ಬೇರೆ ವಿಧಿಯಿಲ್ಲ…ಓಟ್‌ ಮಾಡ್ತಿವಿ !

ಸಮರ್ಪಕ ನೀರು ಪೂರೈಸದಕ್ಕೆ ಗ್ರಾಮಸ್ಥರ ಆಕ್ರೋಶ ಕರಗಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹ

Team Udayavani, Apr 19, 2019, 11:56 AM IST

19-April-8

ಚಿಕ್ಕಮಗಳೂರು: ಕಡೂರು ತಾಲೂಕು ಎಸ್‌.ಬಿದರೆ ಗ್ರಾಮದಲ್ಲಿ ಚುನಾವಣೆಯ ದಿನ ನೀರಿಗಾಗಿ ಕೊಡ ಹಿಡಿದು ಕಾಯುತ್ತಿರುವ ಮಹಿಳೆಯರು.

ಚಿಕ್ಕಮಗಳೂರು: ಯಾವುದೇ ರಾಜಕೀಯ ಪಕ್ಷದವರೂ ನಮ್ಮ ಸಮಸ್ಯೆಯನ್ನು ಬಗೆಹರಿಸುವುದಿಲ್ಲ. ಆದರೆ ಮತದಾನ ಮಾಡುವುದು ನಮ್ಮ ಹಕ್ಕಾಗಿರುವುದರಿಂದ ವಿಧಿಯಿಲ್ಲದೆ ಹಕ್ಕು ಚಲಾಯಿಸುತ್ತಿದ್ದೇವಷ್ಟೆ… ಇದು ಬಯಲುಸೀಮೆ ಪ್ರದೇಶಗಳಲ್ಲಿ ಚುನಾವಣೆಯ ದಿನ ಗ್ರಾಮಸ್ಥರು ಹೇಳಿದ ಮಾತು.

ಗುರುವಾರ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಯಲುಸೀಮಯ ವಿವಿಧ ಭಾಗಗಳ ಗ್ರಾಮಗಳಿಗೆ ಭೇಟಿ ನೀಡಿದ ಪತ್ರಕರ್ತರುಗಳೊಂದಿಗೆ ಮಾತನಾಡಿದ ಗ್ರಾಮಸ್ಥರು ರಾಜಕೀಯ ಪಕ್ಷಗಳ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಕರಗಡ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳದೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆನಾಶವಾಗಿದೆ. ಮೂರು ಪಕ್ಷದ ಮುಖಂಡರು ತಾವು ಕರಗಡ ಯೋಜನೆಯನ್ನು ಪೂರ್ಣಗೊಳ್ಳಿಸುತ್ತೇವೆಂದು ನಾ ಮುಂದು… ತಾ ಮುಂದು… ಎಂದು ಬಂದು ನಾಟಕ ಮಾಡುತ್ತಾರೆ. ಇದುವರೆಗೂ ಕಾಮಗಾರಿ
ಪೂರ್ಣಗೊಂಡಿಲ್ಲ, ಒಂದು ಹಿಟಾಚಿ, ಒಂದು ಕಲ್ಲು ಕೊರೆಯುವ ಯಂತ್ರ ಹಾಗೂ ಮೂರು ಜನ ಕೆಲಸ ಮಾಡುತ್ತಿದ್ದಾರೆ.

ಹೀಗಾದರೆ ಕಾಮಗಾರಿ ಮುಗಿಯಲು ಸಾಧ್ಯವೆ? ಕಲ್ಲು ಕೊರೆಯಲು
ತಂದಿರುವ ಕ್ರಷರ್‌ ಟಾಯ್ಲೆಟ್‌ ಗುಂಡಿ ತೆಗೆಯುವಾಗ ಬಳಸುವ ಕ್ರಷರ್‌ನಂತಿದೆ. ಇದರಿಂದ ಅಷ್ಟೊಂದು ದೊಡ್ಡ ಬಂಡೆ ಕೊರೆಯಲು ಸಾಧ್ಯವೇ ಎಂದು ವ್ಯಂಗ್ಯವಾಡಿದ್ದಾರೆ. ನೀರಿನ ಸಮಸ್ಯೆಯಿಂದ ಇಡೀ ಗ್ರಾಮಸ್ಥರೇ ಬೇಸರಗೊಂಡಿದ್ದು, ದೇಶದ ಹಿತಕ್ಕಾಗಿ ಅನಿವಾರ್ಯವಾಗಿ ಮತದಾನ ಮಾಡಬೇಕಾಗಿದೆ
ಎಂದು ಗ್ರಾಮಸ್ಥರಾದ ಚಂದ್ರಶೇಖರ್‌ ಹಾಗೂ ಜಗದೀಶ್‌ ತಮ್ಮ ನೋವನ್ನು ತೋಡಿಕೊಂಡರು. ಬೆಳವಾಡಿ ಗ್ರಾಮದಲ್ಲಿಯೂ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ತಮ್ಮ ಅಳಲು
ತೋಡಿಕೊಂಡರು. ಅದೇ ಪರಿಸ್ಥಿತಿ ಸಿಂದಗೆರೆ, ಪಿಳ್ಳೇನಹಳ್ಳಿ ಗ್ರಾಮಗಳಲ್ಲಿಯೂ ಕಂಡು ಬಂದಿತು.

ಎಸ್‌.ಬಿದರೆ ಗ್ರಾಮದಲ್ಲಿಯಂತೂ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮದಲ್ಲಿ 3-4 ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ವಿದ್ಯುತ್‌ ಸಮಸ್ಯೆ ಇದೆ ಎಂಬ ಕಾರಣದಿಂದ ಬೆಳಗಿನ ಜಾವ 3 ಗಂಟೆಗೆ ನೀರು
ಬಿಡುತ್ತಾರೆ. 6 ಗಂಟೆಯವರೆಗೂ ನೀರು ಬರುತ್ತದೆ. ಸಿಗುವ 4-5 ಕೊಡ ನೀರಿಗಾಗಿ ಮನೆಯವರೆಲ್ಲರೂ ನಿದ್ದೆಗೆಟ್ಟು ನಿಲ್ಲುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ ಸಹ ಗ್ರಾಮ ಪಂಚಾಯತ್‌ನವರು ಟ್ಯಾಂಕರ್‌ ಮೂಲಕ ನೀರು ಬಿಡಲು ಮುಂದಾಗುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ
ಹಲವೆಡೆ ಬೋರ್‌ವೆಲ್‌ಗ‌ಳನ್ನು ಕೊರೆದಿದ್ದರೂ ನೀರು ಬಂದಿಲ್ಲ. 1000-1200 ಅಡಿ ಕೊರೆದರೂ ನೀರು ಸಿಗುತ್ತಿಲ್ಲ. ಈಗ ಹೊಸದಾಗಿ ಕೊರೆದಿರುವ ಬೋರ್‌ ವೆಲ್‌ನಲ್ಲಿ ನೀರು ಬಂದಿದೆ. ಆದರೆ ಇನ್ನೂ ಪೈಪ್‌ಲೈನ್‌ ಅಳವಡಿಸಿಲ್ಲ. ಅಲ್ಲಿಯವರೆಗಾದರೂ ಟ್ಯಾಂಕರ್‌
ಮೂಲಕ ನೀರು ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಶೀಘ್ರದಲ್ಲಿಯೇ ಗ್ರಾಮದಲ್ಲಿ ಜಾತ್ರೆ ನಡೆಯಲಿದೆ. ಈ ಜಾತ್ರೆಗೆ ಸಹಸ್ರಾರು ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳುತ್ತಾರೆ. ಆಗ ನೀರನ್ನು ಹೇಗೆ ಒದಗಿಸುವುದು ಎಂಬ ಚಿಂತೆ ನಮ್ಮದಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡರು.

ಒಟ್ಟಾರೆಯಾಗಿ ಬಯಲುಸೀಮೆ ಪ್ರದೇಶಗಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಬಿಸಿಲ ತೀವ್ರತೆಯೂ ಹೆಚ್ಚಾಗಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ
ಪರಿತಪಿಸುವಂತಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈಗಲಾದರೂ ಉಲ್ಬಣಗೊಂಡಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಬೇಕಾಗಿದೆ.

ಎಸ್‌.ಕೆ.ಲಕ್ಷ್ಮೀಪ್ರಸಾದ್‌

ಟಾಪ್ ನ್ಯೂಸ್

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.