ಗೊಂದಿ ನೀರಾವರಿ ಯೋಜನೆ ಪೂರ್ಣಕ್ಕೆ ಕ್ರಮ
Team Udayavani, Nov 16, 2020, 8:11 PM IST
ಚಿಕ್ಕಮಗಳೂರು: ಗೊಂದಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಮುಂದಿನ 18 ತಿಂಗಳೊಳಗಾಗಿ ಬೈರಾಪುರ ಪಿಕಪ್ನಿಂದ ಮಾದರಸನ ಕೆರೆ ಹಾಗೂ ದಾಸರಹಳ್ಳಿ ಕೆರೆಗಳಿಗೆನೀರು ಒದಗಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಸಿ.ಟಿ. ರವಿ ಹೇಳಿದರು.
ನಗರದಲ್ಲಿ ಲಕ್ಯಾ ಹೋಬಳಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಜಿಲ್ಲೆಯ ಬಯಲುಸೀಮೆ ಪ್ರದೇಶಗಳಿಗೆ ನೀರು ತುಂಬಿಸುವುದು ಬಹಳ ದಿನಗಳ ಕನಸು. ಭದ್ರಾ ಜಲಾಶಯದಿಂದ 197 ಕೆರೆಗಳಿಗೆ ನೀರು ತುಂಬಿಸುವ 1,281.8 ಕೋಟಿ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿದ್ದು ಚಿಕ್ಕಮಗಳೂರು ತಾಲೂಕು ಲಕ್ಯಾ ಗ್ರಾಪಂ ವ್ಯಾಪ್ತಿಯಲ್ಲಿ ಮಾದರಸನ ಕೆರೆ ಹಾಗೂ ದಾಸರಹಳ್ಳಿ ಕೆರೆಗೆ ಬೈರಾಪುರ ಪಿಕಪ್ನಿಂದ ನೀರು ಒದಗಿಸುವ ಯೋಜನೆಗೆ ಟೆಂಡರ್ ಕರೆಯಲಾಗಿದೆ. ನ.27ಕ್ಕೆ ಟೆಂಡರ್ ಪ್ರಕ್ರಿಯೆ ಮುಗಿಯಲಿದ್ದು ಮುಂದಿನ 18 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.
ನೀರಾವರಿ ಸಮಿತಿ ಅಧ್ಯಕ್ಷ ಎಲ್.ಆರ್. ಈಶ್ವರಪ್ಪ ಮಾತನಾಡಿ, ಬಯಲುಸೀಮೆ ಜನರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಯೋಜನೆಗೆ ಸಿ.ಟಿ. ರವಿ ಅವರು, ಮುಖ್ಯಮಂತ್ರಿಗಳೊಂದಿಗೆಚರ್ಚಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿಸಿಕೊಟ್ಟಿರುವುದು ಈ ಭಾಗದ ರೈತರಿಗೆ ಹರ್ಷದಾಯಕ ವಿಷಯ ಎಂದರು. ಕೆರೆಗಳನ್ನು ತುಂಬಿಸುವುದರಿಂದ ಚಿಕ್ಕಮಗಳೂರುತಾಲೂಕು ಹಿರೇಗೌಜ, ಲಕುಮನಹಳ್ಳಿ, ಲಕ್ಯಾ ಗ್ರಾಪಂ ವ್ಯಾಪ್ತಿಯ ಭಾಗದ ಜನರಿಗೆ ಹಾಗೂ ಸಖರಾಯಪಟ್ಟಣ ಭಾಗದ ಹಳ್ಳಿಗಳಿಗೂಅನುಕೂಲವಾಗಲಿದ್ದು, ಮಾದರಸ ಕೆರೆಗೆ ಒಟ್ಟು ರೂ.17 ಕೋಟಿ ಹಾಗೂ ದಾಸರಹಳ್ಳಿ ಕೆರೆಯ ಕಾಮಗಾರಿಗೆ ರೂ.11 ಕೋಟಿ ಅನುದಾನ ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ಜಿಪಂ ಉಪಾಧ್ಯಕ್ಷ ಬಿ.ಜೆ. ಸೋಮಶೇಖರಪ್ಪ, ಜಿಪಂ ಸದಸ್ಯ ರವೀಂದ್ರ ಬೆಳವಾಡಿ, ವೀರಭದ್ರಪ್ಪ, ದಿನೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?