ತಗ್ಗಿದ ಮಳೆಯಬ್ಬರ; ನಿಲ್ಲದ ಹಾನಿ
ಹಲವೆಡೆ ಸಂಪರ್ಕ ಕಡಿತಶಿರಗೊಳ ಗ್ರಾಮದ ಬಳಿ ಕೊಚ್ಚಿಹೋದ ರಸ್ತೆ ವಿವಿಧ ಗ್ರಾಮಗಳು ಜಲಾವೃತ
Team Udayavani, Oct 23, 2019, 1:16 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ ಮಳೆ ಆರ್ಭಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದರೂ ಹಾನಿ ಮುಂದುವರೆದಿದೆ. ಚಿಕ್ಕಮಗಳೂರು ತಾಲೂಕಿನ ಶಿರಗೊಳ ಗ್ರಾಮದ ಸಮೀಪ ರಸ್ತೆ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ. ತರೀಕೆರೆ ತಾಲೂಕಿನಲ್ಲಿ ಕೆರೆಗಳೆಲ್ಲ ತುಂಬಿ ಕೋಡಿಬಿದ್ದು, ರಸ್ತೆ ಮೇಲೆ ನೀರು ಹರಿಯುತ್ತಿದೆ. ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.
ಚಿಕ್ಕಮಗಳೂರು ತಾಲೂಕಿನ ವಿವಿಧೆಡೆಗಳಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಶಿರಗೊಳ ಗ್ರಾಮದ ಸಮೀಪ ರಸ್ತೆ ಕೊಚ್ಚಿ ಹೋಗಿದೆ. ಇದರಿಂದಾಗಿ ಶಿರಗೊಳ-ಕೋದಿ ಸಂಪರ್ಕ ಕಡಿತಗೊಂಡಿದ್ದು, ಈ ಮಾರ್ಗದಲ್ಲಿ ಓಡಾಡುತ್ತಿದ್ದ ಬಸ್ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯಿಂದಾಗಿ ಎರಡು ಮನೆಗಳಿಗೆ ಹಾನಿಯಾಗಿದೆ. ಅಲ್ಲದೇ, 2 ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ತರೀಕೆರೆ ತಾಲೂಕಿನಲ್ಲಿ ಮಳೆ ಇಲ್ಲವಾದರೂ ತುಂಬಿದ ಕೆರೆಗಳು ಸಮಸ್ಯೆ ಸೃಷ್ಟಿಸಿವೆ. ಈಗಲೂ ಕೆರೆ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಗಡಿಹಳ್ಳಿ-ಅಣ್ಣಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೋಮವಾರದಿಂದಲೂ ಅಣ್ಣಾಪುರ, ಹೊಸೂರು, ನಂದಿಪುರ ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಕಾಟಿಗನೆರೆ, ಬೇಗೂರು, ಸಿದ್ದಾಪುರ ಸೇರಿದಂತೆ ಹಲವು ಗ್ರಾಮಗಳು ಜಲಾವೃತಗೊಂಡಿವೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಖಾಂಡ್ಯ ಹೋಬಳಿ ಸೇರಿದಂತೆ ಗಿರಿಶ್ರೇಣಿಗಳಲ್ಲಿ ಮಂಗಳವಾರ ಮಧ್ಯಾಹ್ನದ ನಂತರ ಉತ್ತಮ ಮಳೆಯಾಗುತ್ತಿದೆ. ಶೃಂಗೇರಿ, ನರಸಿಂಹರಾಜಪುರ ತಾಲೂಕಿನಲ್ಲೂ ಆಗಾಗ ಜೋರಾಗಿ ಮಳೆಯಾಗಿದೆ. ತರೀಕೆರೆ ತಾಲೂಕಿನಲ್ಲಿ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ