ಕೋವಿಡ್ ತಡೆಗೆ ಮುನ್ನೆಚ್ಚರಿಕೆ ವಹಿಸಿ : ಎಸಿ
Team Udayavani, Apr 7, 2021, 7:53 PM IST
ತರೀಕೆರೆ: ಕೊರೊನಾ ಎರಡನೇ ಅಲೆ ಆರಂಭವಾಗಿದೆ. ರೂಪಾಂತರಿ ವೈರಸ್ ಸಹ ದಾಳಿ ಮಾಡುತ್ತಿದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸ್ಮಾಡಿಕೊಂಡು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದು ಉಪವಿಭಾಗಾಧಿಕಾರಿ ಎ.ಸಿ.ರೇಣುಕಾಪ್ರ ಸಾದ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಟಾಸ್ Rಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ವರ್ಷ ಮೊದಲ ಒಂದು ತಿಂಗಳು ಚಿಕ್ಕಮಗಳೂರು ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿತ್ತು. ಲಾಕ್ಡೌನ್ನಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಪುನಃ ಇಂತಹ ಪರಿಸ್ಥಿತಿ ಉಲ್ಬಣಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಸರಕಾರ ಹಲವಾರು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ನಮ್ಮ ಕೆಲಸ ನಿರ್ವಹಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಮಾರ್ಷಲ್ಗಳನ್ನು ನೇಮಕ ಮಾಡಲಾಗಿದೆ. ದಂಡ ವಿಧಿ ಸುವುದು ಅವರಲ್ಲಿ ಅರಿವು ಮೂಡಿಸುವ ಕಾರಣಕ್ಕಾಗಿ. ಜನರು ಸಾಮಾಜಿಕ ಅಂತರ ಕಾಪಾಡಿಕೊಂಡು ಸರಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು. ಜನಸಾಮಾನ್ಯರ ಹಿತದೃಷ್ಟಿಯಿಂದ ಕೆಲವು ಕಠಿಣ ನಿಯಮಗಳನ್ನು ನಾವು ಪಾಲಿಸಬೇಕಾಗಿದೆ ಎಂದರು.
ಮುಷ್ಕರ, ಧರಣಿ ಸತ್ಯಾಗ್ರಹ, ಜಾತ್ರೆ ಮತ್ತು ಸಂತೆಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ, ದೇವಸ್ಥಾನ ಇನ್ನಿತರ ಪೂಜಾ ಸ್ಥಳಗಳಲ್ಲಿ ಜನರು ಗುಂಪಾಗಿ ಹೋಗುವುದನ್ನೂ ನಿಷೇಧಿಸಿದೆ. ಜಾತ್ರೆ ಮಾಡುವವರು ಕೂಡ ಧಾರ್ಮಿಕ ವಿಧಿ- ವಿಧಾನಗಳನ್ನು ಮಾತ್ರ ಅನುಸರಿಸಬೇಕು. ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರು ಮಾಸ್ ಧರಿಸದೆ ಓಡಾಡುತ್ತಿದ್ದಾರೆ. ಅವರಲ್ಲಿ ಅರಿವು ಮೂಡಿಸಿ ನಂತರ ದಂಡ ವಿಧಿ ಸಿ ಹಳ್ಳಿಗಳಿಗೆ ವಲಸೆ ಬರುವವರ ಮೇಲೆ ನಿಗಾ ಇರಲಿ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ| ಚಂದ್ರಶೇಖರ್ ಮಾತನಾಡಿ, ಒಂದು ತಿಂಗಳ ಅವ ಧಿಯಲ್ಲಿ ತಾಲೂಕಿನಲ್ಲಿ 88 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇವರಲ್ಲಿ 52 ಸಕ್ರಿಯ ಪ್ರಕರಣವಾಗಿವೆ. ಕಾಶಿಯಾತ್ರೆ ತೆರಳಿ ಹಿಂತಿರುಗಿ ಬಂದವರು ಸೋಂಕಿತರಾಗಿದ್ದಾರೆ.
ಸೋಂಕಿತರನ್ನು ಪರೀಕ್ಷೆ ಒಳಪಡಿಸಿ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಮೊದಲ ಅಲೆಗಿಂತ ಎರಡನೇ ಕೊರೊನಾ ಸೋಂಕು ವೇಗವಾಗಿ ಹರುಡುತ್ತಿದೆ. ಇದನ್ನು ನಾವು ನಿಯಂತ್ರಿಸಬೇಕಾದಲ್ಲಿ ಜನಸಾಮಾನ್ಯರು ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿಕೊಳ್ಳಬೇಕ. 60 ವಯಸ್ಸು ಮೇಲ್ಪಟ್ಟವರು, ಮಧುಮೇಹಿಗಳು, ಅಸ್ತಮಾ, ಹೃದಯ ಸಂಬಂದಿ ಸಮಸ್ಯೆ ಇರುವವರು ಹೆಚ್ಚು ಎಚ್ಚರದಿಂದರಬೇಕು ಎಂದರು. ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರು ಇವರನ್ನು ಒಳಗೊಂಡಂತೆ 60 ವರ್ಷ ಮೇಲ್ಪಟ್ಟ 11487 ಜನರಿಗೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ನೀಡಲಾಗಿದೆ.
45 ವರ್ಷ ಮೇಲ್ಪಟವರನ್ನು ಗುರುತಿಸಲಾಗಿದ್ದು ಇಲ್ಲಿಯ ತನಕ 4161 ಜನರಿಗೆ ಲಸಿಕೆ ನೀಡಲಾಗಿದೆ. 63000 ಜನರಿಗೆ ಲಸಿಕೆ ನೀಡಬೇಕಾಗಿದೆ. ಮೊದಲ ಲಸಿಕೆ ಪಡೆದವರು 6 ವಾರದ ನಂತರ ಎರಡನೇ ಲಸಿಕೆ ಪಡೆಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 39 ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು ಜನರು ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು ಎಂದರು. ತಹಶೀಲ್ದಾರ್ ಸಿ.ಜಿ. ಗೀತಾ ಮಾತನಾಡಿ, ಏರುಗತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ.
ಈ ಹಿನ್ನಲೆಯಲ್ಲಿ ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಟೆಸ್ಟ್ಗಳನ್ನು ಹೆಚ್ಚಾಗಿ ಮಾಡಬೇಕಾಗಿದೆ. ಮಾರ್ಷಲ್ಗಳನ್ನು ನೇಮಕ ಮಾಡಿದ್ದು ದಿನನಿತ್ಯದ ವರದಿಯನ್ನು ಸಂಜೆಯೊಳಗೆ ನೀಡಬೇಕು. ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಇಲಾಖೆಯ ಅಧಿ ಕಾರಿಗಳು ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾ ಧಿಸಿ ಕೆಲಸ ನಿರ್ವಹಿಸಬೇಕಾಗಿದೆ ಎಂದರು. ಸಭೆಯಲ್ಲಿ ಡಿವೈಎಸ್ಪಿ ಏಗನಗೌಡರ್, ಇಒ ದೇವೇಂದ್ರಪ್ಪ ಇಲಾಖಾ ಅಧಿ ಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ