23 ಲಕ್ಷ ರೂ. ಉಳಿತಾಯ ಬಜೆಟ್‌

ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ರಿಂದ ಆಯವ್ಯಯ ಮಂಡನೆ­! ಚಪ್ಪಾಳೆ ತಟ್ಟಿ ಸದಸ್ಯರ ಒಪ್ಪಿಗೆ

Team Udayavani, Mar 18, 2021, 9:04 PM IST

Budjet

ಕಡೂರು: ಪುರಸಭಾ ಕನಕ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ ಅವರು 2021-2022ನೇ ಸಾಲಿನ 23,67,237 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಿದರು.

ನಂತರ ಮಾತನಾಡಿದ ಅವರು, ತಾವು ಈ ಹಿಂದೆ ಅಧ್ಯಕ್ಷರಾಗಿದ್ದ ಅವ ಧಿಯಲ್ಲಿ 2 ಬಾರಿ ಹಾಗೂ ಈಗಿನ ಆಯವ್ಯಯ ಸೇರಿ ಇದು ನನ್ನ 3ನೇ ಪುರಸಭೆಯ ಬಜೆಟ್‌ ಆಗಿದೆ. ನಿಮ್ಮೆಲ್ಲರ ಸಹಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. 25 ನಿಮಿಷಗಳ ಕಾಲ ಸುದೀರ್ಘ‌ವಾಗಿ ಆಯ-ವ್ಯಯ ಪತ್ರ ಓದಿದ ಅಧ್ಯಕ್ಷರು, ನಂತರ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿ ಬಜೆಟ್‌ನ ಒಪ್ಪಿಗೆ ಪಡೆದರು. ಆರಂಭದ ಶಿಲ್ಕು 84,41,991 ರೂ.ಗಳಿಂದ ಆರಂಭವಾಗಿರುವ ಈ ಬಾರಿಯ ಬಜೆಟ್‌ನಲ್ಲಿ ರಾಜಸ್ವ ಸ್ವೀಕೃತಿಗಳಿಂದ 15,25,70,477 ರೂ. ಹಾಗೆಯೇ, ರಾಜಸ್ವ ಪಾವತಿಗಳಿಂದ 15,17,95,229 ರೂ., ರಾಜಸ್ವ ಖಾತೆಯಲ್ಲಿನ ಹೆಚ್ಚುವರಿ ಬಾಬ್ತು 7,75,284 ರೂ. ತೋರಿಸಲಾಗಿದೆ ಎಂದರು.

ಬಂಡವಾಳ ಖಾತೆ: ಬಂಡವಾಳ ಸ್ವೀಕೃತಿ 11,10,50,002 ರೂ., ಬಂಡವಾಳ ಪಾವತಿಗೆ 1,17,90,004 ರೂ. ಖಾತೆಯ ಹೆಚ್ಚುವರಿ ಕೊರತೆ 68,50,002 ರೂ. ಗಳಾಗಿದೆ. ಅಸಾಧಾರಣ ಖಾತೆ: ಅಸಾಧಾರಣ ಸ್ವೀಕೃತಿಯಿಂದ 9,96,10,926 ರೂ., ಅಸಾಧಾರಣ ಪಾವತಿ 9,96,10926 ರೂ.ಆಗಿದ್ದು, ಒಟ್ಟಾರೆ ಈ ಬಾರಿಯ ಉಳಿತಾಯ 23,67,237 ರೂ.ಆಗಿ¨ದೆ ಎಂದು ಅಧ್ಯಕ್ಷರು ಘೋಷಿಸುತ್ತಿದ್ದಂತೆ ಸದಸ್ಯರು ಚಪ್ಪಾಳೆ ಮೂಲಕ ಸ್ವಾಗತಿಸಿದರು. ಪುರಸಭೆಯ ಆದಾಯ 36,32,22,405 ರೂ. ಎಂದು ನಿರೀಕ್ಷಿಸಲಾಗಿದೆ. ಅಂದಾಜು ವೆಚ್ಚ 36,92,97,159 ರೂ. ಎಂದು ಅಂದಾಜಿಸಲಾಗಿದೆ ಎಂದರು.

ಸದಸ್ಯ ಈರಳ್ಳಿ ರಮೇಶ್‌ ಬಜೆಟ್‌ ಮಂಡನೆಯ ನಂತರ ಅಧ್ಯಕ್ಷರಿಗೆ ಅಭಿನಂದಿಸಿ ಮಾತನಾಡಿ, ಕುಡಿಯುವ ನೀರಿಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕಾಗಿತ್ತು ಎಂಬ ಸಲಹೆ ನೀಡಿದರು. ವಾಣಿಜ್ಯ ಮಳಿಗೆಗಳಿಂದ ಆದಾಯ ಕೊರತೆಯಾಗಿರುವುದಾಗಿ ಗಮನ ಸೆಳೆದರು.

ಮತ್ತೋರ್ವ ಸದಸ್ಯ ಸೋಮಯ್ಯ ಬಜೆಟ್‌ ಸ್ವಾಗತಿಸಿ ಮಾತನಾಡಿ, ಆದಾಯ ಮೂಲಗಳನ್ನು ಹುಡುಕಬೇಕಾಗಿದೆ. ದಾರ್ಶನಿಕರ ಜಯಂತಿ ಮಹೋತ್ಸವಗಳಿಗೆ, ಕ್ರೀಡಾಕೂಟಗಳ ಧನ ಸಹಾಯಕ್ಕೆ ಒತ್ತು ನೀಡಬೇಕಾಗಿತ್ತು ಎಂದರು.

ಪುರಸಭೆಯ ವ್ಯವಹಾರಗಳಿಗೆ ದಲ್ಲಾಳಿಗಳಿಗೆ ಕಡಿವಾಣ ಹಾಕಿರುವುದು ಉತ್ತಮ ಬೆಳವಣಿಗೆ. ಸಾರ್ವಜನಿಕರು ನೇರವಾಗಿ ಬಂದು ಹೋಗಲು ವ್ಯವಸ್ಥೆ ಕಲ್ಪಿಸಿರುವುದನ್ನು ಸ್ವಾಗತಿಸುತ್ತೇವೆ ಎಂದರು.

ಸದಸ್ಯೆ ಸುಧಾ ಉಮೇಶ್‌ ಮಾತನಾಡಿ, ಮನೆ, ಕಟ್ಟಡ ಕಂದಾಯ ಬ್ಯಾಂಕಿಗೆ ಕಟ್ಟಿರುವವರು ತಮ್ಮ ರಸೀದಿ ಕಳೆದುಕೊಂಡಿದ್ದಾರೆ. ಪುರಸಭೆಯಲ್ಲಿ ಯಾವುದೇ ದಾಖಲೆ ದೊರಕುತ್ತಿಲ್ಲ ಎಂಬ ದೂರುಗಳು ಮನೆಯ ಮಾಲಿಕರಿಂದ ಬರುತ್ತಿದೆ. ಇದಕ್ಕೆ ಪರಿಹಾರವೇನು ಎಂದು ಪ್ರಶ್ನಿಸಿದರು.

ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ ಮಾತನಾಡಿ, ಬ್ಯಾಂಕಿನಿಂದ ಪುರಸಭೆಗೆ ರಸೀದಿ ತರಿಸಿ ಅದನ್ನು ವಾರ್ಡ್‌ವಾರು ಫೈಲ್‌ ಮಾಡಿಸಲಾಗುವುದು ಎಂದು ಉತ್ತರ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷ ವಿಜಯ ಚಿನ್ನರಾಜು, ಸದಸ್ಯರಾದ ಮಂಜುಳಾ ಶಾಮಿಯಾನ ಚಂದ್ರು, ಲತಾ ರಾಜು, ಯತೀಶ್‌, ಸುಬ್ಬಣ್ಣ, ಮೋಹನ್‌, ಭಾಗ್ಯ ರಂಗನಾಥ್‌, ಮನು, ಶ್ರೀಕಾಂತ್‌, ಇಕ್ಬಾಲ್‌, ಪುಷ್ಪಾ ಮಂಜುನಾಥ್‌, ಕಮಲ ವೆಂಕಟೇಶ್‌, ಹಾಲಮ್ಮ, ಜ್ಯೋತಿ ಆನಂದ್‌, ಸೈಯದ್‌ ಯಾಸೀನ್‌ ಮತ್ತು ಮುಖ್ಯಾ ಧಿಕಾರಿ ಎಚ್‌.ಎನ್‌.ಮಂಜುನಾಥ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.