ಒತ್ತುವರಿ ಭೂಮಿ ಕಾಫಿ ಬೆಳೆಗಾರರಿಗೇ ಲೀಸ್‌ ಕೊಡಿ

ಹತ್ತು ಎಕರೆ ಒಳಗಿನ ಜಮೀನನ್ನು ಕಾಫಿಬೆಳೆಗಾರರಿಗೆ ನೀಡುವಂತೆ ಶೋಭಾ ಕರಂದ್ಲಾಜೆ ಆಗ್ರಹ

Team Udayavani, Jun 14, 2019, 11:43 AM IST

Udayavani Kannada Newspaper

ಚಿಕ್ಕಮಗಳೂರು:  ಕಾಫಿ ಬೆಳೆಗಾರರು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ಲೀಸ್‌ ಆಧಾರದ ಮೇಲೆ ಅವರಿಗೇ ಬಿಟ್ಟುಕೊಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಫಿಯನ್ನು ಉದ್ಯಮ ಎಂದು ಪರಿಗಣಿಸಲಾಗುತ್ತದೆ. ಬೇರೆ ಬೇರೆ ಕೈಗಾರಿಕೆಗಳಿಗೆ ಜಮೀನುಗಳನ್ನು ಗುತ್ತಿಗೆ ಆಧಾರದ ಮೇಲೆ ನೀಡಲಾಗುತ್ತದೆ. ಅದೇ ರೀತಿ ಕಾಫಿ ಬೆಳೆಗಾರರಿಗೂ ಭೂಮಿ ನೀಡಿ ಎಂದರು.

ಇದೀಗ ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡುವ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಅದೇ ರೀತಿ 10 ಎಕರೆ ಒಳಗೆ ಒತ್ತುವರಿ ಮಾಡಲಾದ ಜಮೀನನ್ನು ಕಾಫಿ ಬೆಳೆಗಾರರಿಗೇ ಗುತ್ತಿಗೆ ಆಧಾರದ ಮೇಲೆ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಹತ್ತು ಎಕರೆ ಒಳಗಿನ ಜಮೀನನ್ನು ಬೆಳೆಗಾರರಿಗೆ ಕೊಡಬೇಕೆಂಬುದು ಬಿಜೆಪಿ ನಿಲುವಾಗಿದೆ. ಈ ಹಿಂದೆಯೂ ಈ ವಿಚಾರವನ್ನು ಹಲವು ಬಾರಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈ ಕುರಿತು ರೂಪುರೇಷೆಗಳನ್ನು ಸಿದ್ಧಪಡಿಸಲಿ. ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ ನಿರ್ಣಯ ಕೈಗೊಳ್ಳಲಿ ಎಂದರು.

ಬುಧವಾರ ಹಾಸನ ಜಿಲ್ಲೆ ಬೇಲೂರಿನಲ್ಲಿ ಕಾಫಿ ಬೆಳೆಗಾರರೊಂದಿಗೆ ಸಭೆ ನಡೆದಿದೆ. ಈ ಸಭೆಯಲ್ಲಿ ಕಾಫಿ ಬೆಳೆಯುವ ಪ್ರದೇಶಗಳ ಸಂಸದರುಗಳಾದ ತಾವು, ಪ್ರಜ್ವಲ್ ರೇವಣ್ಣ, ಪ್ರತಾಪ್‌ ಸಿಂಹ, ಸ್ವತಃ ಕಾಫಿ ಬೆಳೆಗಾರರಾದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಶಾಸಕರುಗಳು ಇದ್ದರು. ಸಭೆಯಲ್ಲಿ ಕಾಫಿ ಬೆಳೆಗಾರರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ತಿಳಿಸಿದರು.

ದೇಶದ ಯಾವುದೇ ರಾಜ್ಯದಲ್ಲಿಯೂ ಮೆಣಸಿಗೆ ಎಪಿಎಂಸಿಯಲ್ಲಿ ತೆರಿಗೆ ವಿಧಿಸುವುದಿಲ್ಲ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಮೆಣಸಿಗೆ ಎಪಿಎಂಸಿಯಲ್ಲಿ ತೆರಿಗೆ ವಿಧಿಸಲಾಗುತ್ತಿದೆ. ಇದರಿಂದಾಗಿ 1 ಕೆಜಿ ಮೆಣಸಿಗೆ 350 ರೂ. ಇದ್ದರೆ 25 ರೂ.ಗಳನ್ನು ಬೆಳೆಗಾರರು ತೆರಿಗೆ ರೂಪದಲ್ಲಿ ಕಟ್ಟುವಂತಾಗಿದೆ. ಕೂಡಲೆ ಎಪಿಎಂಸಿಯಲ್ಲಿ ಮೆಣಸಿಗೆ ವಿಧಿಸಲಾಗುತ್ತಿರುವ ತೆರಿಗೆಯನ್ನು ರದ್ದುಪಡಿಸಬೇಕೆಂಬ ಬೇಡಿಕೆ ಬೆಳೆಗಾರರದ್ದಾಗಿದೆ ಎಂದರು.

ಕಳೆದ ವರ್ಷ ಕೊಡಗಿನಲ್ಲಿ ಅತಿವೃಷ್ಟಿಯಿಂದ ಊರಿಗೆ ಊರೇ ಕೊಚ್ಚಿ ಹೋಗಿದೆ. ಆದರೂ ರಾಜ್ಯ ಸರ್ಕಾರ ಈವರೆಗೂ ಪರಿಹಾರ ನೀಡಿಲ್ಲ. ಎನ್‌.ಡಿ.ಆರ್‌.ಎಫ್‌. ಮತ್ತು ಎಸ್‌.ಡಿ.ಆರ್‌.ಎಫ್‌.ನಿಂದ ಪ್ರತಿ ಹೆಕ್ಟೇರ್‌ಗೆ ಕೇವಲ 35 ಸಾವಿರ ರೂ. ನೀಡಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿ 119 ಕೋಟಿ ರೂ.ಗಳು ಇದ್ದು, ಪ್ರತಿ ಹೆಕ್ಟೇರ್‌ಗೆ 18ಲಕ್ಷ ರೂ. ಪರಿಹಾರ ನೀಡಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ.

9 ವರ್ಷಗಳ ಹಿಂದೆ ತಾವು ಇಂದನ ಸಚಿವರಾಗಿದ್ದಾಗ ಪಡುಬಿದ್ರಿಯಿಂದ ಶಾಂತಿಗ್ರಾಮದವರೆಗೆ ವಿದ್ಯುತ್‌ ಲೈನ್‌ ಎಳೆಸಿದ್ದಾಗ ಪ್ರತಿ ಹೆಕ್ಟೇರ್‌ ಜಮೀನಿಗೆ ಅಂದೇ 17.50 ಲಕ್ಷ ರೂ. ಪರಿಹಾರ ನೀಡಿದ್ದೆ. ಆಗಲೇ ಅಷ್ಟು ಪರಿಹಾರ ನೀಡಿರುವಾಗ ಈಗ ರಾಜ್ಯ ಸರ್ಕಾರಕ್ಕೆ ಪರಿಹಾರ ನೀಡಲು ಕಷ್ಟವೇನು ಎಂದು ಪ್ರಶ್ನಿಸಿದರು.

ಕಾಫಿ ಮಂಡಳಿ ಕಾರ್ಯದರ್ಶಿಗಳು ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂಬ ದೂರು ಹೆಚ್ಚಾಗಿದೆ. ಈ ಹಿಂದೆಯೇ ಅವರನ್ನು ಬದಲಿಸಲು ಉದ್ದೇಶಿಸಲಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಅವರು ರಾಜ್ಯ ಸರ್ಕಾರದ ಅಧಿಕಾರಿಯಾಗಿದ್ದಾರೆ. ಕೂಡಲೆ ಅವರನ್ನು ರಾಜ್ಯಕ್ಕೆ ವಾಪಸ್‌ ಕರೆಸಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಕೋರಲಾಗುವುದು ಎಂದರು.

ಈ ಮೂರು ಅಂಶಗಳು ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟದ್ದಾಗಿರುವುದರಿಂದ ನಾಳೆ ಅಥವಾ ನಾಡಿದ್ದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮುಖ್ಯಮಂತ್ರಿಗಳ ಸಮಯ ಪಡೆದುಕೊಳ್ಳಲು ತಿಳಿಸಲಾಗಿದೆ ಎಂದರು.

ಉದ್ಯೋಗ ಖಾತ್ರಿ ಯೋಜನೆ ವ್ಯಾಪ್ತಿಯಿಂದ ಕಾಫಿ ತೋಟಗಳನ್ನು ಹೊರಗಿಡಲಾಗಿದೆ. ಕಾಫಿ ತೋಟಗಳನ್ನೂ ಸೇರಿಸಿದರೆ ಸಣ್ಣ ಬೆಳೆಗಾರರಿಗೆ ಅನುಕೂಲವಾಗುವುದರಿಂದ ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾಫಿಗೆ ಚಿಕೋರಿಯನ್ನು ಶೇ.49 ರಷ್ಟು ಸೇರಿಸಲು ಅವಕಾಶವಿದ್ದು, ಇದನ್ನು ಶೇ.28ಕ್ಕೆ ಇಳಿಸುವಂತೆ ಕಾಫಿ ಬೆಳೆಗಾರರು ಕೋರಿದ್ದಾರೆ. ಈ ಬಗ್ಗೆ ಎಫ್‌.ಎಸ್‌.ಎಸ್‌.ಎ.ಐ.ಗೆ ಪತ್ರ ಬರೆದು ಪರಿಶೀಲಿಸಲು ಕೋರಲಾಗುವುದು ಎಂದು ಹೇಳಿದರು.

ಕಳೆದ ಕೇಂದ್ರ ಸರ್ಕಾರವು ಮೆಣಸಿನ ಆಮದಿನ ಮೇಲೆ ತೆರಿಗೆಯನ್ನು ಹೆಚ್ಚಿಸಿದ್ದರಿಂದಾಗಿ ಮೆಣಸಿನ ಬೆಲೆ ಸ್ಥಿರವಾಗಿತ್ತು. ಅಕ್ರಮವಾಗಿ ದೇಶಕ್ಕೆ ಆಮದಾಗುವ ಮೆಣಸನ್ನು ತಡೆಗಟ್ಟಬೇಕಾಗಿದೆ. ಈ ವಿಚಾರವಾಗಿ ಗೃಹಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ಈ ಹಿಂದಿನ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೇ ಈಗ ಹಣಕಾಸು ಸಚಿವರಾಗಿದ್ದಾರೆ. ಅವರಿಗೆ ಕಾಫಿ ಸಮಸ್ಯೆ ಕುರಿತು ಹೆಚ್ಚಿನ ಮಾಹಿತಿ ಇದೆ. ಕೇಂದ್ರದಿಂದ ಕಾಫಿ ಬೆಳೆಗಾರರಿಗೆ ಆಗಬೇಕಿರುವ ಕೆಲಸದ ಕುರಿತು ಚರ್ಚಿಸಲು ಕಾಫಿ ಬೆಳೆಗಾರರ ನಿಯೋಗವನ್ನು ಜುಲೈ ತಿಂಗಳಲ್ಲಿ ಕರೆದೋಯ್ಯಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಕುರಿತು ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ಜಿಲ್ಲೆಗೆ ಹಲವು ಕೆಲಸಗಳನ್ನು ಮಾಡಲಾಗಿದೆ. ನಗರಕ್ಕೆ ಕೇಂದ್ರೀಯ ವಿದ್ಯಾಲಯವನ್ನು ಮಂಜೂರು ಮಾಡಲಾಗಿದೆ. ಅದರ ಕಟ್ಟಡ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿಸಲಾಗುವುದು. ಇ.ಎಸ್‌.ಐ. ಡಿಸ್ಪೆನ್ಸರಿಯನ್ನು ಮಂಜೂರು ಮಾಡಲಾಗಿದೆ. ಸುಸಜ್ಜಿತ ಆಸ್ಪತ್ರೆ ಮಂಜೂರಾತಿಗೆ ಯತ್ನಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ರೈಲ್ವೆ ಮಾರ್ಗಗಳನ್ನು ಡಬಲ್ ಟ್ರಾಕ್‌ ಮಾಡಬೇಕಿದೆ. ನಗರಿಂದ ಬೆಂಗಳೂರಿಗೆ ತೆರಳುತ್ತಿರುವ ರೈಲಿನ ಸಮಯ ಕಡಿಮೆಗೊಳಿಸುವಂತೆ ಒತ್ತಡವಿದೆ. ಅದರೊಂದಿಗೆ ಹೊಸ ರೈಲನ್ನು ಓಡಿಸಲು ಕೂಡ ಪ್ರಯತ್ನಿಸಲಾಗುವುದು ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಎನ್‌. ಜೀವರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.