ವರ್ಷಧಾರೆಗೆ ಕೋಡಿ ಬಿದ್ದ ಕೆರೆಕಟ್ಟೆ

ರೈತರಲ್ಲಿ ಒಂದೆಡೆ ಖುಷಿ-ಬೆಳೆಹಾನಿಯಿಂದ ದುಃಖ ಬಯಲುಸೀಮೆಯಲ್ಲೂ ಈಗ ನೆರೆ!

Team Udayavani, Oct 24, 2019, 1:38 PM IST

24-October-14

ಚಿಕ್ಕಮಗಳೂರು: ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲ ಕೆರೆಕಟ್ಟೆಗಳೂ ತುಂಬಿ ಕೋಡಿ ಬೀಳುತ್ತಿವೆ. ಮಂಗಳವಾರ ರಾತ್ರಿಯೂ ಜಿಲ್ಲೆಯ ವಿವಿಧೆಡೆಗಳಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಮಾಗಡಿ ಕೆರೆ 10 ವರ್ಷಗಳ ನಂತರ ಇದೇ ಮೊದಲ ಬಾರಿಗೆ ತುಂಬಿ ಕೋಡಿ ಬಿದ್ದಿದೆ. ಅದೇ ರೀತಿ, ಜಿಲ್ಲೆಯ ಬಯಲು ಭಾಗಗಳ ಹಲವು ಕೆರೆಗಳು ಬಹಳ ವರ್ಷಗಳ ನಂತರ ತುಂಬಿ ಕೋಡಿ ಬಿದ್ದಿವೆ.

ತಾಲೂಕಿನ ಉಜ್ಜಿನಿ- ಬಿದರೆಯಲ್ಲಿ ನೀರು ಉಕ್ಕಿ ಹರಿದ ಹಿನ್ನೆಲೆಯಲ್ಲಿ ಭತ್ತದ ಗದ್ದೆಗಳು ಕೊಚ್ಚಿ ಹೋಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ನಗರದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮುಖ್ಯ ಕಾಲುವೆಗಳಲ್ಲಿ ಕಸ-ಕಡ್ಡಿಗಳು ತುಂಬಿ ಕಟ್ಟಿಕೊಂಡಿದ್ದನ್ನು ಜನರೇ ನಿಂತು ಜೆಸಿಬಿ ಮೂಲಕ ತೆರವುಗೊಳಿಸಿದರು.

ರಾಮನಹಳ್ಳಿ -ಗೌರಿ ಕಾಲುವೆಯಲ್ಲಿ ಹತ್ತಾರು ಮೀಟರ್‌ ಉದ್ದಕ್ಕೂ ಜೊಂಡು ಹುಲ್ಲು ಬೆಳೆದಿದ್ದರಿಂದ ಕಸ-ಕಡ್ಡಿಗಳು ಸೇರಿ ಕಟ್ಟಿಕೊಂಡಿತ್ತು. ಇದರಿಂದಾಗಿ ಅಕ್ಕಪಕ್ಕದ ಮನೆಗಳಿಗೆ ಕಾಲುವೆಯ ನೀರು ನುಗ್ಗಿ ಜನ ಪರದಾಡುವ ಸ್ಥಿತಿ ತಲೆದೋರಿತ್ತು.

ಮನೆಗಳಲ್ಲದೆ ಹಿಟ್ಟಿನ ಗಿರಣಿ ಸೇರಿದಂತೆ ರಸ್ತೆಗಳು ಸಹ ಜಲಾವೃತವಾಗಿ ಜಲಚರಗಳನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರಲ್ಲದೆ ನಗರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ. ನೀರು ಇಳಿಮುಖವಾದ ನಂತರ ಸ್ಥಳೀಯ ಎಪಿಎಂಸಿ ವರ್ತಕ ನಾಗರಾಜ್‌ ಆಸಕ್ತಿ ವಹಿಸಿ ತಮ್ಮ ಸ್ವಂತ ಹಣದಲ್ಲಿ ಜೆಸಿಬಿ ಮೂಲಕ ಜೊಂಡು ಹುಲ್ಲನ್ನು ತೆಗೆಸಿದ್ದಾರೆ. ಇದರಿಂದ ನೀರು ಸರಾಗವಾಗಿ ಹರಿಯುತ್ತಿದೆ.

ಸೇತುವೆ ಅವೈಜ್ಞಾನಿಕವಾಗಿರುವ ಕಾರಣ ಧಾರಾಕಾರ ಮಳೆ ಬಂದ ಸಂದರ್ಭದಲ್ಲಿ ಜೊಂಡು ಹುಲ್ಲು ಅಡಚಣೆಯಾಗಿ ಕಟ್ಟಿಕೊಳ್ಳುತ್ತಲೇ ಇದೆ. ಹೀಗಾಗಿ ಮಳೆ ಬಂದಾಕ್ಷಣ ಅಕ್ಕಪಕ್ಕದ ಮನೆಯವರು ಆತಂಕಗೊಳ್ಳುವುದು ಸಹಜವಾಗಿದೆ. ನಗರ ಹಾಗೂ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಂಡಿಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಹೊಲಗದ್ದೆಗಳು ಕೆರೆ ಕೋಡಿಯ ಪ್ರವಾಹಕ್ಕೆ ಸಿಲುಕಿ ಲಕ್ಷಾಂತರ ರೂ. ಮೌಲ್ಯದ ತರಕಾರಿ ಬೆಳೆಗಳು ನೀರು ಪಾಲಾಗಿವೆ.

ತಾಲೂಕಿನ ಬೊಮ್ಮಕಟ್ಟೆಕೆರೆ ಕೋಡಿ ಬಿದ್ದು ನೀರು ರಭಸದಿಂದ ನುಗ್ಗಿದ ಕಾರಣ ಬಂಡಿಹಳ್ಳಿಯ ವಗರಕಟ್ಟೆಕೆರೆ ತುಂಬಿ ಕೋಡಿ ಬಿದ್ದಿದ್ದರಿಂದ ಈ ಅಚ್ಚುಕಟ್ಟು ಪ್ರದೇಶದ ತೋಟ, ಹೊಲ, ಗದ್ದೆಗಳು ಜಲಾವೃತವಾಗಿ ತರಕಾರಿ ಬೆಳೆಗಳು ನಾಶವಾಗಿವೆ. ಇದರೊಂದಿಗೆ ಕುರುವಂಗಿಯ ದೊಡ್ಡಕೆರೆ ಸಹ ತುಂಬಿದೆ. ಮಳೆ ಇದೇ ರೀತಿ ಮುಂದುವರಿದು ಈಚಲುಕೆರೆ ಕೋಡಿ ಬಿದ್ದರೆ ಆ ನೀರು ಈ ಭಾಗದಲ್ಲೇ ಹರಿಯಲಿದೆ. ಆಗ ಮತ್ತಷ್ಟು ರೈತರಿಗೆ ತೀವ್ರ ಸಂಕಷ್ಟ ಎದುರಾಗುವ ಸಂಭವವಿದೆ.

ಈ ಭಾಗದ ರೈತರು ಬಹು ನಿರೀಕ್ಷೆಯೊಂದಿಗೆ ಬೆಳೆದಿದ್ದ ಬೀನ್ಸ್‌, ನವಿಲುಕೋಸು, ಮೂಲಂಗಿ, ಬೀಟ್‌ರೂಟ್‌, ಶುಂಠಿ, ಬಟಾಣಿ, ಟೊಮೆಟೋ ಬೆಳೆಗಳು ನೀರಿನಲ್ಲಿ
ಮುಳುಗಿ ಕೆಲವು ಕೊಳೆತು ಹೋಗಿದ್ದರೆ, ತಿಂಗಳಿಂದ ಬೆಳೆದ ಕೆಲವು ಗಿಡಗಳು ಸಂಪೂರ್ಣ ನೀರು ಪಾಲಾಗಿವೆ.

ಈ ಬಾರಿ ಸುರಿದ ಮಳೆಯಿಂದಾಗಿ ಗ್ರಾಮದ ಚಂದ್ರಪ್ಪ, ಹಾಲೇಶ, ಹರೀಶ, ಕುಮಾರ, ಶೇಖರಪ್ಪ, ನಂಜುಂಡಪ್ಪ, ಬಾಗೇಗೌಡ, ಧನಂಜಯ, ಮಹೇಶ್‌ ಸೇರಿದಂತೆ ಹತ್ತಾರು ರೈತರ ನೂರಾರು ಎಕರೆ ಬೆಳೆ ಹಾನಿಯಾಗಿದೆ.

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.