ಸಾಯಿ ಮಂದಿರದಲ್ಲಿ ಗುರು ಪೌರ್ಣಿಮೆ
Team Udayavani, Jul 10, 2020, 3:31 PM IST
ಚಿಕ್ಕಮಗಳೂರು: ಸಾಯಿಬಾಬಾ ಮಂದಿರದಲ್ಲಿ ವಾರ್ಷಿಕ ಗುರು ಪೌರ್ಣಮೆ ಆಚರಿಸಲಾಯಿತು.
ಚಿಕ್ಕಮಗಳೂರು: ನಗರದ ಗೃಹಮಂಡಳಿ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಾರ್ಷಿಕ ಗುರು ಪೌರ್ಣಮೆಯನ್ನು ಗುರುವಾರ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಉತ್ಸವದ ಪ್ರಯುಕ್ತ ಬೆಳಗ್ಗೆ ಬಾಬಾ ಅವರ ವಿಗ್ರಹಕ್ಕೆ ಕಾಕಡಾರತಿ, ಅಭಿಷೇಕ, ವಿಶೇಷ ಪೂಜೆ, ಹೂವಿನ ಅಲಂಕಾರ ನಡೆಯಿತು. ನಂತರ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಮಧ್ಯಾಹ್ನ ವಿಶೇಷ ಆರತಿ, ಮಹಾಮಂಗಳಾರತಿ ಜರುಗಿತು. ಸಂಜೆ ಧೂಪಾರತಿ, ಶೇಜಾರತಿ ನಡೆದವು. ಭಕ್ತರಿಂದ ಭಜನೆ, ನಾಮಸಂಕೀರ್ತನೆ, ಸ್ತ್ರೋತ್ರ ಪಠಣ ನಡೆಯಿತು.
ಗುರು ಪೌರ್ಣಮೆ ಪ್ರಯಕ್ತ ಶ್ರೀ ಸಾಯಿಬಾಬಾ ಅವರ ಮೂಲ ವಿಗ್ರಹದ ಪಾದಸ್ಪರ್ಶಕ್ಕೆ ಅವಕಾಶವಿದ್ದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೆ ನಗರ ಮತ್ತು ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಬಾಬಾ ಅವರ ಪಾದಸ್ಪರ್ಶಿಸಿ ಧನ್ಯತಾ ಭಾವ ಮೆರೆದರು. ಮಂದಿರದ ಮುಖ್ಯಟ್ರಸ್ಟಿ ಜಿ.ಎನ್. ಆನಂದಸಾಯಿ ಮಾತನಾಡಿ, ಪ್ರತಿವರ್ಷ ಗುರು ಪೌರ್ಣಮೆ ಮಹೋತ್ಸವವನ್ನು ಸಹಸ್ರಾರು ಭಕ್ತರೊಂದಿಗೆ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಸರಳವಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು