![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಕಾಯ್ದೆ ವಿರುದ್ಧ ಧ್ವನಿ ಎತ್ತದ ಜನಪ್ರತಿನಿಧಿಗಳು: ಅಂಶುಮಂತ್
Team Udayavani, Sep 30, 2020, 7:00 PM IST
![ಕಾಯ್ದೆ ವಿರುದ್ಧ ಧ್ವನಿ ಎತ್ತದ ಜನಪ್ರತಿನಿಧಿಗಳು: ಅಂಶುಮಂತ್](https://www.udayavani.com/wp-content/uploads/2020/09/cm-tdy-1-20-620x372.jpg)
ಎನ್ ಆರ್ ಪುರ: ಜಿಲ್ಲೆಯ ಜನರ ಬದುಕಿಗೆ ಮಾರಕವಾಗಿರುವ ಪರಿಸರ ಸೂಕ್ಷ್ಮ ವಲಯದ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹಾಗೂ ತರೀಕೆರೆಯ ಬಿಜೆಪಿ ಶಾಸಕರು ಸದನದಲ್ಲಿ ಧ್ವನಿ ಎತ್ತಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ| ಕೆ.ಪಿ. ಅಂಶುಮಂತ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಟಿ.ಡಿ. ರಾಜೇಗೌಡರು ಸದನದಲ್ಲಿ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕ್ಷೇತ್ರದ ಜನರ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ ಎಂದರು. ಪರಿಸರ ಸೂಕ್ಷ್ಮವಲಯ, ಮೀಸಲು ಅರಣ್ಯ 4(1) ಅ ಸೂಚನೆ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆಯವರು ಮೌನ ವಹಿಸಿರುವುದು ರೈತಪರ ಕಾಳಜಿ ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು.
ಮೀಸಲು ಅರಣ್ಯ ಅಧಿಸೂಚನೆ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಿ ಬದ್ಧತೆಯಿಂದ ಅರಣ್ಯ ವ್ಯವಸ್ಥಾಪನಾ ಅ ಧಿಕಾರಿ ಸ್ಥಳಕ್ಕೆ ಬಂದುಅರ್ಜಿ ಸ್ವೀಕರಿಸಬೇಕೆಂದು ಆಗ್ರಹಿಸಿದರು. ಮೀಸಲು ಅರಣ್ಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಂಗ್ರೆಸ್ನಿಂದ ಜನರಿಗೆ ಅರ್ಜಿ ನೀಡಿರುವ ವಿಚಾರದಲ್ಲಿ ಭ್ರಷ್ಟಾಚಾರವಿದೆ ಎಂದಿರುವ ಮಾಜಿ ಶಾಸಕ ಜೀವರಾಜ್ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ದೂರಿದರು. ರೈತರಿಗೆ ಭೂಮಿ ಕೊಡುವ ವಿಚಾರದಲ್ಲಿ ದಾಖಲೆಗಳನ್ನು ತಿದ್ದಿ ಲೋಕಾಯುಕ್ತದಲ್ಲಿ ತನಿಖೆ ಎದುರಿಸುತ್ತಿರುವವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ತಾ ಕಳ್ಳ ಪರರ ನಂಬ ಎಂಬ ಮಾತಿನಂತಿದೆ ಎಂದು ಆರೋಪಿಸಿದರು.
2008ರಲ್ಲಿ ತಾಲೂಕಿನ ರಾವೂರು,ಲಿಂಗಾಪುರ ಆಡುವಳ್ಳಿ ಮತ್ತಿತರ ಗ್ರಾಮಗಳಲ್ಲಿ ಖಾತೆ ಇದ್ದ ನೂರಾರು ಎಕರೆ ಕಂದಾಯ ಭೂಮಿ ಮೀಸಲು ಹಾಗೂ ಕಿರು ಅರಣ್ಯಕ್ಕೆ ಸೇರಿಸುವಾಗ ಶಾಸಕರಾಗಿದ್ದ ಜೀವರಾಜ್ ಸದನದಲ್ಲಿ ಏನು ಮಾಡುತ್ತಿದ್ದರುಎಂದು ಪ್ರಶ್ನಿಸಿದರು. ಪ್ರಜಾಪ್ರಭುತ್ವದ ದೇಗುಲವಾಗಿರುವ ಸದನದಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಮೂವರು ಸಚಿವರು ಏನು ಮಾಡಿದ್ದರು ಎಂಬುದನ್ನು ಮಾಜಿ ಶಾಸಕರು ನೆನಪಿಸಿಕೊಳ್ಳಲಿ. ಶಾಸಕ ಟಿ.ಡಿ. ರಾಜೇಗೌಡರಿಗೆ ಅತ್ಯಂತ ಕನಿಷ್ಠ ಪದಗಳನ್ನು ಬಳಸಿ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿರುವ ಮಾಜಿ ಶಾಸಕರಿಗೆ ತಿಳುವಳಿಕೆ ಕೊರತೆಯಿದೆ ಎಂದು ಆರೋಪಿಸಿದರು. ಮುಖಂಡರಾದ ಗೇರುಬೈಲು ನಟರಾಜ್, ಸದಾಶಿವ, ಪ್ರಶಾಂತ್ ಶೆಟ್ಟಿ ಮತ್ತಿತರರಿದ್ದರು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![Chikkamagaluru; ಮದಗದ ಕೆರೆ ಬಳಿಕ ಕೋಡಿ ಬಿದ್ದ ಅಯ್ಯನ ಕೆರೆ](https://www.udayavani.com/wp-content/uploads/2024/07/ayyana-kere-150x83.jpg)
Chikkamagaluru; ಮದಗದ ಕೆರೆ ಬಳಿಕ ಕೋಡಿ ಬಿದ್ದ ಅಯ್ಯನ ಕೆರೆ
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.