲ ಅನಾರೋಗ್ಯದಿಂದ ಬಳಲುತ್ತಿದ್ದು, ತಿಮ್ಮಮ್ಮಳ ಮಗಳು ಹಾಗೂ ಮೊಮ್ಮಗಳು ಕೂಲಿ ಮಾಡಿ ಜೀವನ ನಡೆಸುತ್ತಿದ್ದಾರೆ.

ಗ್ರಾಮದಲ್ಲೂ ಆಗಿಲ್ಲ ಕೆಲಸ: ಕುಮಾರಸ್ವಾಮಿಯವರು ವಾಸ್ತವ್ಯ ಮಾಡಿದ್ದ ಮನೆಯವರಿಗಷ್ಟೇ ಅಲ್ಲ ಗ್ರಾಮಕ್ಕೂ ಸಹ ಯಾವುದೇ ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳು ಬರುತ್ತಿದ್ದಾರೆ ಎಂಬ ಕಾರಣದಿಂದ ಗ್ರಾಮ ಪಂಚಾಯತ್‌ನಿಂದ ಸುಮಾರು 2 ಲಕ್ಷ ರೂ. ವೆಚ್ಚ ಮಾಡಿ ಸಿದ್ಧತೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಹಾಗೂ ಅವರೊಂದಿಗೆ ಬಂದಿದ್ದ ಅಧಿಕಾರಿಗಳಿಗೆ ಸ್ನಾನ ಇತ್ಯಾದಿಗಳಿಗಾಗಿ ಗ್ರಾಮ ಪಂಚಾಯತ್‌ನಿಂದಲೇ ಸಾವಿರಾರು ರೂ. ಖರ್ಚು ಮಾಡಿ ಬಕೆಟ್, ಟವೆಲ್, ಸೋಪು, ಪೇಸ್ಟ್‌ ಇನ್ನಿತರೆ ವಸ್ತುಗಳನ್ನು ಖರೀದಿಸಲಾಗಿತ್ತು. ಇಡೀ ಗ್ರಾಮವನ್ನು ತಳಿರು ತೋರಣ, ದೀಪಗಳಿಂದ ಅಲಂಕರಿಸಲಾಗಿತ್ತು ಎಂದು ಜನ ನೆಪಿಸಿಕೊಳ್ಳುತ್ತಾರೆ.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.