ಜಾನಪದ ಕಲೆ ಪರಿಚಯಿಸಿದ ಧೀಮಂತ ಡಾ| ನಾಗೇಗೌಡ


Team Udayavani, Oct 25, 2019, 4:28 PM IST

25-October–24

ಚಿಕ್ಕಮಗಳೂರು: ಕನ್ನಡದ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ವ್ಯಕ್ತಿ ಡಾ| ಎಚ್‌. ಎಲ್‌.ನಾಗೇಗೌಡರು ಎಂದು ಜಾನಪದ ವಿದ್ವಾಂಸ ಡಾ| ಎಚ್‌.ಎಲ್‌.ಮಲ್ಲೇಶ್‌ಗೌಡ ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಮತ್ತು ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ನಗರದ ಎಐಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಜಾನಪದ ತಜ್ಞ ಡಾ| ಎಚ್‌.ಎಲ್‌.ನಾಗೇಗೌಡರ ಬದುಕು ಬರಹ ಕುರಿತ ವಿಚಾರ ಸಂಕಿರಣದಲ್ಲಿ ಉಪನ್ಯಾಸ ನೀಡಿದರು.

ಜಾನಪದ ತಜ್ಞ ಡಾ| ಎಚ್‌.ಎಲ್‌ .ನಾಗೇಗೌಡರು ಕಥೆ, ಕಥಾ ಸಂಕಲನ, ಕವನ ಸಂಕಲನ, ಕಾದಂಬರಿ ಸೇರಿದಂತೆ 21 ಬೃಹತ್‌ ಕೃತಿಗಳನ್ನು ರಚಿಸಿದ್ದಾರೆ. ಅವೆಲ್ಲವೂ 400-500 ರಷ್ಟು ಪುಟಗಳದ್ದಾಗಿವೆ. ನಾಗೇಗೌಡರು ಬರೆದಿರುವ 8 ಸಂಪುಟಗಳ ಕೃತಿ ಪ್ರವಾಸಿ ಕಂಡ ಇಂಡಿಯಾ ಭಾರತದ ಇತಿಹಾಸವನ್ನು ಪುನರಾವಲೋಕನ ಮಾಡುವುದಕ್ಕೆ ದೇಶದ ಇತಿಹಾಸಕಾರರಿಗೆ ಒಂದು ಮೌಲಿಕ ಕೃತಿಯಾಗಿದೆ ಎಂದರು.

ವಿಜ್ಞಾನದ ವಿದ್ಯಾರ್ಥಿಯಾಗಿದ್ದ ನಾಗೇಗೌಡರು ಐಎಎಸ್‌ ಅಧಿಕಾರಿಯಾಗಿ ಆಡಳಿತವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಯಾವ ಸರ್ಕಾರಗಳೂ, ಯಾವ ವಿಶ್ವವಿದ್ಯಾಲಯಗಳೂ ಮಾಡಲಾಗದಷ್ಟು ಜಾನಪದದ ಸಂಶೋಧನೆಯನ್ನು ಅವರು ಮಾಡಿದ್ದಾರೆ. ದೇಶದ ಅತ್ಯಂತ ಹಿರಿಯ ವಯಸ್ಸಿನ ಶಾಸಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ ಎಂದು ತಿಳಿಸಿದರು. ಒಬ್ಬ ಐಎಎಸ್‌ ಅಧಿಕಾರಿಯಾಗಿ ಗುಡ್ಡಬೆಟ್ಟ ಹತ್ತಿ ಹಳ್ಳಿ ಹಳ್ಳಿಗೆ ಹೋಗಿ ಅತ್ಯಂತ ಪರಿಶ್ರಮದಿಂದ ನಮ್ಮ ಜಾನಪದ ಕಲೆ ಮತ್ತು ಸಾಹಿತ್ಯವನ್ನು ಸಂಗ್ರಹಿಸಿದ್ದಾರೆ. 1500 ಗಂಟೆಗಳಷ್ಟು ಕಾಲ ಕೇಳಬಹುದಾದ ಜಾನಪದದ ಧ್ವನಿ ಸುರುಳಿ ಹಾಗೂ 800 ಗಂಟೆಗಳಷ್ಟು ಕಾಲ ವೀಕ್ಷಿಸಬಹುದಾದ ವೀಡಿಯೋವನ್ನು ಅವರು ಜಾನಪದ ಲೋಕದಲ್ಲಿ ಸಂಗ್ರಹಿಸಿಟ್ಟಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆದಿಚುಂಚನಗಿರಿ ವಿವಿ ಕುಲಸಚಿವ ಡಾ|
ಸಿ.ಕೆ.ಸುಬ್ರಾಯ, ಜಾನಪದ ತಜ್ಞ ಡಾ| ಎಚ್‌. ಎಲ್‌.ನಾಗೇಗೌಡರು ಜಾನಪದದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅವರು ನಿರ್ಮಿಸಿರುವ ಜಾನಪದ ಲೋಕ ಜಗತ್ತಿಗೆ ಮಾದರಿಯಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್‌, ಜಾನಪದ ತಜ್ಞ ಡಾ| ಎಚ್‌.ಎಲ್‌.ನಾಗೇಗೌಡರ ಬದುಕು ಮತ್ತು ಬರಹಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕಲಾವಿದರಾದ ಜಿ.ಬಿ.ಸುರೇಶ್‌, ಬಿಳಗಲಿ ನಾಗರಾಜ್‌, ಚಂದ್ರಶೆಟ್ಟಿ, ಹರಿಣಾಕ್ಷಿ ಮತ್ತು ಜ್ಯೋತಿ ವಿನೀತ್‌ಕುಮಾರ್‌ ಅವರಿಂದ ನಡೆದ ಜಾನಪದ ಕಾರ್ಯಕ್ರಮ ಗಮನ ಸೆಳೆಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಸಿ.ಟಿ.ಜಯದೇವ ಅಧ್ಯಕ್ಷತೆ ವಹಿಸಿದ್ದರು.

ಆಶಾಕಿರಣ ಅಂಧ ಮಕ್ಕಳ ಶಾಲೆ ಅಧ್ಯಕ್ಷ ಡಾ| ಜೆ.ಪಿ.ಕೃಷ್ಣೇಗೌಡ, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ರಂಗಕರ್ಮಿ ವಿನೋದ್‌ ಕುಮಾರ್‌ ಉಪಸ್ಥಿತರಿದ್ದರು. ಗ್ರಂಥಪಾಲಕಿ ಎಂ.ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು. ಪರಿಷತ್ತಿನ ಜಿಲ್ಲಾ ಪ್ರಧಾನ ರ್ಯದರ್ಶಿ ಜಿ.ಬಿ.ವಿರೂಪಾಕ್ಷ ಸ್ವಾಗತಿಸಿ, ಮೂಡಿಗೆರೆ ತಾಲೂಕು ಗೌರವಾಧ್ಯಕ್ಷ ಡಾ| ಮೋಹನ್‌ ರಾಜ್‌ ವಂದಿಸಿದರು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.