ನಿರಾಶ್ರಿತರಿಗೆ ಭೂಮಿ ಮಂಜೂರು ಮಾಡಲು ಕ್ರಮ

ಅತಿವೃಷ್ಟಿಯಿಂದ ಭೂಮಿ- ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೆರವು ನೀಡಲು ಸಭೆಯಲ್ಲಿ ನಿರ್ಧಾರ

Team Udayavani, May 3, 2022, 2:46 PM IST

mudigere

ಮೂಡಿಗೆರೆ: ಅತಿವೃಷ್ಟಿಯಿಂದ ಮನೆ ಮತ್ತು ಭೂಮಿ ಕಳೆದುಕೊಂಡ ಮಲೆಮನೆ ಮತ್ತು ಮದುಗುಂಡಿ ಭಾಗದ ನಿರಾಶ್ರಿತರಿಗೆ ಭೂಮಿ ಮಂಜೂರು ಮಾಡುವ ಹಿನ್ನೆಲೆಯಲ್ಲಿ ಸೋಮವಾರ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಹಾಗೂ ನಿರಾಶ್ರಿತರ ಸಭೆ ನಡೆಸಲಾಯಿತು.

ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಮನೆ, ಭೂಮಿ ಕಳೆದುಕೊಂಡ ನಿರಾಶ್ರಿತರಿಗೆ ಈಗಾಗಲೇ ಬೈದುವಳ್ಳಿ ಸರ್ವೆ ನಂ. 142ರಲ್ಲಿ 20 ಎಕರೆ ಭೂಮಿ ಗುರುತು ಮಾಡಲಾಗಿದೆ. ಅಲ್ಲದೆ ಜಿ.ಹೊಸಳ್ಳಿ ಸರ್ವೇ ನಂ.128 ಮತ್ತು 133 ಮತ್ತು ಹೊಯ್ಸಳಲು ಸರ್ವೆ ನಂ. 105ರಲ್ಲಿ ಭೂಮಿ ಗುರುತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ನಮಗೆ ಬೇರೆ ಸ್ಥಳದಲ್ಲಿ ಭೂಮಿ ನೀಡಬೇಕು. ಬಾಡಿಗೆ ಮನೆಯಲ್ಲಿ 36 ತಿಂಗಳು ಕಾಲ ಕಳೆದಿದ್ದೇವೆ. ಆದರೆ ಕೇವಲ 25 ಸಾವಿರ ರೂ. ಮಾತ್ರ ನಮಗೆ ಬಂದಿದೆ. ಬಾಡಿಗೆ ಹಣ ಮತ್ತು ಕೃಷಿ ಚಟುವಟಿಕೆಗೆ ಅನುಕೂಲವಾಗುವ ಭೂಮಿಯನ್ನೇ ನೀಡಬೇಕೆಂದು ನಿರಾಶ್ರಿತರು ಮನವಿ ಮಾಡಿದರು.

ತಹಶೀಲ್ದಾರ್‌ ನಾಗರಾಜು ಮಾತನಾಡಿ, ಬಣಕಲ್‌ ಸರ್ವೆ ನಂ. 353ರಲ್ಲಿ ಗೋಮಾಳ ಮತ್ತು ನೆಡುತೋಪು ಇರುವ 58 ಎಕರೆ ಬಿ.ಹೊಸಳ್ಳಿ ಸರ್ವೆ ನಂ. 65ರಲ್ಲಿ 51 ಎಕರೆ ಹುಲ್ಲುಬನ್ನ ಕರಾಬ್‌ ಜಾಗವಿದೆ. ಈ ಎರಡೂ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಪ್ಲಾಂಟೇಶನ್‌ ಮಾಡಲಾಗಿದೆ. ಇದನ್ನು ನಿರಾಶ್ರಿತರಿಗೆ ನೀಡಲು ಈ ಹಿಂದೆ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿತ್ತು. ಅರಣ್ಯ ಇಲಾಖೆ ಪ್ಲಾಂಟೇಷನ್‌ ತೆರವುಗೊಳಿಸಿದರೆ ಈ ಭೂಮಿಯನ್ನೇ ನೀಡಬಹುದು ಎಂದು ಶಾಸಕರ ಗಮನಕ್ಕೆ ತಂದಾಗ, ಈ ಭೂಮಿಯನ್ನು ಪಡೆಯಲು ನಿರಾಶ್ರಿತರು ಒಪ್ಪಿಗೆ ಸೂಚಿಸಿದರು.

ಆಗ ಶಾಸಕ ಎಂ.ಪಿ. ಕುಮಾರಸ್ವಾಮಿ ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾ ಧಿಕಾರಿಗೆ ಕರೆ ಮಾಡಿ, ಈ ವಾರದಲ್ಲೇ ಬಣಕಲ್‌ ಮತ್ತು ಬಿ.ಹೊಸಳ್ಳಿಯಲ್ಲಿರುವ ಭೂಮಿಯನ್ನು ಪರಿಶೀಲಿಸಿ, ಅರಣ್ಯ ಇಲಾಖೆ ಮಾಡಿರುವ ಪ್ಲಾಂಟೇಶನ್‌ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬಳಿಕ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಬಾಡಿಗೆ ಹಣವನ್ನು ನೀಡಲು ಈಗಾಗಲೇ ಜಿಲ್ಲಾ ಧಿಕಾರಿಗಳ ಗಮನಕ್ಕೆ ತರಲಾಗಿದೆ. ಸರಕಾರ ಕೇವಲ 2 ಎಕರೆ ಮಾತ್ರ ಭೂಮಿ ನೀಡಲು ಆದೇಶಿಸಿದೆ. ಆದರೆ ರೈತರಿಗೆ ಅನ್ಯಾಯವಾಗಬಾರದೆಂದು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು ಸಾಧ್ಯವಾದಷ್ಟು ಹೆಚ್ಚುವರಿ ಭೂಮಿ ನೀಡಲು ಪ್ರಯತ್ನಿಸುತ್ತೇನೆ. ಭೂಮಿ ಮಂಜೂರು ಮಾಡಿದ ಬಳಿಕ ಕೃಷಿ ಚಟುವಟಿಕೆಗೆ ಅಗತ್ಯವಾದ ಬೋರ್‌ವೆಲ್‌ ಕೊರೆಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ತಹಶೀಲ್ದಾರ್‌ ನಾಗರಾಜು, ನಿರಾಶಿತರಾದ ರಾಜು, ಸತೀಶ್‌, ಅಶ್ವತ್‌, ರಾಜೇಶ್‌, ಚಂದ್ರೇಗೌಡ, ಬಿಜೆಪಿ ಮುಖಂಡರಾದ ಪರೀಕ್ಷಿತ್‌ ಜಾವಳಿ, ಚಂದ್ರು ಸಾಲಿಯಾನ್‌, ವಿಕಾಸ್‌ ಹಂತೂರು ಮತ್ತಿತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.