ಕರಗ ಮಹೋತ್ಸವದಲ್ಲಿ ಭಕ್ತಿಯ ಪರಾಕಾಷ್ಠೆ

ಬೆನ್ನಿಗೆ ಕಬ್ಬಿಣದ ಸಲಾಕೆ ಚುಚ್ಚಿಕೊಂಡು ಕರುಮಾರಿಯಮ್ಮದೇವಿಗೆ ಹರಕೆ ತೀರಿಸಿದ ಭಕ್ತರು

Team Udayavani, May 4, 2019, 1:05 PM IST

4-MAY-16

ಚಿಕ್ಕಮಗಳೂರು: ಬೆನ್ನಿಗೆ ಕಬ್ಬಿಣದ ಸಲಾಕೆ ಚುಚ್ಚಿಕೊಂಡು ಮೀಟರ್‌ಗಟ್ಟಲೆ ಟ್ರ್ಯಾಕ್ಟರ್‌ ಎಳೆಯುವ ಭಕ್ತರು, ಎಳೆಮಕ್ಕಳು ಬಾಯಿಗೆ ಕಬ್ಬಿಣದ ಸಲಾಕೆ ಚುಚ್ಚಿಕೊಳ್ಳುವ ವಿಶಿಷ್ಠವಾದ ಹರಕೆ. ಭಕ್ತರು ಬೆನ್ನಿಗೆ ಸಲಾಕೆ ಚುಚ್ಚಿಕೊಂಡು ಹಗ್ಗದ ಮೇಲೆ ನೇತಾಡಿ ದೇವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಹರಕೆ ತೀರಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಕರುಮಾರಿಯಮ್ಮ ದೇವಿಯ ವಿಶೇಷ ಕರಗ ಮಹೋತ್ಸವದಲ್ಲಿ ಕಂಡು ಬಂದ ದೃಶ್ಯಗಳಿವು. ಇದು ಭಕ್ತಿಯ ಪರಾಕಾಷ್ಠೆಗೆ ಸಾಕ್ಷಿಯಾಯಿತು.

ಇಲ್ಲಿನ ಬಸವನಹಳ್ಳಿ ಕೆರೆ ಪ್ರದೇಶದಿಂದ ಬೆಳಗ್ಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಹೊರಟ ಉತ್ಸವದಲ್ಲಿ ಗಮನ ಸೆಳೆದಂತದ್ದು ಭಕ್ತರು ಭಕ್ತಿಯ ಪರಾಕಾಷ್ಠೆಯ ದ್ಯೋತಕವಾಗಿ ನಡೆದ ಸಿಡಿ ರೂಪದ ಭಕ್ತಿಯಾರ್ಚನೆಯ ವಿಧಿವಿಧಾನ.

ನೋಡುಗರ ಎದೆಯನ್ನು ಝಲ್ಲೆನಿಸುವ ರೀತಿಯಲ್ಲಿ ಬೆನ್ನಿಗೆ ಕಬ್ಬಿಣದ ಸಲಾಕೆಗಳನ್ನು ಚುಚ್ಚಿಕೊಳ್ಳುತ್ತಿರುವ ಭಕ್ತರು. ಎಳೆಮಕ್ಕಳು ಕೂಡ ಬಾಯಿಗೆ ಕಬ್ಬಿಣದ ಸಲಾಕೆಯನ್ನು ಚುಚ್ಚಿಕೊಳ್ಳುವ ಮೂಲಕ ಹರಕೆಯನ್ನು ತೀರಿಸಿದರು. ಉತ್ಸವದ ಕೊನೆ ಕ್ಷಣದಲ್ಲಿ ಹರಕೆ ಹೊತ್ತ ಕೆಲವು ಭಕ್ತರು ಬೆನ್ನಿಗೆ ಚುಚ್ಚಲಾಗಿದ್ದ ಕಬ್ಬಿಣದ ಸಲಾಕೆಯೊಂದಿಗೆ ನೆಲದಿಂದ ಸುಮಾರು 100 ಅಡಿಗಳಷ್ಟು ಮೇಲೆ ಕಟ್ಟಲಾಗಿದ್ದ ಹಗ್ಗದೊಂದಿಗೆ ನೇತಾಡುತ್ತಾ ದೇವರಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ನೆರೆದಿದ್ದ ಭಕ್ತರನ್ನು ರೋಮಾಂಚನಗೊಳಿಸಿದರು.

ಕಳೆದ 50 ವರ್ಷಗಳಿಂದಲೂ ಆಚರಣೆ ಮಾಡಿಕೊಂಡು ಬರುತ್ತಿರುವ ಜಾತ್ರೆ ಹತ್ತು ಹಲವು ವಿಶೇಷಗಳಿಂದ ಕೂಡಿದೆ. ಹರಕೆ ಮಾಡಿಕೊಂಡ ಹಾಗೂ ಇಷ್ಟಾರ್ಥ ಈಡೇರಿಸಿಕೊಂಡ ಭಕ್ತರು ತಮ್ಮ ಭಕ್ತಿಯನ್ನು ಬೆನ್ನಿಗೆ ಕಬ್ಬಿಣದ ಸಲಾಕೆಗಳನ್ನು ಚುಚ್ಚಿಕೊಂಡು ಮೀಟರ್‌ಗಟ್ಟಲೆ ದೂರದವರೆಗೆ ಟ್ರ್ಯಾಕ್ಟರ್‌, ಆಟೋ ಇತರೆ ನಾಲ್ಕು ಚಕ್ರದ ಭಾರೀ ವಾಹನಗಳನ್ನು ಎಳೆದು ಆಶ್ಚರ್ಯ ಮೂಡಿಸಿದರು.

ಭಕ್ತಿಯ ಪರವಶತೆಯಲ್ಲಿ ವಾಹನ ಎಳೆಯುತ್ತಿದ್ದವರನ್ನು ಸುತ್ತಲೂ ನೆರೆದಿದ್ದ ಸಾವಿರಾರು ಭಕ್ತರು ದೈವಸ್ತುತಿ ಮೂಲಕ ಹುರಿದುಂಬಿಸಿ ಭಕ್ತಿಯಾರ್ಚನೆ ನಿರ್ವಿಘ್ನವಾಗಿ ನಡೆಯುವಂತಾಗಲು ಸಹಕರಿಸಿದರು. ಇನ್ನು ಕೆಲವು ಭಕ್ತಾಧಿಗಳು ತಮ್ಮ ಹರಕೆಗಳನ್ನು ಬಾಯಿಗೆ ಕಬ್ಬಿಣದ ಸಲಾಕೆಗಳನ್ನು ಚುಚ್ಚಿಕೊಳ್ಳುವ ಮೂಲಕ ತೀರಿಸಿದರು. ತರುವಾಯ ಭಕ್ತರು ದೇವಸ್ಥಾನ ಪ್ರವೇಶಿಸಿ ಅಂತಿಮ ವಿಧಿವಿಧಾನ ಪೂರೈಸಿದರು. ಮನೆಯಲ್ಲಿ ಸುಃಖ, ಶಾಂತಿ, ಕುಟುಂಬದ ಸಮಸ್ಯೆಗಳು ನಿವಾರಣೆಯಾದ ಹಿನ್ನೆಲೆಯಲ್ಲಿ ಭಕ್ತರು ಬೆನ್ನಿಗೆ ಕಬ್ಬಿಣದ ಸಲಾಕೆಗಳನ್ನು ಚುಚ್ಚಿಕೊಂಡು ಲಾರಿ, ಆಟೋ ಮತ್ತು ಇತರೆ ವಾಹನಗಳನ್ನು ಎಳೆದರು.

ಹರಕೆ ಹೊತ್ತಿದ್ದ 50 ಕ್ಕೂ ಹೆಚ್ಚು ಭಕ್ತಾದಿಗಳು ವಿವಿಧ ರೀತಿಯಲ್ಲಿ ತಮ್ಮ ಹರಕೆಗಳನ್ನು ತೀರಿಸಿದರು. ಇವರೆಲ್ಲರೂ ಕೂಲಿಕಾರ್ಮಿಕರಾಗಿದ್ದು, ಕಳೆದ 10 ದಿನಗಳಿಂದಲೂ ವ್ರತವನ್ನು ಪಾಲಿಸುತ್ತಿದ್ದರು.

ಒಟ್ಟಾರೆ ನಗರದ ತಮಿಳು ಕಾಲೋನಿಯಲ್ಲಿ ನಡೆಯುವ ಕರುಮಾರಿಯಮ್ಮ ದೇವಿ ಜಾತ್ರೆ ನೋಡಗರ ಗಮನ ಸೆಳೆಯಿತು. ಎಲ್ಲಾ ಸಮುದಾಯದ ಜನರು ಕೂಡ ಜಾತ್ರೆಯಲ್ಲಿ ಭಾಗವಹಿಸಿದ್ದರು. ದೂರದ ಊರಿನಿಂದ ಬಂದ ಭಕ್ತರು ಹರಿಕೆ ತೀರಿಸಿ, ದೇವಿ ದರ್ಶನವನ್ನು ಪಡೆದುಕೊಂಡರು.

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.