Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…
Team Udayavani, Mar 25, 2024, 3:44 PM IST
ಚಿಕ್ಕಮಗಳೂರು: ದೇಶ ಒಳ್ಳಯದಾಗಬೇಕಾದರೆ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕೆಂದು ಶತಾಯುಷಿ ಅಜ್ಜಿಯೊಬ್ಬರು ಟೆಂಪಲ್ ರನ್ ಮಾಡುತ್ತಿದ್ದಾರೆ.
ಅಂದಹಾಗೆ ಶತಾಯುಷಿ ಅಜ್ಜಿ ಶಿವಮ್ಮಗೆ ಈಗ 102 ವರ್ಷ ವಯಸ್ಸು,
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಭೇಟಿ ನೀಡಿದ ತುಮಕೂರಿನ ಶತಾಯುಷಿ ಶಿವಮ್ಮ ಅವರು ರಂಭಾಪುರಿ ಶ್ರೀಗಳ ದರ್ಶನ ಮಾಡಿ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಮಳೆ -ಬೆಳೆ ಇಲ್ಲ, ದೇಶದ ಜನ ಸಮಸ್ಯೆಯಲ್ಲಿದ್ದಾರೆ, ಕಾಡು ಪ್ರಾಣಿಗಳು ಕುಡಿಯೋಕೆ ನೀರಿಲ್ಲದೆ ಪರದಾಡುತ್ತಿವೆ. ದೇಶಕ್ಕೆ ಮೋದಿ ಪ್ರಧಾನಿಯಾದರೆ ಮಳೆ-ಬೆಳೆ ಚೆನ್ನಾಗಿ ಆಗಿ ದೇಶ ಸುಭಿಕ್ಷವಾಗಿರುತ್ತೆ ಎಂದು ಹೇಳಿದರು.
ನನ್ನ ಸ್ವಾರ್ಥಕ್ಕಾಗಿ ಏನೂ ಇಲ್ಲ… ಸ್ವಾರ್ಥಕ್ಕೆ ಹೇಳ್ತಿಲ್ಲ, ದೇಶ ಚೆನ್ನಾಗಿ ಇರಬೇಕು, ಜನ ಚೆನ್ನಾಗಿ ಇರಬೇಕು ಅಂದ್ರೆ ದೇಶಕ್ಕೆ ಮೋದಿ ಬೇಕು, ದೇವರ ಬಳಿ ನನಗಾಗಿ ಏನನ್ನು ಕೇಳಿಕೊಂಡಿಲ್ಲ, ದೇಶ, ಮೋದಿಗಾಗಿ ಬೇಡಿದ್ದೇನೆ ಎಂದು ಹೇಳಿದ್ದಾರೆ,
ಪ್ರಧಾನಿ ಮೋದಿಗಾಗಿ ಮಗನ ಜೊತೆ ದೇವಾಲಯಗಳನ್ನ ಸುತ್ತುತ್ತಿರೋ ಶಿವಮ್ಮ ಮಲೆಮಹದೇಶ್ವರಕ್ಕೆ ಭೇಟಿ ನೀಡಿ, ರಂಭಾಪುರಿ ಮಠಕ್ಕೂ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: Tragedy: SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ