ಗುತ್ತಿಗೆದಾರರಿಂದ ರೈತರಿಗೆ ವಂಚನೆ : ಆರೋಪ
Team Udayavani, Feb 22, 2021, 6:25 PM IST
ಚಿಕ್ಕಮಗಳೂರು: ಕಡೂರು, ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ರೈತರಿಗೆ ವಂಚಿಸಿದ್ದಾರೆ ಎಂದು ಹಿರೇಗೌಜ ಗ್ರಾಪಂ ಸದಸ್ಯ ಎಚ್.ಎಸ್. ಶಿವಕುಮಾರ ಆರೋಪಿಸಿದ್ದಾರೆ.
ಭಾನುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ವೇಳೆ ಹಿರೇಗೌಜ ಗ್ರಾಮದ ಕೆಲವು ರೈತರ ಜಮೀನಿನಿಂದ ಉಚಿತವಾಗಿ ಗ್ರಾವೆಲ್ ಮಣ್ಣು ತೆಗೆದಿದ್ದು, ಬದಲಿಗೆ ಗೋಡು ಮಣ್ಣು ಹಾಕಿಸಿಕೊಡುವುದಾಗಿ ಭರವಸೆ ನೀಡಿ ನೂರಾರು ಲೋಡ್ ಮಣ್ಣು ತೆಗೆದಿದ್ದಾರೆ. ಇದುವರೆಗೂ ರೈತರ ಜಮೀನುಗಳಿಗೆ ಬದಲಿ ಮಣ್ಣು ಹಾಕಿಸಿಲ್ಲ, ಗ್ರಾವೆಲ್ ಮಣ್ಣು ತೆಗೆದಿರುವುದರಿಂದ ರೈತರು ತಮ್ಮ ಜಮೀನಿನಲ್ಲಿ ಕೃಷಿ ಮಾಡಲು ಸಾಧ್ಯವಾಗದಂತಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಗುತ್ತಿಗೆದಾರನಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದ ಅವರು, ಹಿರೇಗೌಜ ಗ್ರಾಮದ ಮುಖ್ಯರಸ್ತೆಯಲ್ಲಿ ನಿರ್ಮಿಸಲಾಗಿದ್ದ ಬಸ್ ನಿಲ್ದಾಣ ಕಾಮಗಾರಿಗೆ ಅಡ್ಡಿಯಾಗಿದ್ದರಿಂದ ಬಸ್ ನಿಲ್ದಾಣ ತೆರವು ಮಾಡಿ ಬದಲಿಗೆ ಬಸ್ ನಿಲ್ದಾಣ ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಿದ್ದರು. ಇದೀಗ ಬದಲಿಗೆ ತಾತ್ಕಾಲಿಕ ಶೆಡ್ ಮಾದರಿಯಲ್ಲಿ ಸಣ್ಣ ನಿಲ್ದಾಣ ಮಾಡಲಾಗಿದೆ ಎಂದು ಆರೋಪಿಸಿದರು.
ರಸ್ತೆ ಕಾಮಗಾರಿ ಗುತ್ತಿಗೆದಾರ ಒಂದು ವಾರದೊಳಗೆ ಕೊಟ್ಟ ಮಾತಿನಂತೆ ರೈತರ ಜಮೀನಿಗೆ ಬದಲಿ ಮಣ್ಣು ಹಾಕಿಸಿಕೊಡಬೇಕು ಹಾಗೂ ದೊಡ್ಡದಾದ ಬಸ್ ನಿಲ್ದಾಣವನ್ನು ನಿರ್ಮಿಸಿಕೊಡಬೇಕು. ಇಲ್ಲದಿದ್ದರೆ ರಸ್ತೆತಡೆ ಚಳುವಳಿ ಮಾಡುವುದಾಗಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!