ಸಿದ್ಧಾರ್ಥಗೆ ವಿವಿಧ ಸಂಘಟನೆಗಳ ಶೃದ್ಧಾಂಜಲಿ

ಜೆಡಿಎಸ್‌ ಕಚೇರಿ, ಆಜಾದ್‌ ಪಾರ್ಕ್‌ ವೃತ್ತದಲ್ಲಿ ಅಗಲಿದ ಉದ್ಯಮಿಗೆ ನಮನ-ಸೇವೆ ಸ್ಮರಣೆ

Team Udayavani, Aug 2, 2019, 12:58 PM IST

2-Agust-23

ಚಿಕ್ಕಮಗಳೂರು: ನಗರದ ಜೆಡಿಎಸ್‌ ಕಚೇರಿಯಲ್ಲಿ ಉದ್ಯಮಿ ಸಿದ್ಧಾರ್ಥ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

ಚಿಕ್ಕಮಗಳೂರು: ಕಾಫಿ ಡೇ ಮಾಲಿಕ ವಿ.ಜಿ.ಸಿದ್ಧಾರ್ಥ ಅವರಿಗೆ ನಗರದ ವಿವಿಧೆಡೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜೆಡಿಎಸ್‌ ಕಚೇರಿ: ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರಿಗೆ ನಗರದ ಜೆಡಿಎಸ್‌ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಿದ್ಧಾರ್ಥ ಅವರ ಭಾವಚಿತ್ರಕ್ಕೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸುವುದರ ಜೊತೆಗೆ ಅವರ ಆತ್ಮಕ್ಕೆ ಶಾಂತಿ ಕೋರಿ, 1 ನಿಮಿಷ ಮೌನಾಚರಣೆ ಮಾಡಿದರು.

ಐಟಿ ಅಧಿಕಾರಿಗಳ ಕಿರುಕುಳ: ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಆರೋಪಿಸಿದರು.

ನಿರೀಕ್ಷೆಗೂ ಮೀರಿ ಎತ್ತರಕ್ಕೆ ಬೆಳೆದಿದ್ದ ಸಿದ್ಧಾರ್ಥ ಅವರು 50ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿದ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಕಾಫಿ ಉದ್ಯಮಕ್ಕೆ ಮತ್ತು ಬೆಳೆಗಾರರಿಗೆ ಗೌರವ, ಪ್ರತಿಷ್ಠೆ ತಂದು ಕೊಟ್ಟಿದ್ದರು. ಅವರ ಸಾವಿನಿಂದ ಮನೆ ಮಗನನ್ನು ಕಳೆದುಕೊಂಡಂತಾಗಿದೆ ಎಂದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್‌ ಮಾತ ನಾಡಿ, ಸಿದ್ಧಾರ್ಥ ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ಕುಮಾರ್‌ ಮಾತನಾಡಿ, ಸಿದ್ಧಾರ್ಥ ಅವರ ಸಾವಿನಿಂದ ತಮ್ಮ ಸ್ವಂತ ಅಣ್ಣನನ್ನು ಕಳೆದುಕೊಂಡಾಗಿದೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಜಿ.ಎಸ್‌.ಚಂದ್ರಪ್ಪ, ಮಂಜಪ್ಪ, ಹೊಲದಗದ್ದೆ ಗಿರೀಶ್‌, ಮಾನುಮಿರಾಂಡ ಎನ್‌.ದೇವರಾಜ್‌ ಅರಸ್‌, ಬೈರೇಗೌಡ, ಜಯರಾಜ್‌ ಅರಸ್‌ ಹಾಜರಿದ್ದರು.

ವಿವಿಧ ಸಂಘಟನೆಗಳು: ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ದಲಿತ್‌ ಜನಸೇನೆ, ಸ್ವಸ್‌§ ಭೂಮಿ ಪ್ರತಿಷ್ಠಾನ, ಜೆಸಿಐ ಚಿಕ್ಕಮಗಳೂರು, ಶ್ರೀರಾಮ ಸೇನೆ ಪದಾಧಿಕಾರಿಗಳು ಶ್ರದ್ಧಾಂಜಲಿ ಸಭೆ ನಡೆಸಿ, ಮೌನ ಆಚರಣೆ ಮೂಲಕ ಸಿದ್ಧಾರ್ಥ್ ಹೆಗ್ಡೆ ಅವರ ಆತ್ಮಕ್ಕೆ ಶಾಂತಿ ಕೋರಿದರು.

ದಲಿತ್‌ ಜನಸೇನೆ ಜಿಲ್ಲಾಧ್ಯಕ್ಷ ಅನಿಲ್ ಆನಂದ್‌, ಕಾರ್ಯದರ್ಶಿ ವಿಶ್ವನಾಥ್‌, ಮಹಿಳಾ ಅಧ್ಯಕ್ಷೆ ಸ್ವರ್ಣಗೌರಿ, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್‌ ಶೆಟ್ಟಿ, ಜೆಸಿಐ ಅಧ್ಯಕ್ಷ ರಘುನಂದನ್‌, ಕಾರ್ಯದರ್ಶಿ ಪ್ರದೀಪ್‌, ಚೇತನ್‌ ಕುಮಾರ್‌, ಆನಂದ್‌ ಮೂರ್ತಿ, ನಿಶಾಂತ್‌ ಹಾಗೂ ದಲಿತ್‌ ಜನಸೇನೆ ಯುವ ಘಟಕದ ಕಾರ್ಯದರ್ಶಿ ಪುನೀತ್‌, ಸಂದೀಪ್‌, ಶಿವು, ಪರಮೇಶ್‌, ಗಿರೀಶ್‌, ತಿಲಕ್‌ ದತ್ತ, ವಿನೋದ್‌, ಶಶಿಧರ್‌, ಸಚಿನ್‌, ಸವಿನ್‌ ಮುಂತಾದವರು ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.