ಫೇಸ್ ಬುಕ್ ಪ್ರೀತಿ: 17 ವರ್ಷದ ಬಾಲಕನೊಂದಿಗೆ 20 ವರ್ಷದ ಯುವತಿಯ ಮದುವೆ! ಪ್ರಕರಣ ದಾಖಲು
Team Udayavani, Jun 27, 2021, 12:23 PM IST
ಚಿಕ್ಕಮಗಳೂರು: ಫೇಸ್ ಬುಕ್ ಮುಖಾಂತರ ಪರಿಚಯವಾಗಿ 20 ವರ್ಷ ವಯಸ್ಸಿನ ಯುವತಿ, 17 ವರ್ಷದ ಬಾಲಕನೊಂದಿಗೆ ಮದುವೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸದ್ಯ ಈ ಮದುವೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಯುವತಿ ಮೂಲತಃ ಬೆಂಗಳೂರು ನಿವಾಸಿಯಾಗಿದ್ದು, ಬಾಲಕ ಕಡೂರು ತಾಲ್ಲೂಕಿ ನ ಬ್ರಹ್ಮಸಮುದ್ರದವನು. ಇವರಿಬ್ಬರಿಬ್ಬರಿಗೆ ಫೇಸ್ಬುಕ್ ನಲ್ಲಿ ಪರಿಚಯವಾಗಿ, ಪ್ರೇಮವಾಗಿ ಇಬ್ಬರು ಮದುವೆಯಾಗಲು ನಿಶ್ಚಯಿಸಿದ್ದಾರೆ.
ಇದನ್ನೂ ಓದಿ:ಜಮ್ಮು ವಾಯು ಪಡೆ ನಿಲ್ದಾಣದ ಮೇಲೆ ಡ್ರೋನ್ ಬಾಂಬ್ ದಾಳಿ ಶಂಕೆ
ಆಗ ಎರಡು ಕುಟುಂಬಸ್ಥರು ಸೇರಿ ಬಾಲಕನ ಊರಿನಲ್ಲಿ ಜೂ.16ರಂದು ಮದುವೆ ಮಾಡಿದ್ದಾರೆ. ಬಾಲಕನನ್ನು ವಿವಾಹವಾಗಿರುವ ಯುವತಿ ವಿರುದ್ದ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಲ್ಯ ವಿವಾಹವಾಗಿರುವ ಸಂಬಂಧ ಜೂ.23ರಂದು ಮಕ್ಕಳ ಸಹಾಯವಾಣಿಗೆ ಕರೆ ಬಂದಿದ್ದು, ಸಖರಾಯಪಟ್ಟಣ ಪೋಲಿಸ್ ಸಿಬ್ಬಂದಿ ಅಂಗನವಾಡಿ ಮೇಲ್ವಿಚಾರಕಿ, ಗ್ರಾ.ಪಂ. ಕಾರ್ಯದರ್ಶಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಚಿಕ್ಕಮಗಳೂರು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:ಯೋಗೇಶ್ವರ್ ದೆಹಲಿ ಭೇಟಿ ನಿಗೂಢ; ಯಾರನ್ನೂ ಭೇಟಿಯಾಗದೆ ವಾಪಾಸು ಬಂದ ಸಚಿವ
ಬಾಲ್ಯ ವಿವಾಹ ಮತ್ತು ಕೋವಿಡ್ ನಿಯಮ ಉಲ್ಲಂಘನೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ