ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಸಾವನ್ನಪ್ಪಿದ ಹಿಂಬದಿ ಸವಾರ
Team Udayavani, Nov 7, 2021, 12:30 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮೃತ ದುರ್ದೈವಿ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರು ಗ್ರಾಮದ ಜೀವನ್ (21) ಎಂದು ತಿಳಿದು ಬಂದಿದೆ.
ಬೈಕ್ನಲ್ಲಿ ಚಲಿಸುತ್ತಿರು ವೇಳೆ ಜೀವನ್ ತಲೆ ಮೇಲೆ ಮರ ಉರುಳಿಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
11 ಜನರು 6 ಬೈಕ್ಗಳಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿರುವ ವೇಳೆ ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಬೆಳ್ತಂಗಡಿಯಲ್ಲಿ ಐದು ಗ್ರೆನೇಡ್ಗಳು ಪತ್ತೆ: ನಿವೃತ್ತ ಸೇನಾಧಿಕಾರಿಯಿಂದ ದೂರು
ರವಿ ಎಂಬುವವರು ಬೈಕ್ ಚಲಾಯಿಸುತ್ತಿದ್ದು ಜೀವನ್ ಹಿಂಬದಿಯಲ್ಲಿ ಕುಳಿತಿದ್ದರು. ರವಿ ಅವರು ಹೆಲ್ಮೆಟ್ ಧರಿಸಿದ್ದು ಹಿಂಬದಿಯಲ್ಲಿ ಕುಳಿತಿದ್ದ ಜೀವನ್ ಅವರ ಮೇಲೆ ಏಕಾಏಕಿ ಮರ ಬಿದ್ದ ಪರಿಣಾಮ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ, ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ