ವಿದ್ಯಾರ್ಥಿ-ಶಿಕ್ಷಕರ ನೆಮ್ಮದಿ ಕಸಿದ ಅತಿವೃಷ್ಟಿ!

622ಕ್ಕೂ ಅಧಿಕ ಶಾಲಾ ಕೊಠಡಿಗಳು ಶಿಥಿಲ •ಶಿಕ್ಷಣ ಇಲಾಖೆಗೆ 7.73 ಕೋಟಿ ನಷ್ಟ

Team Udayavani, Aug 19, 2019, 11:43 AM IST

19-Agust-14

ಸಾಂದರ್ಭಿಕ ಚಿತ್ರ

ವಿಶೇಷ ವರದಿ
ಚಿಕ್ಕಮಗಳೂರು:
ಜಿಲ್ಲೆಯಲ್ಲಿ ಹತ್ತು ದಿನ ಸುರಿದ ನಿರಂತರ ಮಳೆ ಅನೇಕ ಕುಟುಂಬಗಳ ಸೂರನ್ನೇ ಕಿತ್ತುಕೊಂಡಿದ್ದಲ್ಲದೆ ಕಾಫಿ, ಅಡಕೆ ತೋಟದ ಮಾಲೀಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಅತಿವೃಷ್ಟಿ ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಸಮಸ್ಯೆ ತಂದೊಡ್ಡಿದ್ದರ ಜೊತೆಗೆ ಶೈಕ್ಷಣಿಕ ವಲಯಕ್ಕೂ ದೊಡ್ಡ ಮಟ್ಟದ ಪೆಟ್ಟು ಕೊಟ್ಟಿದೆ.

ಎಡಬಿಡದೆ ಸುರಿದ ಮಳೆಗೆ ಜಿಲ್ಲೆಯಲ್ಲಿ 622ಕ್ಕೂ ಅಧಿಕ ಶಾಲಾ ಕೊಠಡಿಗಳು ಶಿಥಿಲಗೊಂಡಿವೆ. ಇದರಲ್ಲಿ 350 ಕ್ಕೂ ಹೆಚ್ಚು ಕೊಠಡಿಗಳನ್ನು ಬಳಸುವಂತೆಯೇ ಇಲ್ಲ. ವರುಣಾರ್ಭಟದಿಂದ ಶಿಕ್ಷಣ ಇಲಾಖೆಗೆ 7.73 ಕೋಟಿ ರೂ. ನಷ್ಟವಾಗಿದೆ. ಇನ್ನೊಂದೆಡೆ ಶಿಥಿಲಗೊಂಡ ಕೊಠಡಿಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡುವ ದುಸ್ಸಾಹಸ ಮಾಡುವಂತಿಲ್ಲ. ಏಕೆಂದರೆ ಅವು ಯಾವ ಕ್ಷಣದಲ್ಲಾದರೂ ನೆಲಕ್ಕುರುಳಬಹುದು.

ಮಲೆನಾಡಿನ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌. ಪುರ ಹಾಗೂ ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಇನ್ನೂ ಮಳೆ ಸಣ್ಣದಾಗಿ ಬರುತ್ತಿದೆ. ಮಳೆ ಜೋರಾದರೆ ಇಂಥ ಕೊಠಡಿಗಳಲ್ಲಿ ಬೋಧನೆ ಮಾಡುವುದು ಹೇಗೆಂಬ ಚಿಂತೆ ಶಿಕ್ಷಕ ಸಮುದಾಯದ್ದಾಗಿದೆ.

ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅವರ ಖಡಕ್‌ ಸೂಚನೆಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಕಟ್ಟಡಗಳನ್ನು ಸ್ಥಳೀಯ ಇಂಜಿನಿಯರ್‌ಗಳ ಮೂಲಕ ಪರಿಶೀಲನೆ ಮಾಡಿಸಲಾಗಿದೆ. ಅವರು ನೀಡುವ ವರದಿ ಆಧಾರದಲ್ಲಿ ಕೊಠಡಿಗಳನ್ನು ಬಳಕೆ ಮಾಡಲಾಗುತ್ತದೆ.

ಜಿಲ್ಲೆಯಲ್ಲಿ ಸರ್ಕಾರಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಸೇರಿ ಒಟ್ಟು 1551 ಶಾಲೆಗಳಿವೆ. 327 ಶಾಲೆಗಳಿಗೆ ಹಾನಿಯಾಗಿದೆ. ಒಂದೇ ಕಟ್ಟಡದಲ್ಲಿ ಹಲವು ಕೊಠಡಿಗಳಿರುವುದರಿಂದ ಒಂದು ವೇಳೆ ಶಿಥಿಲ ಕೊಠಡಿ ಕುಸಿದರೆ ಅದಕ್ಕೆ ಹೊಂದಿಕೊಂಡಂತಿರುವ ಸರಿಯಾದ ಕೊಠಡಿಯೂ ನೆಲಕ್ಕುರುಳುವ ಅಪಾಯವಿರುತ್ತದೆ.

ಜಿಲ್ಲಾಧಿಕಾರಿ ಹಾಗೂ ಡಿಡಿಪಿಐ ಹಂತದಲ್ಲಿ ಎಚ್ಚರಿಕೆಯ ಸಂದೇಶ ರವಾನೆಯಾದರೂ ಅಂತಿಮವಾಗಿ ಎಲ್ಲದರ ಜವಾಬ್ದಾರಿ ಹೊರಬೇಕಾದವರು ಶಾಲೆಯ ಮುಖ್ಯ ಶಿಕ್ಷಕರೇ. ಸಹಜವಾಗಿಯೇ ಶಿಕ್ಷಕರ ಮೇಲೆ ಒತ್ತಡ ಹೆಚ್ಚಿದೆ. ಇನ್ನು ಗ್ರಾಮೀಣ ಭಾಗದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದೂ ಕಷ್ಟದ ಕೆಲಸವಾಗಿದೆ.

ಪರ್ಯಾಯ ವ್ಯವಸ್ಥೆ: ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಂಟು ಶಾಲೆಗಳಲ್ಲಿ ಪಾಠ ಮಾಡಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಬಾಳೂರು ಹೊರಟ್ಟಿ ಶಾಲೆ ಸಂಪೂರ್ಣ ಹಾನಿಯಾಗಿದ್ದು, ಸಮೀಪದ ಸಮುದಾಯ ಭವನದಲ್ಲಿ ಶಾಲೆ ನಡೆಸಲಾಗುತ್ತಿದೆ. ಇದೇ ರೀತಿ ಇತರೆ ಶಾಲೆಗಳನ್ನು ಪರ್ಯಾಯ ಸ್ಥಳದಲ್ಲಿ ನಡೆಸಲಾಗುತ್ತಿದೆ. ಆದರೆ, ಈ ಶಾಲೆಗಳಿಗೆ ಕಟ್ಟಡ ನಿರ್ಮಿಸುವ ತನಕ ಈ ಶಾಲೆ ಹೇಗೆ ನಡೆಸಬೇಕು, ಬಿಸಿಯೂಟ ಹೇಗೆ ತಯಾರಿಸಿ ಕೊಡಬೇಕೆಂಬ ಚಿಂತೆ ಶಿಕ್ಷಕರನ್ನು ಕಾಡ ತೊಡಗಿದೆ.

ಹೊಸ ಕಟ್ಟಡಕ್ಕೆ ಅವಕಾಶ: ಶತಮಾನ ಪೂರ್ಣಗೊಳಿಸಿದ ಅನೇಕ ಶಾಲಾ ಕಟ್ಟಡಗಳು ಜಿಲ್ಲೆಯಲ್ಲಿವೆ. ಈಗ ಹಲವು ಶಿಥಿಲಗೊಂಡ ಕಟ್ಟಡಗಳಾಗಿವೆ. ಅತಿವೃಷ್ಟಿ ಕಾರಣದಿಂದ ಈಗ ಶಿಥಿಲಗೊಂಡ ಕೊಠಡಿಗಳಿಗೆ ಪರ್ಯಾಯವಾಗಿ ಕೊಠಡಿ ನಿರ್ಮಾಣಕ್ಕೆ ಈಗಾಗಲೆ ನಿರ್ಧರಿಸಲಾಗಿದೆ.

ಸ್ವಚ್ಛಗೊಳಿಸಿದ ಶಿಕ್ಷಕರು: ಹತ್ತು ದಿನ ಸುರಿದ ಮಳೆಯಿಂದ ಹಲವು ಶಾಲೆಗಳಲ್ಲಿ ನೀರು ನುಗ್ಗಿತ್ತು. ಇಂಥ ಶಾಲಾ ಕೊಠಡಿಯಲ್ಲಿ ಕಸ ಕಡ್ಡಿ, ಕೆಸರು ಸೇರಿಕೊಂಡಿತ್ತು. ಬಿಸಿಯೂಟ ಕಾರ್ಯಕರ್ತರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಒಟ್ಟಾಗಿ ಸ್ವಚ್ಛಗೊಳಿಸಿದ್ದಾರೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.