ಪೀಠೊಪಕರಣ ಖರೀದಿ ಅವ್ಯವಹಾರ ತನಿಖೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕರ್ಮಕಾಂಡ ಬಯಲಿಗೆಳೆಯಲು ಜನಪ್ರತಿನಿಧಿ-ಅಧಿಕಾರಿಗಳ ತಂಡ ರಚನೆಗೆ ನಿರ್ಧಾರ

Team Udayavani, Sep 22, 2019, 12:52 PM IST

22-Sepectember-10

ಚಿಕ್ಕಮಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅರಿವು ಕಾರ್ಯಕ್ರಮ ಮತ್ತು ಪೀಠೊಪಕರಣ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಜನಪ್ರತಿನಿಧಿ ಮತ್ತು ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲು ಜಿಪಂ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಜಿಪಂ ಕಚೇರಿಯ ನಜೀರ್‌ ಸಾಬ್‌ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಬಿ.ಜಿ. ಸೋಮಶೇಖರ್‌, ಅಲ್ಪಸಂಖ್ಯಾತರ ಇಲಾಖೆಯ ಅಧೀನದಲ್ಲಿ ಪ್ರತಿ ತಾಲೂಕಿನಲ್ಲಿ ಮಾಹಿತಿ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಈ ಕೇಂದ್ರ ಇಲಾಖೆಯಿಂದ ದೊರೆಯುವ ಸವಲತ್ತುಗಳ ಕುರಿತು ಅಲ್ಪಸಂಖ್ಯಾತರಿಗೆ ತಿಳಿಸಲು 4,800 ರೂ. ಪ್ರತಿ ಕಾರ್ಯಕ್ರಮಕ್ಕೆ ಖರ್ಚು ಮಾಡಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಶಾಮಿಯಾನ ಮತ್ತು ಕುರ್ಚಿ ಹಾಕಿರುವ ಬಗ್ಗೆ ಬಿಲ್‌ ನೀಡಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗೆ, ಅರಸೀಕೆರೆಯ ಸರ್ಕಾರೇತರ ಸಂಸ್ಥೆಯ ವ್ಯಕ್ತಿಯೊಬ್ಬರಿಗೆ ಉಪ್ಪಳ್ಳಿಯಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವಸತಿ ನಿಲಯದ ನೌಕರರೊಬ್ಬರು ಚೆಕ್‌ ನೀಡಿ ಹಣ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಇಲಾಖೆ ವ್ಯಾಪ್ತಿಯ ತಾಲೂಕು ವಿಸ್ತರಣಾ ಕಚೇರಿಗೆ ಪೀಠೊಪಕರಣ ಸೇರಿದಂತೆ ಇತರೆ ಸಾಮಗ್ರಿಗಳನ್ನು ಹಾಸನ, ಅರಸೀಕೆರೆಯಲ್ಲಿ ಖರೀದಿ ಮಾಡಲಾಗಿದೆ ಎಂದು ತೋರಿಸಲಾಗಿದೆ. ಇಲಾಖೆ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದ್ದರಿಂದ ನಗರದ ಎಐಟಿ ವೃತ್ತದಲ್ಲಿರುವ ಲಕ್ಷ್ಮೀ  ರಂಗನಾಥ ಸ್ಟೋರ್‌ನಿಂದ ವಸ್ತುಗಳನ್ನು ಖರಿದಿಸಲಾಗಿದೆ ಎಂದು ಮಾಹಿತಿ ನೀಡಿದ್ದು, ಆ ವೃತ್ತದಲ್ಲಿ ಈ ಹೆಸರಿನ ಅಂಗಡಿಯೇ ಇಲ್ಲವೆಂದು ಹೇಳಿದರು.

ಕಾರ್ಯಕ್ರಮ ನಡೆಸಿರುವ ಮತ್ತು ಕುರ್ಚಿ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸುವ ಬಗ್ಗೆ ಹಣ ದುರುಪಯೋಗವಾಗಿದ್ದು, ಸಮಗ್ರ ತನಿಖೆ ನಡೆಸುವಂತೆ ಸೋಮಶೇಖರ್‌ ಒತ್ತಾಯಿಸಿದರು. ಸದಸ್ಯರು ಮತ್ತು ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಜಿಪಂ ಅಧ್ಯಕ್ಷರು ಹೇಳಿದರು. ಸಮಿತಿಗೆ ಯಾರನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಅಧಿಕಾರವನ್ನು ಜಿಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಿವೇಚನೆಗೆ ಬಿಡಲಾಯಿತು.

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಾದ ಕಾಫಿ, ಅಡಕೆ, ಕಾಳು ಮೆಣಸು ಶೇ.90 ರಷ್ಟು ಉದುರಿಹೋಗಿದೆ. ಸಮಗ್ರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಉಂಟಾಗಿದೆ ಎಂದು ರಾಮಸ್ವಾಮಿ ತಿಳಿಸಿದರೆ, ಚಿಕ್ಕಮಗಳೂರು ತಾಲೂಕನ್ನು ಅತಿವೃಷ್ಟಿ ವ್ಯಾಪ್ತಿಗೆ ಸೇರಿಸುವಂತೆ ಸೋಮಶೇಖರ್‌ ಆಗ್ರಹಿಸಿದರು. ಕಾಫಿ ಮಂಡಳಿಯವರು ಕಾಫಿ ಬೆಳೆ ನಷ್ಟವನ್ನು ಅಂದಾಜಿಸಲು ಸರ್ವೆ ಕಾರ್ಯ ನಡೆಸಿಲ್ಲವೆಂದು ಸದಸ್ಯೆ ಕವಿತಾ ರಂಗರಾಜು ಹೇಳಿದರು.

ಅತಿವೃಷ್ಟಿಯಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಸ್ಪಂದಿಸಿದ್ದರಿಂದ ಅಧಿಕ ಸಾವು-ನೋವುಗಳನ್ನು ತಡೆಯಲಾಗಿದೆ. ಕೆಲವು ಇಲಾಖೆಯವರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿಲ್ಲವೆಂದು ಆರೋಪಿಸಿದ ಮೂಡಿಗೆರೆ ತಾಪಂ ಅಧ್ಯಕ್ಷ ರತನ್‌, ಬೆಳೆ ನಷ್ಟಕ್ಕೆ ಕಡಿಮೆ ಪರಿಹಾರ ದೊರೆಯುತ್ತದೆ.

ಗುಡ್ಡ ಕುಸಿದು ಕೃಷಿ ಜಮೀನು ನಾಶವಾಗಿದ್ದರೆ ಹೆಚ್ಚು ಪರಿಹಾರ ದೊರೆಯುತ್ತಿದೆ. ಕೃಷಿ ಅಧಿಕಾರಿಗಳು ರೈತರ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿಲ್ಲವೆಂದು ತಿಳಿಸಿದರು. ಮಲೆನಾಡಿನಲ್ಲಿ ಸಂಭವಿಸಿರುವ ನೆರೆ ಸಂತ್ರಸ್ತರ ನೋವಿಗೆ ಬಯಲು ಭಾಗದ ಜನರು ಸ್ಪಂದಿಸಿದ್ದಾರೆ. ವಾಟ್ಸ್‌ಆ್ಯಪ್‌ ಗ್ರೂಪ್‌ ಮಾಡಿಕೊಂಡು ಸಂತ್ರಸ್ತರ ನೆರವಿಗೆ ಸ್ಪಂದಿಸಿರುವ ಅವರನ್ನು ಜಿಪಂ ವತಿಯಿಂದ ಸನ್ಮಾನಿಸಬೇಕೆಂದು ಸದಸ್ಯ ಶರತ್‌ ಕೃಷ್ಣಮೂರ್ತಿ ಸಲಹೆ ನೀಡಿದರು.

ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಜಿಪಂ ವರೆಗೆ ಅಧಿಕಾರ ಹಿಡಿದಿರುವ ಬಿಜೆಪಿ ಜಿಲ್ಲೆಯಲ್ಲಿ ಹೆಚ್ಚು ಶಾಸಕರು ಆಯ್ಕೆಯಾಗಿದ್ದು, ಸಂಸದರನ್ನು ಹೊಂದಿದೆ. ಇವರೆಲ್ಲರೂ ತಮಗೆ ದೊರೆತ ಸುವರ್ಣ ಅವಕಾಶವೆಂದು ತಿಳಿದು ಉತ್ತಮ ಕೆಲಸ ನಿರ್ವಹಿಸಿ, ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ತರಬೇಕೆಂದು ಒತ್ತಾಯಿಸಿದರು.

ತಕ್ಷಣ ಮಧ್ಯ ಪ್ರವೇಶಿಸಿದ ಮೂಡಿಗೆರೆ ತಾಪಂ ಅಧ್ಯಕ್ಷ ರತನ್‌, ಅತಿವೃಷ್ಟಿಯಲ್ಲಿ ರಾಜಕಾರಣ ಬೇಡ. ಪಕ್ಷ ಹೊರಗಿಟ್ಟು ನೆರೆ ಸಂತ್ರಸ್ತರ ಪರವಾಗಿ ಎಲ್ಲ ಜನಪ್ರತಿನಿಧಿಗಳು ಕಾರ್ಯನಿರ್ವಹಿಸೋಣ ಎಂದು ಹೇಳಿದರು.

ನೆರೆಗೆ ಸಂಬಂಧಿಸಿದಂತೆ ಸರ್ಕಾರ ನೊಂದವರ ನೆರವಿಗೆ ನಿಂತಿದೆ. ಜಿಲ್ಲಾಡಳಿತ ಮನೆ ನಿರ್ಮಾಣಕ್ಕೆ ಜಾಗ ಗುರುತು ಮಾಡಿದೆ. ನೊಂದವರ ಪರವಾಗಿ ನಾವೆಲ್ಲ ಆಶಾಕಿರಣ ಮೂಡಿಸೋಣ ಎಂದು ಶಾಸಕ ಬೆಳ್ಳಿ ಪ್ರಕಾಶ್‌ ಹೇಳಿದರೆ, ನೆರೆ ಪ್ರದೇಶಕ್ಕೆ ಮುಖ್ಯಮಂತ್ರಿ, ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ. ಕೇಂದ್ರ ಸರ್ಕಾರದಿಂದಲೂ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಯಾಗಲಿದೆ ಎಂದು ವಿಧಾನಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ತಿಳಿಸಿದರು.

ಪ್ರತಿ ಮಳೆಗಾಲದಲ್ಲಿ ಸಂಕಷ್ಟಕ್ಕೆ ಒಳಗಾಗುತ್ತಿರುವ ಬಂಡಿಮಠ ಮತ್ತು ಹೊಳೆಬಾಗಿಲು ಗ್ರಾಮಗಳನ್ನು ಸ್ಥಳಾಂತರಿ ಸಬೇಕು ಎಂದು ಸದಸ್ಯೆ ಚಂದ್ರಮ್ಮ ಒತ್ತಾಯಿಸಿದರೆ, ಕಳಸಾಕ್ಕೆ ಎಂಬಿಬಿಎಸ್‌ ವೈದ್ಯರನ್ನು ನೇಮಿಸುವಂತೆ ಪ್ರಭಾಕರ್‌ ಒತ್ತಾಯಿಸಿದರು.

ನೆರೆಪೀಡಿತ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದಂತೆ ಬರಪೀಡಿತ ಪ್ರದೇಶಗಳಿಗೂ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಬೆಳವಾಡಿ ರವೀಂದ್ರ ಮನವಿ ಮಾಡಿದರು.

ಬಹುಗ್ರಾಮ ಯೋಜನೆಗೆ ಸಮಗ್ರ ಯೋಜನಾ ವರದಿ ತಯಾರಾಗಿದೆ ಎಂದು ಜಿಪಂ ಅಧ್ಯಕ್ಷರು ಹೇಳಿದರು. ಮಳೆಗಾಲದಲ್ಲಿ ಭದ್ರಾ ನದಿಯ ಹೆಚ್ಚುವರಿ ನೀರನ್ನು ಏತ ನೀರಾವರಿ ಮೂಲಕ ಬಯಲು ಪ್ರದೇಶಕ್ಕೆ ತಿರುಗಿಸುವುದು ಸೂಕ್ತವೆಂದು ರಾಮಸ್ವಾಮಿ ಸಲಹೆ ನೀಡಿದರು.

ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಒಂದೂವರೆ ವರ್ಷದಿಂದ ಸಂಬಳವಾಗಿಲ್ಲ ಎಂದು ತಿಳಿಸಿದ ಅಮಿತಾ ಮುತ್ತಪ್ಪ, ಇಲಾಖೆಯಲ್ಲಿರುವ ದುಡ್ಡು ಮೊಟ್ಟೆ ಹಾಕುತ್ತಾ ಎಂದು ಪ್ರಶ್ನಿಸಿ ಬೇರೆಯವರ ಜೀವನದ ಜೊತೆ ಚೆಲ್ಲಾಟ ಬೇಡವೆಂದರು. ಸಭೆಯಲ್ಲಿ ಉಪಾಧ್ಯಕ್ಷ ವಿಜಯಕುಮಾರ್‌, ಜಿಪಂ ಸಿಇಒ ಎಸ್‌.ಅಶ್ವತಿ ಇತರರಿದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.