ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಹುಲಿ ದಾಳಿ; ಹಸು ಬಲಿ
Team Udayavani, Aug 21, 2022, 4:22 PM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹುಲಿ ದಾಳಿ ನಿರಂತರವಾಗಿ ಮುಂದುವರಿದಿದೆ.
ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಎಂಬ ಗ್ರಾಮದಲ್ಲಿರುವ ಎಸ್ಟೇಟ್ ನಲ್ಲಿ ನಡೆದಿದೆ.
ಸಂತೋಷ್ ಎಂಬವರಿಗೆ ಸೇರಿದ ಈ ಹಸುವನ್ನು ಹುಲಿ ಕೊಂದಿದೆ. ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ನರಭಕ್ಷಕ ಹುಲಿ ಅಲ್ಲಲ್ಲಿ ಹಸುಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಹುಲಿಯನ್ನು ಹಿಡಿಯಬೇಕು ಎಂದು ರೈತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೆಲಸವಾಗದೇ ಇದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿರುವ ಅರಣ್ಯ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುತ್ತೇವೆ ಎಂದು ಗ್ರಾಮಸ್ಥರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ