ಬಾಕಿ ಅರ್ಜಿ ವಿಲೇಗೆ ಕಂದಾಯ ಅದಾಲತ್‌ ಶೀಘ

ಆಡಳಿತ ಯಂತ್ರ ಚುರುಕಾಗಲಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗದಿರಲಿ

Team Udayavani, Sep 23, 2019, 7:02 PM IST

Udayavani Kannada Newspaper

ಚಿಕ್ಕಮಗಳೂರು: ಅಕ್ರಮ ಸಕ್ರಮ ಯೋಜನೆಯಡಿ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಕಂದಾಯ ಅದಾಲತ್‌ ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಂದಾಗಿ ಜಿಲ್ಲೆಯಲ್ಲಿ ನಮೂನೆ 50, 53, 90ಸಿ, 90ಸಿಸಿ ಗಳಡಿ ಸಲ್ಲಿಸಿರುವ ಅರ್ಜಿಗಳು ಬಾಕಿ ಉಳಿದಿವೆ. ಇವುಗಳನ್ನು ವಿಲೇವಾರಿ ಮಾಡಲು ಕಂದಾಯ ಅದಾಲತ್‌ ಆಯೋಜಿಸಲಾಗುವುದು. ಅಧಿಕಾರಿಗಳಿಗೆ ಕಾಲಮಿತಿ ನಿಗದಿಗೊಳಿಸಿ ತ್ವರಿತಗತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗುವುದು ಎಂದರು.

ಅ.3ಕ್ಕೆ ಸಭೆ: ನಗರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲದಿರುವುದರಿಂದ ಕೆಲಸ ಕಾರ್ಯಗಳು ಸರಿಯಾದ ರೀತಿಯಲ್ಲಿ ಆಗುತ್ತಿಲ್ಲವೆಂಬುದು ತಮ್ಮ ಗಮನಕ್ಕೆ ಬಂದಿದೆ. ಅದೇ ಪರಿಸ್ಥಿತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿಯೂ ಇದೆ. ಆಡಳಿತ ಯಂತ್ರವನ್ನು ಚುರುಕುಗೊಳ್ಳಬೇಕು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ಆಗಬೇಕು. ಈ ನಿಟ್ಟಿನಲ್ಲಿ ಅ.3 ರಂದು ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಕರೆಯಲಾಗಿದೆ ಎಂದರು.

ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಹಾಗೂ ಅಮೃತ್‌ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ. ಯುಜಿಡಿ ಕಾಮಗಾರಿಯನ್ನು ಜನವರಿ 2020ರೊಳಗೆ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ಅದೇ ರೀತಿ ಅಮೃತ್‌ ಯೋಜನೆ ಪೂರ್ಣಗೊಳಿಸಲು 2020 ಡಿಸೆಂಬರ್‌ ವರೆಗೂ ಕಾಲಾವಕಾಶವಿದೆ ಎಂದು ತಿಳಿಸಿದರು.

ನಗರದ ಕೆಲವೆಡೆ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ರವಿ, ತಮ್ಮ ಗಮನಕ್ಕೆ ಬಂದ ಇಂತಹ ಕಟ್ಟಡಗಳ ಕುರಿತು ಕ್ರಮ ಕೈಗೊಳ್ಳಲು ಈ ಹಿಂದೆಯೇ ಸೂಚಿಸಿದ್ದೆ. ಆದರೆ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ತೆರವುಗೊಳಿಸಿರುವ ಕುರಿತು ನಗರಸಭೆಯವರು ಸಿಡಿಎ ಮೇಲೆ, ಸಿಡಿಎ ನಗರಸಭೆ ಮೇಲೆ ಜವಾಬ್ದಾರಿ ವಹಿಸಿ ಸುಮ್ಮನಾಗುತ್ತಿದೆ. ನಮಗೆ ಯಾರ ಮೇಲೂ ಪ್ರೀತಿಯೂ ಇಲ್ಲ, ಪೂರ್ವಾಗ್ರಹ ಪೀಡಿತರಾಗಿಯೂ ಇಲ್ಲ. ಪ್ರಕರಣಗಳ ಕುರಿತು ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಕಟ್ಟಡ ಸರಿಯಾಗಿದ್ದರೆ ಸರಿ ಇದೆ ಎಂಬ ಹಿಂಬರಹ ಕೊಡಿ. ಅಕ್ರಮವಾಗಿದ್ದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಿ ಎಂಬ ಆದೇಶ ನೀಡಿರುವುದಾಗಿ ಹೇಳಿದರು. ಕಲ್ಯಾಣನಗರದಲ್ಲಿ ಉದ್ಯಾನವನವನ್ನು ನಿವೃತ್ತ ಸರ್ಕಾರಿ ನೌಕರರೊಬ್ಬರು ಒತ್ತುವರಿ ಮಾಡಿ ಮಾರಾಟ ಮಾಡಿದ್ದಾರೆ ಎಂಬ ದೂರು ಬಂದಿದ್ದು, ಈ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ನಗರದಲ್ಲಿ ಮೆಡಿಕಲ್‌ ಕಾಲೇಜು ತೆರೆಯುವ ಸಂಬಂಧ ದಾಖಲೆಗಳೊಂದಿಗೆ 2 ದಿನಗಳಲ್ಲಿ ಪ್ರಸ್ತಾವನೆ ಹೋಗಲಿದೆ. ಕೇದ್ರದಲ್ಲಿ 25 ರಂದು ಮೆಡಿಕಲ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಸಭೆ
ನಡೆಯಲಿದೆ. ಆ ಸಭೆಗೆ ಪ್ರಸ್ತಾವನೆ ಸಲ್ಲಿಸುವ ಯತ್ನ ನಡೆಯುತ್ತಿದೆ. ಇಲ್ಲವಾದಲ್ಲಿ ಪುನಃ 2-3 ತಿಂಗಳು ಕಾಯಬೇಕಾಗುತ್ತದೆ. ಸದರಿ ಸಭೆಯಲ್ಲಿ ಕಾಲೇಜು ಆರಂಭಕ್ಕೆ ಒಪ್ಪಿಗೆ ದೊರೆತಲ್ಲಿ ಕೇಂದ್ರ ಸರ್ಕಾರವು ನೋಡಲ್‌ ಅಧಿಕಾರಿಯನ್ನು ನೇಮಿಸುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.