ಕ್ಷೇತ್ರ ತ್ಯಾಗದಿಂದ ಅವನತಿಯತ್ತ ಕಾಂಗ್ರೆಸ್‌: ಅಮೃತ್‌ಶೆಣೈ

ಚಿಕ್ಕಮಗಳೂರು ಕ್ಷೇತ್ರದಲ್ಲಿತ್ತು ಕಾಂಗ್ರೆಸ್‌ ಗೆಲುವಿನ ಪೂರಕ ವಾತಾವರಣ

Team Udayavani, Apr 13, 2019, 4:44 PM IST

13-April-29

ತರೀಕೆರೆ: ಪಕ್ಷೇತರ ಅಭ್ಯರ್ಥಿ ಅಮೃತ್‌ಶಣೈ.ಪಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತರೀಕೆರೆ: ಜೆಡಿಎಸ್‌ನ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮೂಲತಃ ಕಾಂಗ್ರೆಸ್ಸಿಗ. ಈ ನಿರ್ಣಯದಿಂದ ಕಾಂಗ್ರೆಸ್‌ ಕಾರ್ಯಕರ್ತರು ನೋವಿನಲ್ಲಿದ್ದು ಮತವನ್ನು ಯಾರಿಗೆ ಚಲಾಯಿಸಬೇಕು ಎಂಬ ಗೊಂದಲಿದ್ದಾರೆ. ಕ್ಷೇತ್ರ ತ್ಯಾಗದಿಂದ ಕಾಂಗ್ರೆಸ್‌ ಅವನತಿ ಹಾದಿಯಲ್ಲಿದೆ ಎಂದು ಸ್ವತಂತ್ರ ಅಭ್ಯರ್ಥಿ
ಅಮೃತ್‌ ಶಣೈ ಪಿ. ಹೇಳಿದರು.

ಪಟ್ಟಣದಲ್ಲಿ ಮತಯಾಚಿಸಿ ಅವರು ಸುದ್ದಿಗಾರರೊದಿಗೆ ಮಾತನಾಡಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿಗೆ ಪೂರಕ ವಾತಾವರಣವಿತ್ತು. ಚುನಾವಣಾ ಪೂರ್ವ ಮೈತ್ರಿಗಾಗಿ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದು ಸರಿಯಲ್ಲ. ಹೊಂದಾಣಿಕೆ ಮಾಡಿಕೊಳ್ಳುವ ಮುನ್ನ ಲೋಕಸಭಾ ವ್ಯಾಪ್ತಿಯಲ್ಲಿ ಸಧೃಢವಾಗಿದ್ದ ಕಾಂಗ್ರೆಸ್‌ ಸ್ಥಾನ ಬಿಟ್ಟು ಕೊಡಬಾರದಿತ್ತು ಎಂದರು.

ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದರು ಸಹ ಆ ಪಕ್ಷಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಮರ್ಥವಾದ ಅಭ್ಯರ್ಥಿ ಇರಲಿಲ್ಲ. ಎರವಲು ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರಿಗೆ ಬಿ.ಫಾರಂ ನೀಡಿ ಸ್ಪರ್ಧಿಸುವಂತೆ ಮಾಡಲಾಗಿದೆ ಎಂದರು.

ಕ್ಷೇತ್ರವನ್ನು ಬಿಟ್ಟು ಕೊಡಬಾರದು ಎಂದು ಎರಡು ಜಿಲ್ಲೆಯ ಕಾಂಗ್ರೆಸ್‌ ಪಕ್ಷದವರು ನಿರ್ಣಯಿಸಿ, ಪಕ್ಷಕ್ಕೆ ಕಳುಹಿಸಿ ಕೊಡಲಾಗಿತ್ತು, ಅಲ್ಲದೆ ಪಕ್ಷದ
ಮುಖಂಡರನ್ನು ಭೇಟಿ ಮಾಡಿ ಕಾರ್ಯಕರ್ತರ ಮನಸ್ಥಿತಿ ವಿವರಿಸಲಾಗಿತ್ತು. ಆದರೆ, ಪಕ್ಷದ ಹೈಕಮಾಂಡ್‌ ಕ್ಷೇತ್ರ ಬಿಟ್ಟು ಕೊಟ್ಟು ಕಾಂಗ್ರೆಸ್‌ಗೆ ಸೀಮಿತವಾಗಿದ್ದ ಮತದಾರರನ್ನು ಸಂಕಷ್ಟಕ್ಕೆ ದೂಡಿತು ಎಂದರು. ತಳಮಟ್ಟದ ಸಂಘಟನೆ ಹೊಂದಿದ್ದ ಕ್ಷೇತ್ರವನ್ನು ಕಾಂಗ್ರೆಸ್‌ ಹೈಕಮಾಂಡ್‌ ಜೆಡಿಎಸ್‌ಗೆ ಧಾರೆ ಎರೆದಿದ್ದು ಅಸಮರ್ಥನೀಯ.ಅಂತಹ ತಪ್ಪು ಪಕ್ಷದಲ್ಲಿ
ಮರುಕಳಿಸಬಾರದು ಎಂಬ ಕಾರಣಕ್ಕಾಗಿ ಮತ್ತು ಕಾಂಗ್ರೆಸ್‌ ಹಿತದೃಷ್ಠಿಯಿಂದ, ಮನನೊಂದ ಕಾಂಗ್ರೆಸ್‌ ಕಾರ್ಯಕರ್ತರ ಪರವಾಗಿ ಸ್ಪರ್ಧೆ ಮಾಡಿದ್ದೇನೆ.
ನಾನು ಪಕ್ಷೇತರ ಅಭ್ಯರ್ಥಿಯೇ ಹೊರತು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯಲ್ಲ. ನಿಸ್ವಾರ್ಥ ಹೋರಾಟಕ್ಕಾಗಿ ಚುನಾವಣೆಯಲ್ಲಿದ್ದೇನೆ ಎಂದರು.

ಎಐಸಿಸಿ ಸದಸ್ಯನಾಗಿ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರದ ಜನರ ಬಗ್ಗೆ ತೋರಿದ ನಿರ್ಲಕ್ಷತೆ ಬಗ್ಗೆ ಮತದಾರರ ಮನ ಮುಟ್ಟುವ ಕೆಲಸ ಮಾಡಿದ್ದೇನೆ.
ಶೋಭಾ ಕರಂದ್ಲಾಜೆ ಅವರಿಗೆ ಸ್ವಪಕ್ಷೀಯರೆ ಗೋಬ್ಯಾಕ್‌ ಶೋಭಾ ಎನ್ನುವ ಕಾರ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದರು. ಸಂಸದೆ ಶೋಭಾ ಸೋಲಿಗೆ ಕ್ಷೇತ್ರದಲ್ಲಿ ಪೂರಕ ವಾತಾವರಣವಿತ್ತು. ಅದನ್ನು ಬಳಸಿಕೊಳ್ಳುವಲ್ಲಿ ಪಕ್ಷ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳಿಬ್ಬರು ಅ ಧಿಕಾರದಲ್ಲಿದ್ದವರು. ಆದರೂ ಜಿಲ್ಲೆಯ ಜನತೆಗೆ ಯಾವುದೇ ಕೊಡುಗೆ ನೀಡಿಲ್ಲ.
ಅಲ್ಲಿನ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಕಾರ್ಮಿಕರಿಗೆ ಕೂಲಿ ಸಿಗದಂತಾಗಿದೆ. ಮರಳು ದೊರೆಯದೆ
ಹಲವಾರು ಕಟ್ಟಡಗಳು, ಆಶ್ರಯ ಮನೆಗಳು ನಿರ್ಮಾಣ ಹಂತದಲ್ಲಿಯೇ ಉಳಿದಿವೆ. ಪ್ರಮೋದ್‌ ಮಧ್ವರಾಜ್‌ ಅಧಿಕಾರದಲ್ಲಿದ್ದಾಗ ಇದಕ್ಕೆ ಶೋಭಾ
ಕರಂದ್ಲಾಜೆ ಕಾರಣವೇನೆಂಬುದು ಹೇಳಲಿಲ್ಲ ಎಂದು ಟೀಕಿಸಿದರು.

ಮೀನುಗಾರರು ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ. 7 ಕುಟುಂಬದವರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಅವರ ಕಣ್ಣೀರೋಸುವ ಕೆಲಸವನ್ನು ಈರ್ವರು ಮಾಡಲಿಲ್ಲ. ಆಧುನಿಕ ತಂತ್ರಜ್ಞಾನ ಹೊಂದಿದ್ದರು ಕೂಡ ಅವರನ್ನು ಕಂಡು ಹಿಡಿಯುವಲ್ಲಿ ಸಫಲರಾಗಿಲ್ಲ. ಚುನಾವಣೆಯ
ನಂತರ ಮೀನುಗಾರರು ನಾಪತ್ತೆಯಾಗಿರುವ ಬಗ್ಗೆ ನ್ಯಾಯಾಲಯದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಮೊಕದ್ದಮೆ ದಾಖಲು ಮಾಡುತ್ತೇನೆ
ಎಂದರು.

ಉಡುಪಿ ಜಿಲ್ಲೆ ವಿದ್ಯಾವಂತರನ್ನು ಉತ್ಪಾದಿಸುವ ಕಾರ್ಖಾನೆ. ವಿದ್ಯಾವಂತರಿಗೆ ಉದ್ಯೋಗ ಸಿಗುತ್ತಿಲ್ಲ. ಉದ್ಯೋಗ ಸೃಷ್ಠಿಗೆ ವಿಪುಲವಾದ ಅವಕಾಶವಿದ್ದರೂ
ಸಹ ಸಾಫ್ಟ್‌ವೇರ್‌, ಐಟಿ ಪಾರ್ಕ್‌ಗಳ ಸ್ಥಾಪನೆ ಮಾಡುವಲ್ಲಿ ಕೇಂದ್ರ ವಿಫಲವಾಗಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಉಡುಪಿ ಇನ್ನೂ ಒಂದೆರಡು
ದಶಕಗಳಲ್ಲಿ ವೃದ್ಧಾಶ್ರಮವಾಗಲಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳಿವೆ. ಕಾಫಿ ಅಡಿಕೆ, ತೆಂಗು, ಮೆಣಸು ರೈತರು ಸಂಕಷ್ಟದಲ್ಲಿದ್ದಾರೆ. ಆತ್ಮಹತ್ಯೆಯ ದಾರಿಯಲ್ಲಿದ್ದಾರೆ ಇದಕ್ಕೆ ಬ್ಯಾಂಕ್‌ ಮತ್ತು ಖಾಸಗಿ ಲೇವಾದೇವಿಯವರು ಕಾರಣ. ರೈತರು ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಬ್ಯಾಂಕಿನ ನೀತಿ ಕಠಿಣವಿದೆ. ಇದನ್ನು ಸರಳೀಕರಣಗೊಳಿಸಬೇಕಾಗಿದೆ. ದೇಶದ ಆರ್ಥಿಕ
ನೀತಿ ರೈತರಿಗೆ ಪೂರಕವಾಗಿರಬೇಕು ಎಂದರು. ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಜಿಲ್ಲೆ ಪ್ರವಾಸೋದ್ಯಮಕ್ಕೆ ಮುಕ್ತ ಅವಕಾಶಗಳಿವೆ. ಈ ಭಾಗವನ್ನು ವಿಶ್ವ ವಿಖ್ಯಾತ ಪ್ರವಾಸಿ ತಾಣ ಮಾಡುವುದು ತಮ್ಮ ಗುರಿ. ಮತದಾರರು ನನ್ನನ್ನು ಆಯ್ಕೆ ಮಾಡಿದಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ಮನಃಶಾಸ್ತ್ರಜ್ಞೆ ಜಯಶ್ರೀಭಟ್‌, ಅಬುಬೂಕರ್‌, ವರದರಾಜ್‌ ಹಲವಾರು ಕಾರ್ಯಕರ್ತರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.