ಜಂಟಿ ಸರ್ವೇ ಕಾರ್ಯ ಸಂಪೂರ್ಣ

ಕಂದಾಯ, ಅರಣ್ಯ ಇಲಾಖೆ ಭೂ ಸ್ವಾಧೀನ ಕಾರ್ಯ ಮಾತ್ರ ಬಾಕಿ: ಡಿಸಿ ಡಾ| ಬಗಾದಿ ಗೌತಮ್‌

Team Udayavani, Jul 13, 2019, 1:35 PM IST

Udayavani Kannada Newspaper

ಚಿಕ್ಕಮಗಳೂರು: ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ಕಾರ್ಯ ಸಂಪೂರ್ಣವಾಗಿದ್ದು, ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆ ಬಾಕಿ ಉಳಿದಿದೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಂಟಿ ಸರ್ವೆ ಕಾರ್ಯ ಜಿಲ್ಲೆಯಾದ್ಯಂತ ಪೂರ್ಣಗೊಂಡಿದೆ. ದಾಖಲೆಯಲ್ಲಿರುವ ವಿಸ್ತೀರ್ಣಕ್ಕೂ, ವಾಸ್ತವ ವಿಸ್ತೀರ್ಣಕ್ಕೂ ಕೆಲವೆಡೆ ವ್ಯತ್ಯಾಸಗಳು ಕಂಡು ಬಂದಿವೆ. ಈ ವಿಚಾರವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆಯ ಹೊಂದಾಣಿಕೆ ಸಭೆ ಒಂದು ಬಾರಿ ನಡೆದಿದೆ. ಸೋಮವಾರ ಮತ್ತೂಂದು ಸಭೆ ನಡೆಯಲಿದೆ ಎಂದು ತಿಳಿಸಿದರು.

ಕಂದಾಯ ಹಾಗೂ ಅರಣ್ಯ ಇಲಾಖೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಮಾತ್ರ ಬಾಕಿ ಉಳಿದಿದೆ. ಹೊಂದಾಣಿಕೆ ಸಭೆ ಪೂರ್ಣಗೊಂಡ ನಂತರ ಈ ಕೆಲಸವನ್ನೂ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ನಿರ್ಣಯವಾಗಿಲ್ಲ: ಕುದುರೆಮುಖದ ಟೌನ್‌ಶಿಪ್‌ ಅನ್ನು ಕಳಸ ತಾಲೂಕು ಕೇಂದ್ರದ ತಾಲೂಕು ಕಚೇರಿ ಸೇರಿದಂತೆ ಇನ್ನಿತರೆ ಕಚೇರಿ ಕಟ್ಟಡಗಳಿಗೆ ಬಳಸಿಕೊಳ್ಳುವ ಕುರಿತು ನಿರ್ಣಯವಾಗಿಲ್ಲ. ಅದು ಈಗಲೂ ಕೇವಲ ಚರ್ಚೆಯ ವಿಷಯವಾಗಿದೆಯಷ್ಟೆ. ಟೌನ್‌ಶಿಪ್‌ ಸ್ಥಳದ ಕುರಿತು ಕೆಲವು ತೊಡಕುಗಳಿವೆ. ಈ ಕುರಿತು ಕಾರ್ಕಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಲಾ ಗಿದೆ. ಇರುವ ಕಾನೂನು ತೊಡಕುಗಳ ಕುರಿತೂ ಚರ್ಚಿಸಲಾಗಿದೆ ಎಂದರು.

ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪರಿಶೀಲಿಸಿ ತೀರ್ಪಿಗೆ ಒಳಪಟ್ಟ ಸ್ಥಳವನ್ನು ಬಳಸಿಕೊಳ್ಳಬೇಕಾಗಿದೆ. ಎಲ್ಲ ವಿಚಾರಗಳನ್ನು ಪರಿಶೀಲಿಸಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು. ಈ ವಿಚಾರವಾಗಿ ಯಾವುದೇ ನಿರ್ಣಯ ಕೈಗೊಂಡಿಲ್ಲ. ಯಾವುದೇ ತೀರ್ಮಾನ ಕೈಗೊಳ್ಳುವ ಮೊದಲು ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆದುಕೊಳ್ಳಲಾಗುವುದು. ಅಂತಿಮ ನಿರ್ಣಯ ಸರ್ಕಾರದ್ದು ಎಂದು ಸ್ಪಷ್ಟಪಡಿಸಿದರು.

ಭದ್ರಾ ನದಿಯಲ್ಲಿ ರ್ಯಾಫ್ಟಿಂಗ್‌ ನಡೆಸಲು ನೀಡಿರುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ತಮಗೆ ದೂರು ಬಂದಿದೆ. ಪರಿಶೀಲನೆ ನಡೆಸಲಾಗಿದೆ. ಕಾನೂನು ತಜ್ಞರ ವರದಿಯನ್ನು ಕೇಳಲಾಗಿದೆ. ಅವರಿಂದ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬಂದಿಲ್ಲ. ಒಟ್ಟಾರೆ ಜಿಲ್ಲೆಯಲ್ಲಿ ಜನವರಿ 1 ರಿಂದ ಜು.10ರವರೆಗೆ 637 ಮಿ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ, 423 ಮಿ.ಮೀ. ಮಾತ್ರ ಮಳೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಮಲೆನಾಡು ಪ್ರದೇಶಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ನದಿ ನೀರುಗಳಲ್ಲಿ ಹರಿವು ಹೆಚ್ಚಾಗಿದೆ. ತಾವು ಸಹ ಕೆಲವೆಡೆ ಪ್ರವಾಸ ಮಾಡಿ ಪರಿಶೀಲಿಸಿದ್ದು, ಎಲ್ಲಿಯೂ ಪ್ರವಾಹದ ಭೀತಿ ಎದುರಾಗಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

2018-19ನೇ ಸಾಲಿನಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿದವರಿಗೆ ಈವರೆಗೂ ಬಿಲ್ ಪಾವತಿಸಿಲ್ಲ. ಸರ್ಕಾರದ ಆದೇಶದನ್ವಯ ನೀರು ಸರಬರಾಜಾಗಿರಲಿಲ್ಲ ಎಂಬ ಕಾರಣದಿಂದ ಅದನ್ನು ತಡೆಹಿಡಿಯಲಾಗಿತ್ತು. ಈಗ ಉಪವಿಭಾಗಾಧಿಕಾರಿ, ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ನೀರು ಸರಬರಾಜು ಮಾಡಿರುವುದನ್ನು ಖಚಿತಪಡಿಸಿಕೊಂಡು ವರದಿ ಸಲ್ಲಿಸಲು ಸೂಚಿಸಲಾಗಿದೆ. ಅವರು ಈ ಕುರಿತು ಪರಿಶೀಲನೆ ನಡೆಸುತ್ತಿದ್ದು, ವರದಿ ಸಲ್ಲಿಸಿದ ಕೂಡಲೆ ಬಿಲ್ ಪಾವತಿಸಲಾಗುವುದು. ಹಣದ ಕೊರತೆ ಇಲ್ಲ ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.