ಬಿಡಾಡಿ ದನ ನಿಯಂತ್ರಣಕ್ಕೆ ಕ್ರಮ


Team Udayavani, Aug 31, 2020, 7:20 PM IST

ಬಿಡಾಡಿ ದನ ನಿಯಂತ್ರಣಕ್ಕೆ ಕ್ರಮ

ಮೂಡಿಗೆರೆ: ಪಟ್ಟಣದಲ್ಲಿ ಜಾನುವಾರುಗಳ ಹಾವಳಿ ಅತಿಯಾಗಿದ್ದು ಅವುಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಸಾರ್ವಜನಿಕರು ಪಪಂಗೆ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಪಪಂ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಪಪಂ ಮುಖ್ಯಾಧಿಕಾರಿ ಕೃಷ್ಣೇಗೌಡ ಅವರು, ಜಾನುವಾರು ಮಾಲೀಕರು ತಮ್ಮ ಜಾನುವಾರುಗಳನ್ನು ತಮ್ಮ ಮನೆಯಲ್ಲೇ ಕಟ್ಟಿಹಾಕುವಂತೆ ಒಂದು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಇದಾವುದಕ್ಕೂ ಬೆಲೆ ನೀಡದೆ ಇದ್ದ ಗೋವು ಮಾಲೀಕರ ನಿರಾಸಕ್ತಿಯನ್ನು ಕಂಡ ಅಧಿಕಾರಿಗಳು ಕೂಡಲೇ ಕಾರ್ಯರೂಪಕ್ಕೆ ಇಳಿದು ಜಾನವಾರು ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಬೀದಿಗಳಲ್ಲಿ ಅಲೆಯುತ್ತಿದ್ದ ಕೆಲವು ಜಾನುವಾರುಗಳಲ್ಲಿ ಕೈಗೆ ಸಿಕ್ಕ ಐದು ಜಾನುವಾರುಗಳನ್ನು ಕಚೇರಿಯ ಆವರಣದಲ್ಲೆ ಕೂಡಿ ಹಾಕಿದ್ದರು. ರಾಸುಗಳ ಮಾಲೀಕರು ಕಚೇರಿಗೆ ಬಂದು ಬಿಡಿಸಿಕೊಂಡು ಹೋಗದೇ ಇದ್ದಲ್ಲಿ ಕೂಡಿಟ್ಟಿರುವಂತಹ ರಾಸುಗಳನ್ನು ಗೋಶಾಲೆಗೆ ಕಳಿಸಿ ಕೊಡುವುದಾಗಿ ಮಾಹಿತಿ ನೀಡಿದ್ದರು. ಜಾನುವಾರುಗಳನ್ನು ಕೂಡಿ ಹಾಕಿ ಒಂದು ವಾರವಾದರೂ ಜಾನುವಾರುಗಳ ಮಾಲೀಕರು ಬಾರದೆ ಇದ್ದುದನ್ನು ಕಂಡು ಕೂಡಿಹಾಕಿದ್ದ ಜಾನುವಾರುಗಳನ್ನು ಹಾಸನ ಜಿಲ್ಲೆಯ ಬಾಣಾವಾರದ ಶ್ರೀ ಭಗವಾನ್‌ ಗೋಶಾಲೆ ಟ್ರಸ್ಟ್‌ಗೆ ಕಳುಹಿಸಿಕೊಡಲಾಗಿದೆ.

ಐದು ಜಾನುವಾರುಗಳಲ್ಲಿ ಮೂರು ಹಸು, ಎರಡು ಹೋರಿಗಳಿದ್ದು ಅವುಗಳನ್ನು ಮುತುವರ್ಜಿಯಿಂದ ಬಿಟ್ಟು ಬಂದಿದ್ದು. ಇನ್ನು ಮುಂದಿನ ದಿನಗಳಲ್ಲಿ ಪಟ್ಟಣದ ಬೀದಿಗಳಲ್ಲಿ ಜಾನುವಾರುಗಳು ಓಡಾಡುವುದು ಕಂಡರೆ ಅವುಗಳನ್ನು ಗೋಶಾಲೆಗೆ ಕಳಿಸುವುದಾಗಿ ಮುಖ್ಯಾ ಧಿಕಾರಿ ಕೃಷ್ಣೇಗೌಡರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಕೆಲವು ಮಾಲೀಕರು ಹಸುವಿನ ಹಾಲನ್ನು ಕರೆದುಕೊಂಡು ನಂತರ ಅವುಗಳನ್ನು ರಸ್ತೆಗೆ ಬಿಡುತ್ತಿದ್ದಾರೆ. ಇದರಿಂದಾಗಿ ವಾಹನಗಳ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತಿದೆ. ಕೆಲವು ಅಪರಿಚಿತರು ರಾತ್ರಿ ಸಮಯದಲ್ಲಿ ಬೀದಿಯಲ್ಲಿರುವಂತಹ ಜಾನುವಾರುಗಳನ್ನು ಕಸಾಯಿಖಾನೆಗೆ ಒಯ್ಯುತ್ತಿರುವ ಪ್ರಕರಣಗಳು ಹೆಚಾಗಿದ್ದು ಗೋವುಗಳ ರಕ್ಷಣೆ ಪ್ರತಿಯೊಬ್ಬರದ್ದಾಗಿದ್ದು ಅವುಗಳನ್ನು ಉಳಿಸುವ ಸದುದ್ದೇಶದಿಂದ ಗೋಶಾಲೆಗೆ ಕಳಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕರಾದ ಶರತ್‌ ಕುಮಾರ್‌, ಮಮತ, ಆರೋಗ್ಯಾಧಿಕಾರಿ ಪ್ರಕಾಶ್‌, ಕೃಷ್ಣಯ್ಯ ಮತ್ತಿತರರು ಇದ್ದರು

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.