ಬಿಂದಾಸ್ ಆಗಿ ಓಡಾಡುತ್ತಿದ್ದಾನೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ: ಏನಿದು ಘಟನೆ?
Team Udayavani, Jul 26, 2022, 12:45 PM IST
ಚಿಕ್ಕಮಗಳೂರು: ಚಿಂದಿ ಆಯಲು ಹೋಗಿ ರಾಜಕಾಲುವೆಯಲ್ಲಿ ವ್ಯಕ್ತಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಇದೀಗ ಬಿಂದಾಸ್ ಆಗಿ ಓಡಾಟ ನಡೆಸುತ್ತಿದ್ದಾನೆ. ನಾಪತ್ತೆಯಾಗಿದ್ದ ವ್ಯಕ್ತಿ ಸತ್ತು ಹೋಗಿರಬಹುದು ಎಂದುಕೊಂಡದ್ದ ಜನರು ಇದೀಗ ಶಾಕ್ ಆಗಿದ್ದಾರೆ.
ಜುಲೈ 12 ರಂದು ನಗರದ ಉಂಡೇದಾಸರಹಳ್ಳಿ ರಾಜ ಕಾಲುವೆ ಬಳಿ ಚಿಂದಿ ಆಯಲು ಹೋಗಿದ್ದ ಸುರೇಶ್ ಕೊಚ್ಚಿ ಹೋಗಿದ್ದ. ಈ ಮಾಹಿತಿ ತಿಳಿದು ಅಧಿಕಾರಿಗಳಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಮಳೆಯ ನಡುವೆಯೇ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧ ಕಾರ್ಯ ಮಾಡಿದ್ದರು. ಕೆಲ ಶೋಧ ಕಾರ್ಯ ನಡೆಸಿದ ಸಿಬ್ಬಂದಿ ನಂತರ ಕಾರ್ಯ ಸ್ಥಗಿತಗೊಳಿಸಿದ್ದರು.
ಇದನ್ನೂ ಓದಿ:ಕಾಂಗ್ರೆಸ್ ವ್ಯಕ್ತಿ ಉತ್ಸವ ಮಾಡುತ್ತಿದೆ, ನಾವು ಜನೋತ್ಸವ ಮಾಡುತ್ತೇವೆ: ಸಚಿವ ಸುನಿಲ್ ಕುಮಾರ್
ಆದರೆ ಇದೀಗ ಘಟನೆ ನಡೆದು 14 ದಿನಗಳ ಬಳಿಕ ಪ್ರತ್ಯಕ್ಷವಾಗಿರುವ ಸುರೇಶ್ ನಗರದಲ್ಲಿ ಓಡಾಡುತ್ತಿದ್ದಾನೆ. ಕೊಚ್ಚಿ ಹೋಗಿದ್ದ ವ್ಯಕ್ತಿಯ ಓಡಾಟ ಕಂಡು ಅಧಿಕಾರಿಗಳು ದಂಗಾಗಿದ್ದಾರೆ. ಸುರೇಶ್ ನನ್ನು ಕಂಡು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತರಾಟೆಗೆ ತೆಗೆದು ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ